Breaking News

ಚಿತ್ರದುರ್ಗ

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ.? ಬಯಲಾಗುತ್ತಾ ಅಸಲಿ ಸತ್ಯ.?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. …

Read More »

ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ

ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್‌ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …

Read More »

BIG NEWS: ಸಾಯೋರು ಎಲ್ಲಾದರೂ ಸಾಯಲಿ; ಬಿಜೆಪಿ ಶಾಸಕನ ದರ್ಪಕ್ಕೆ ಅವಾಕ್ಕಾದ ಆರೋಗ್ಯಾಧಿಕಾರಿ

ಚಿತ್ರದುರ್ಗ: ಆಕ್ಸಿಜನ್ ಬೆಡ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಆರೋಗ್ಯಾಧಿಕಾರಿ ವಿರುದ್ಧ ದರ್ಪದಿಂದ ಮಾತನಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪ್ರವಾಸಿ ಮಂದಿರದ ಬಳಿ 50 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ವಾರ್ಡ್ ನಿರ್ಮಿಸಲಾಗಿದ್ದು, ಈ ಬಗ್ಗೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಮಾಹಿತಿ ನೀಡಿದ ಆರೋಗ್ಯಾಧಿಕಾರಿ ಪಾಲಾಕ್ಷ, 50 ಬೆಡ್ ಗಳಲ್ಲಿ 10 ಬೆಡ್ ಗಳಿಗೆ ಮಾತ್ರ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. …

Read More »

ಎರಡು ವರ್ಷ ಕಳೆದರು ಮುಗಿಯದ ಚಿತ್ರದುರ್ಗ ನಗರದ ರಸ್ತೆಗಳು; ಅಪಘಾತಗಳಿಗೆ ಇನ್ನೆಷ್ಟು ಬಲಿ!

ಚಿತ್ರದುರ್ಗ : ಅದು ಐತಿಹಾಸಿಕ ಖ್ಯಾತಿ ಹೊಂದಿರೋ ಹೆಸರಾಂತ ನಗರ ಚಿತ್ರದುರ್ಗ. ಅಲ್ಲಿ ರಸ್ತೆಗಳ ಅಭಿವೃದ್ದಿ, ಅಗಲೀಕರಣ ಮಾಡೋಕೆ ಪ್ರಾರಂಭ ಮಾಡಿ ಎರಡು ವರ್ಷಗಳೇ ಕಳಿಯುತ್ತಿವೆ. ಆದರೇ ಆ ಕಾಮಗಾರಿಗಳು ಮಾತ್ರ  ಮುಗಿಯುವಂತೆ ಕಾಣುತ್ತಿಲ್ಲ. ಪರಿಣಾಮ ನಗರದ ಜನರು ಕಿರಿಕಿರಿ ಅನುಭವಿಸಿ ಸಾಕಾಗಿ ಹೋಗಿದ್ದಾರೆ. ಆ ರಸ್ತೆಗಳು ಬರು ಬರುತ್ತಾ ಸಾವಿನ ಕೂಪಗಳಾಗಿ ಜನರ ಪ್ರಣವನ್ನೇ ಬಲಿ ಪಡೆಯುವಂತಾಗಿವೆ. ಇದ್ರಿಂದ ಬೇಸತ್ತ ಜನರು ಜನರ ಹಿತ ಕಾಯದ ಜಿಲ್ಲಾಡಳಿತಕ್ಕೆ ಹಿಡಿ …

Read More »

ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ

ಚಿತ್ರದುರ್ಗ: ನೀರಾವರಿ ಪಂಪ್‍ಸೆಟ್‍ಗೆ ಅಕ್ರಮವಾಗಿ ಹಾಕಿಕೊಂಡಿದ್ದ ನಿರಂತರ ಜ್ಯೋತಿ ವಿದ್ಯುತ್ ಲೈನ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಮಾರಕಾಸ್ತ್ರ ಹಾಗೂ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬೆಸ್ಕಾಂ ಕಚೇರಿ ಬಳಿ ನಡೆದಿದೆ ಹಲವು ದಿನಗಳಿಂದ ಶಿವರಾಜ್ ಎನ್ನುವವರು ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಹಾಕಿಕೊಂಡಿದ್ದರು. ಈ ಬಗ್ಗೆ ಲೈನ್‍ಮ್ಯಾನ್ ಕೇಶವ ಅವರು ಒಂದು ಬಾರಿ ಶಿವರಾಜ್‍ಗೆ ಎಚ್ಚರಿಕೆ ನೀಡಿದ್ದರು. ಆದರೆ ನಿನ್ನೆ …

Read More »

ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು. ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ. ಚುನಾವಣೆ …

Read More »

ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಜನರಲ್ಲಿ ಆತಂಕ

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸುಲೇನಹಳ್ಳಿಯಲ್ಲಿ 35ಕ್ಕೂ ಹೆಚ್ಚು ಜನರಿಗೆ ಜ್ವರ, ಮೈ-ಕೈ ನೋವು, ಕಾಲು ಊತ ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಕಾಣಿಸಿಕೊಂಡಿರುವ ಈ ಖಾಯಿಲೆಯಿಂದ ಜನ ಹೈರಾಣುಗೊಂಡಿದ್ದಾರೆ. ಮೊಳಕಾಲ್ಮೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಸುಲೇನಹಳ್ಳಿ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ:ಶ್ರೀರಾಮುಲು

ಚಿತ್ರದುರ್ಗ: ನಾಡಿನ ಜನರು ಶ್ರೀರಾಮುಲುಗೆ ಒಳ್ಳೆಯದಾಗಬೇಕೆಂದು ಬಯಸುತ್ತಾರೆ. ಏನೇ ಸ್ಥಾನ ಕೊಟ್ಟರು ನಿಭಾಯಿಸುವ ಶಕ್ತಿ ಭಗವಂತ ನನಗೆ ನೀಡಿದ್ದಾನೆ. ಪಕ್ಷ ಯಾವ ತಿರ್ಮಾನ ಕೈಗೊಳ್ಳಲಿದೆ ಕಾದು ನೋಡುತ್ತೇನೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ತಾವು ಡಿಸಿಎಂ ಸ್ಥಾನದ ಆಕಾಂಕ್ಷಿ ಎಂಬ ಸಂದೇಶದವನ್ನು ಸಚಿವ ಶ್ರೀರಾಮಲು ಪಕ್ಷಕ್ಕೆ ರವಾನಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ದೆಹಲಿಗೆ …

Read More »

4 ಕೋಟಿ ಮೌಲ್ಯದ ಗಾಂಜಾ ವಶ, ಸಹಶಿಕ್ಷಕ ಸೇರಿ ಐವರ ಸೆರೆ..!

ಚಿತ್ರದುರ್ಗ  : ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಜಿ.ರಾಧಿಕಾ ತಿಳಿಸಿದರು. ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿಯ ರುದ್ರೇಶ(45), ಮಹದೇವಪುರ ಗ್ರಾಮದ ಸಮಂತಗೌಡ(42), ಭೂ ಮಾಲೀಕ ಸಹ ಶಿಕ್ಷಕ ವೈ.ಜಂಬುನಾಥ(50), ಹೊಟೇಲ್ ಮಾಲೀಕ ಡಿ.ಬಿ.ಮಂಜುನಾಥ(45) ಹಾಗೂ ಡಿ.ವೈ ಮಂಜುನಾಥ(48) ಇವರುಗಳನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮೊಳಕಾಲ್ಮೂರು ತಾಲ್ಲೂಕು ವಡೇರಹಳ್ಳಿ ಗ್ರಾಮದ ಜಮೀನಿನಲ್ಲಿ ಹೆಚ್ಚಿನ …

Read More »

ಮಾರುತಿ ಕಾರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ಐವರು ಗಂಭೀರ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, …

Read More »