Breaking News

ಚಾಮರಾಜ ನಗರ

ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

ಚಾಮರಾಜನಗರ: ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ ಒಂದೂವರೆ ಲಕ್ಷ ಕ್ಯೂಸೆಕ್‍ಗೂ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ಹೊಗೇನಕಲ್‍ನಲ್ಲಿ ಜಲವೈಭವವೇ ಸೃಷ್ಟಿಯಾಗಿದೆ. ಈ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ, ವಿಶಾಲವಾಗಿ ಹರಿಯುತ್ತಾ ಹೊಗೇನಕಲ್ ಬಳಿ ಭೋರ್ಗೆರೆದು ಹಾಲ್ನೊರೆಯಂತೆ ಧುಮ್ಮಿಕ್ಕುವ ದೃಶ್ಯ ವರ್ಣನಾತೀತವಾಗಿದೆ. ಕೊಡಗಿನಲ್ಲಿ ಹುಟ್ಟಿ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹರಿದು ಹೊಗೇನಕಲ್ ಬಳಿ ತಮಿಳುನಾಡಿಗೆ ಪ್ರವೇಶಿಸುವ ಕಾವೇರಿಯ ಸೊಬಗು ಈಗ ಇಮ್ಮಡಿಗೊಂಡಿದೆ. …

Read More »

ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

ಚಾಮರಾಜನಗರ: ರಸ್ತೆ ಬದಿಯಲ್ಲಿದ್ದ ಬೃಹತ್ ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದ ಹೊರ ವಲಯದ ಮಲೆಮಹದೇಶ್ವರ ಕ್ರೀಡಾಂಗಣದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಗಾಯಗೊಂಡವರನ್ನು ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಜೋಸೆಫ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಇಂದು ಬೆಳಗ್ಗೆ 6:30ರ ಸುಮಾರಿಗೆ ಮಾರ್ಟಳ್ಳಿಯಿಂದ ಹನೂರಿಗೆ ಬೈಕಿನಲ್ಲಿ ಹೊರಟಿದ್ದರು. ಬೈಕ್ ಅಜ್ಜೀಪುರ ರಸ್ತೆಯ ಕ್ರೀಡಾಂಗಣದ …

Read More »

ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ

ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್​ಡೌನ್​​ ಕಾರಣದಿಂದ ಯಾರೂ ಗುಂಪುಗೂಡದಂತೆ ನಿನ್ನೆ ನಿಷೇಧಾಜ್ಞೆ ಹೇರಲಾಗಿತ್ತು. ಈ ಹಿನ್ನೆಲೆ ನಿನ್ನೆ ಸಂಜೆ ಕುದೇರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಗ್ರಾಮದ ಪಡಸಾಲೆ ಮೇಲೆ ಗುಂಪಾಗಿ ಕುಳಿತಿದ್ದು, ಪೊಲೀಸ್ ​ಜೀಪ್​ ಕಂಡೊಡನೆ ಗುಂಪಿನಲ್ಲಿದ್ದ …

Read More »

ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು……….

ಚಾಮರಾಜನಗರ: ಕೊರೊನಾ ಎಪೆಕ್ಟ್ ಸರಕು ಸಾಗಣೆ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಹೀಗಾಗಿ ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು ನಿರ್ಭೀತಿಯಿಂದ ಓಡಾಟ ಮಾಡುತ್ತಿವೆ. ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳು ಹಿಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿವೆ. 8ಕ್ಕೂ ಹೆಚ್ಚು ಆನೆಗಳು ಸುಮಾರು 2 ಕಿಲೋ ಮೀಟರ್ ತನಕ ರಸ್ತೆಯಲ್ಲೇ ನಡೆದು ಹೋಗಿವೆ. ಸ್ಥಳದಲ್ಲಿದ್ದವರು ಆನೆಗಳು ನಡೆದುಕೊಂಡು ಹೋಗುತ್ತಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಕಡಿಮೆಯಾಗದ ಕಾರಣ ಸರಕು ಸಾಗಣೆ …

Read More »

ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್​ಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ನೆಲೆಸಿರುವ ಮಾದಪ್ಪನ ದೇಗುಲವನ್ನು ಬಂದ್​ ಮಾಡುವಂತೆ ಆಗ್ರಹಿಸಿ ನೂರಾರು ಜನರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಗೆ ದಿನ‌ನಿತ್ಯ ಭೇಟಿ ನೀಡುವವರ ಸಂಖ್ಯೆ ಸಾವಿರಾರು. ಕರೊನಾ ಭೀತಿಯ ನಡುವೆಯೂ ರಾಜ್ಯ ಮತ್ತು ತಮಿಳುನಾಡು ಭಾಗದಿಂದ ಮಾದಪ್ಪನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಲೇ ಇದ್ದಾರೆ. ಪರಿಣಾಮ ಸ್ಥಳೀಯರಲ್ಲೂ ಸೋಂಕಿನ ಛಾಯೆ ಆವರಿಸಿದೆ. ಹಾಗಾಗಿ ಎಲ್ಲೆಡೆ …

Read More »

ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್…………….

ಚಾಮರಾಜನಗರ: ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗರಾಜಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಪಾಳು ಬಾವಿಗೆ ಕಳೆದ ಐದು ದಿನಗಳ ಹಿಂದೆ ಚಿರತೆಯೊಂದು ಬಿದ್ದಿತ್ತು. ವಿಷಯ ತಿಳಿದ ಬಂಡೀಪುರ ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬಾವಿಯ ಪೊಟರೆಯೊಂದಕ್ಕೆ ಚಿರತೆ ಸೇರಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಹೊರಬರಲಿಲ್ಲ. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗೆ …

Read More »

ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ : ಕೆ.ಎಸ್.ಈಶ್ವರಪ್ಪ

ಹನೂರು: ಪ್ರಪಂಚವು ಇಂದು ಕೊರೋನೊ ಎಂಬ ಮಹಾಮಾರಿಯಿಂದ ತತ್ತರಿಸಿರುವಾಗ ನಮ್ಮ ದೇಶದ ಜನ ಸಂಕಷ್ಟದಲ್ಲಿದ್ದಾರೆ ಇವರಿಗೆ ನರೇಗಾ ಯೋಜನೆ ಸಂಜೀವಿನಿಯಾಗಿದ್ದು ಬಡ ಕುಟುಂಬಗಳ ನಿವಾ೯ಹಣೆಗೆ ಸಹಕಾರಿಯಾಗಿದೆ. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾ.ನಗರ ಜಿಲ್ಲೆಯ ಪ್ರಸಿದ್ದ ಪುಣ್ಯಕ್ಷೇತ್ರ ಶ್ರೀ ಮಲೈ ಮಹದೇಶ್ವರಬೆಟ್ಟ ಮಾದಪ್ಪನ ಸನ್ನಿಧಿಗೆ ಬೇಟಿ ನೀಡಿ ದಶ೯ನ ಮಾಡಿದ ಅವರು ಮ.ಬೆಟ್ಠ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ನರೇಗಾ ಕಾಮಾಗಾರಿ ವೀಕ್ಷಣೆ ಮಾಡಿ ರಸ್ತೆ …

Read More »

ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಚಾಮರಾಜನಗರ: ಕರೊನಾ ಭೀತಿ ಹಿನ್ನೆಲೆಯಲ್ಲಿ ಜೂ.21ರವರೆಗೂ ಮಲೆ ಮಹದೇಶ್ವರ ದೇವಾಲಯಕ್ಕೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದ್ರೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿಯಮ ಉಲ್ಲಂಘಿಸಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದುಕೊಂಡಿದ್ದಾರೆ. ಕೋವಿಡ್19 ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಲೆ ಮಹದೇಶ್ವರ ದೇವಾಲಯಕ್ಕೆ ಜೂ.19ರಿಂದ 21ರವರೆಗೆ ಸಾರ್ವಜನಿಕರು ಹಾಗೂ ಭಕ್ತರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವ ಕೆ.ಎಸ್. …

Read More »

ಇದೀಗ ಹಸಿರು ವಲಯದಲ್ಲಿರುವ ಗಡಿ ಜಿಲ್ಲೆಗೂ ಮಹಾಮಾರಿ ಕೊರೊನಾ ಬರುವ ಆತಂಕ……..

ಚಾಮರಾಜನಗರ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದೀಗ ಹಸಿರು ವಲಯದಲ್ಲಿರುವ ಗಡಿ ಜಿಲ್ಲೆಗೂ ಮಹಾಮಾರಿ ಕೊರೊನಾ ಬರುವ ಆತಂಕ ಈಗ ಹೆಚ್ಚಾಗಿದೆ. ಮಹಾರಾಷ್ಟ್ರದ ಪುಣೆಯಿಂದ ಬಂದ ಕುಟುಂಬದಲ್ಲಿನ ಯುವಕನಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮಹಾರಾಷ್ಟ್ರದಿಂದ ಬಂದಿದ್ದ 22 ವರ್ಷದ ಮೆಡಿಕಲ್ ವಿದ್ಯಾರ್ಥಿ ಒಬ್ಬನಿಗೆ ಬೇಧಿ, ಹೊಟ್ಟೆನೋವು, ವಿಪರೀತ ಕೆಮ್ಮು ಕಾಣಿಸಿಕೊಂಡಿದೆ. ಈ ಮೂಲಕ ಚಾಮರಾಜನಗರಕ್ಕೂ ಕೊರೊನಾ ಬರುತ್ತಾ ಎಂಬ ಆತಂಕ ಜಿಲ್ಲೆಯ ಜನರಲ್ಲಿ …

Read More »

ನೀರಿನ ಬೃಹತ್ ಟ್ಯಾಂಕ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ.

ಚಾಮರಾಜನಗರ: ನೀರಿನ ಬೃಹತ್ ಟ್ಯಾಂಕ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಚಾಮರಾಜನಗರದ ತಾಲೂಕು ಕಚೇರಿ ಹಿಂಭಾಗದಲ್ಲಿ ಘಟನೆ ನಡೆದಿದ್ದು, ತಾಲೂಕು ಕಚೇರಿ ಹಿಂಭಾಗದಲ್ಲಿರುವ ಚನ್ನಿಪುರಮೋಳೆ ಹೊಸಬಡಾವಣೆಯಲ್ಲಿದ್ದ ನೀರಿನ ಬೃಹತ್ ಟ್ಯಾಂಕ್ ಕುಸಿದಿದೆ. ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಪಕ್ಕದ ಮನೆಗಳ ಮೇಲೆ ಕುಸಿದುಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಇದು ತುಂಬಾ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ಆಗಿದ್ದು, 50 ಸಾವಿರ …

Read More »