Breaking News

ಚಿಕ್ಕ ಮಂಗಳೂರು

ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ.

ಚಿಕ್ಕಮಗಳೂರು: ಕೊರೊನಾ ಹರಡುವಿಕೆ ಹಿನ್ನೆಲೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ. ಪ್ರವಾಸಿಗರು ಕಾರು, ಬೈಕ್, ಜೀಪ್‍ನಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದಾಗಿದ್ದು, ದೊಡ್ಡ ವಾಹನಗಳು, ಖಾಸಗಿ ಬಸ್‍ಗಳಲ್ಲಿ ಬರುವುದನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿ ತಾಣಗಳಲ್ಲಿ ಗುಂಪಾಗಿ …

Read More »

38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ.

ಚಿಕ್ಕಮಗಳೂರು: 38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ. ಆಕೆಗೆ ಇತನೇ ಬೇಕು ಎನ್ನುವುದು ಮುಖ್ಯವಲ್ಲ. ಆದರೆ ಈತ ಇವಳೇ ಬೇಕು, ಬಾಳು ಕೊಡುತ್ತೇನೆ ಎನ್ನುವುದು ವಿಶೇಷದಲ್ಲಿ ವಿಶೇಷ. ಕಂಬಿಹಳ್ಳಿ ಚಂದ್ರುಗೂ ಈಕೆ ಹೆಂಡತಿ. ಹನಿಕೆ ಬಸವರಾಜನ ಪ್ರೇಮಿಯೂ ಈಕೆ. ಬೆಂಗಳೂರಿನ ಬೇಕರಿಯ ಕಿರಣನ ಮನದರಸಿಯೂ ಹೌದು. ರಮೇಶನ ರಾಧೆಯೂ ಇವಳೇ. ತುಕಾರಂನ ಮಡದಿಯೂ ಇದೇ ಗಟ್ಟಿಗಿತ್ತಿ. ಈಗ ರಂಗೇನಹಳ್ಳಿ ಚಂದ್ರುವಿನ ಚಕೋರಿ.   38ರ ಅಸುಪಾಸಿಗೆ …

Read More »

ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಮಾಂಗಲ್ಯ ಸರವಿತ್ತು, ಮೃತದೇಹದ ಮೇಲೆ ಇರಲಿಲ್ಲ!

ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಕೊರಳಲ್ಲಿ ಮಾಂಗಲ್ಯ ಸರವಿತ್ತು. ಆದರೆ ಮೃತರಾದ ಬಳಿಕ ಮೃತದೇಹ ಹೊರ ತಂದಾಗ ಮಾಂಗಲ್ಯ ಸರ ಹಾಗೂ ಕೈಯಲ್ಲಿದ್ದ ಉಂಗುರ ಇಲ್ಲದಂತಾಗಿತ್ತು. ಈ ಕುರಿತು ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದಾಗ ಗೊತ್ತಿಲ್ಲ ಎಂದಿದ್ದರು. ಆದರೆ 13 ದಿನದ ಬಳಿಕ ಕಳ್ಳನೇ ಮಾಂಗಲ್ಯ ಸರ ಇಟ್ಟು ಹೋದನಂತೆ. ಈ ಘಟನೆ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದಿತ್ತು. ನಾಲ್ಕೈದು ತಿಂಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರೋ ವೈದ್ಯರು, …

Read More »

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …

Read More »

ಭರ್ಜರಿ ಮಳೆಯಲ್ಲೇ ಗೌರಿ ಪೂಜೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಬೆಳಗ್ಗೆಯಿಂದ ಮತ್ತೆ ಶುರುವಿಟ್ಟಿದ್ದಾನೆ. ವಾರದ ನಂತರ ಇದ್ದಕ್ಕಿದ್ದಂತೆ ಮಳೆಯಾಗಿರುವುದು ಜನರನ್ನು ಪರದಾಡುವಂತೆ ಮಾಡಿದೆ. ಇದು ಗೌರಿ ಹಬ್ಬಕ್ಕೂ ತಟ್ಟಿದ್ದು, ಮಹಿಳೆಯರು ಮಳೆಯನ್ನೂ ಲೆಕ್ಕಿಸದೆ ಪೂಜೆ ನೆರವೇರಿಸಿದ್ದಾರೆ.ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಸುರಿಯುತ್ತಿರೋ ಮಳೆಯಲ್ಲೇ ಗೌರಿ ಹಬ್ಬಕ್ಕೆ ಮುಂದಾಗಿರೋ ಮಲೆನಾಡಿಗರು, ವರುಣನ ಅಬ್ಬರದ ನಡುವೆಯೇ ಗೌರಿಯನ್ನು ಪೂಜೆ ಮಾಡಿ ಮನೆಗೆ …

Read More »

ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?

ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ. ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ. ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್​ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! …

Read More »

ಒಂದು ವರ್ಷದಲ್ಲಿ ಎಮ್ಮೆ ಕಾಂತಣ್ಣ ಒಟ್ಟು ಏಳು ಹಸುಗಳನ್ನು ಕಳೆದುಕೊಂಡಿದ್ದಾರೆ.

ಚಿಕ್ಕಮಗಳೂರು: ಕಳೆದ ಹತ್ತು ತಿಂಗಳಲ್ಲಿ ಏಳು ಹಸುಗಳನ್ನು ಕಳೆದುಕೊಂಡಿದ್ದೇನೆ. ದನಗಳ್ಳರನ್ನು ಹಿಡಿದುಕೊಟ್ಟರೆ ನಿಂತ ಜಾಗದಲ್ಲಿ ನಾನೇ ಅವರಿಗೆ 50 ಸಾವಿರ ಹಣ ಕೊಡುತ್ತೇನೆ ಎಂದು ಚಿಕ್ಕಮಗಳೂರು ತಾಲೂಕಿನ ತೇಗೂರಿನ ರೈತ ಕಾಂತರಾಜ್ ಆಫರ್ ಕೊಟ್ಟಿದ್ದಾರೆ. ದನಗಳ್ಳರನ್ನು ಯಾರೇ ಹಿಡಿದುಕೊಟ್ಟರು ಅವರಿಗೆ ಹಣ ಕೊಡುತ್ತೇನೆ ಎಂದು ಘೋಷಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ರೈತ ಕಾಂತರಾಜು ಅಲಿಯಾಸ್ ಎಮ್ಮೆ ಕಾಂತಣ್ಣರವರ ಎಂಟೂವರೆ ತಿಂಗಳ ಗರ್ಭಿಣಿ ಹಸುವನ್ನು ದನಗಳ್ಳರು ಸ್ಕಾರ್ಪಿಯೋ ಕಾರಿನಲ್ಲಿ ತುಂಬಿಕೊಂಡು …

Read More »

ಚಿಕ್ಕಮಗಳೂರಿನಲ್ಲಿ 4 ದಿನಗಳಿಂದ ಧಾರಾಕಾರ ಮಳೆ; ಕಳಸ- ಹೊರನಾಡು ಸಂಪರ್ಕ ಬಂದ್

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …

Read More »

ವರ್ಷದ ಹಿಂದೆ ಕಟ್ಟಿದ ಮನೆ ಬೀಳುವ ಆತಂಕ- ಕೊಚ್ಚಿ ಹೋದ ಅಡಿಪಾಯ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಇದೀಗ ಕಳೆದವರ್ಷವಷ್ಟೇ ಕಟ್ಟಿದ ಮನೆ ಸಹ ಬೀಳುವ ಹಂತ ತುಲುಪಿದ್ದು, ಅಡಿಪಾಯ ಕೊಚ್ಚಿ ಹೋಗಿದೆ.ಜಿಲ್ಲೆಯ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ಮನೆಯ ಅಡಿಪಾಯ ಕುಸಿದು ಬೀಳುವ ಹಂತ ತಲುಪಿದೆ. ನಾಗಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಮೂಡಿಗೆರೆಯಲ್ಲಿ ಮಳೆ-ಗಾಳಿ ಅಬ್ಬರದ ಹಿನ್ನೆಲೆ ಮಣ್ಣು ಹೆಚ್ಚು ಕುಸಿಯುತ್ತಿದೆ. ಹೀಗಾಗಿ ಅಡಿಪಾಯ ಸಹ ಕೊಚ್ಚಿ ಹೋಗಿದೆ. ಕಳೆದ ವರ್ಷ ಕಟ್ಟಿದ ಮನೆ, ಇದೀಗ …

Read More »

ಚಾರ್ಮಾಡಿಯಲ್ಲಿ ರಸ್ತೆ ಮೇಲೆ ಬೀಳುತ್ತಿವೆ ಬಂಡೆಗಳು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಂತೂ ಕಳೆದ 2 ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಬೃಹತ್ ಬಂಡೆಗಳು ಉರುಳಿ ಬೀಳುತ್ತಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಬಂದ್ ಆಗಿದೆ. ಈಗ ಮೂಡಿಗೆರೆ ತಾಲೂಕಿನ ಕುದ್ರೆಗುಂಡಿ ಬಳಿ ರಸ್ತೆಗೆ ಮರ ಬಿದ್ದ ಪರಿಣಾಮ ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ. ರಾತ್ರಿ ಮೂರು ಗಂಟೆಯಿಂದ ವಾಹನಗಳು ನಿಂತಲ್ಲೇ ಇದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ …

Read More »