ಚಿತ್ರದುರ್ಗ: ಹಂದಿ ಕದಿಯಲು ಬಂದಿದ್ದ ಕಳ್ಳರು ಮೂವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾರೇಶ್ (50), ಯಲ್ಲೇಶ್ (30) ಮತ್ತು ಸೀನಪ್ಪ (30) ಕೊಲೆಯಾದ ದುರ್ದೈವಿಗಳು. ಒಂದು ವಾರದ ಹಿಂದೆ ನಾಯಕನಹಟ್ಟಿಗೆ ಬುಲೇರೊ ವಾಹನದಲ್ಲಿ ಬಂದಿದ್ದ ಆಂಧ್ರ ಮೂಲದ ಗುಂಪೊಂದು ನಿಮಗೆ ಪಾಠ ಕಲಿಸುವುದಾಗಿ ಎಚ್ಚರಿಕೆ ಕೊಟ್ಟು ತೆರಳಿದ್ದರು. ಹಂದಿ ವ್ಯಾಪಾರದ ವಿಚಾರದಲ್ಲಿ ಪರಸ್ಪರ ದ್ವೇಷವಿರಬಹುದೆಂಬ ಶಂಕೆ ನಾಯಕನಹಟ್ಟಿಯಲ್ಲಿ ವ್ಯಕ್ತವಾಗಿತ್ತು. …
Read More »ಪತ್ರಕರ್ತರ ಮೇಲೆ ಹಲ್ಲೆ ಜಿಲ್ಲಾಧಿಕಾರಿಗಳಿಗೆ ಮನವಿ
ಚಿತ್ರದುರ್ಗ,ಆ12(ಹಿಸ): ಬೆಂಗಳೂರಿನ ಡಿ.ಜಿ ಹಳ್ಳಿ ಮತ್ತು ಕೆ.ಆರ್.ಹಳ್ಳಿಗಳಲ್ಲಿ ನಡೆದಿರುವ ಗಲಭೆಯ ಸಂದರ್ಭದಲ್ಲಿ ಸುದ್ದಿ ಮಾಧ್ಯಮದ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಲ್ಲೆಗೊಳಗಾದ ಪತ್ರಕರ್ತರಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಮತ್ತು ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಹಾಗೆಯೇ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಕೊಡ ಪತ್ರಕರ್ತರಿಗೆ ರಕ್ಷಣೆ ನೀಡುವಂತಹ ಸುರಕ್ಷಣಾ ಕಾನೂನು ಜಾರಿ ಮಾಡಬೇಕು ಎಂದು …
Read More »ಖಾಸಗಿ ಬಸ್ ಬೆಂಕಿಗಾಹುತಿ ಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನ
ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಸ್ಪಿ ರಾಧಿಕಾ ಸ್ಥಳಕ್ಕೆ ಭೇಟಿ …
Read More »ನನ್ನ ಹಿರಿತನಕ್ಕೆ ಸೂಕ್ತ ಸ್ಥಾನಮಾನ, ಗೌರವ ಸಿಗಲಿಲ್ಲ,ಸಿಎಂ ಅವಮಾನಿಸಿದ್ದಾರೆ- ಶಾಸಕ ತಿಪ್ಪಾರೆಡ್ಡಿ ಆಕ್ರೋಶ
ಚಿತ್ರದುರ್ಗ: ಪ್ರತಿ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆಯೂ ನಿರಾಸೆ ಅನುಭವಿಸಿ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುನಿಸಿಕೊಳ್ಳುವ ಚಿತ್ರದುರ್ಗದ ಹಿರಿಯ ಶಾಸಕ ತಿಪ್ಪಾರೆಡ್ಡಿಯನ್ನು ದೇವರಾಜ್ ಅರಸು ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಸಮಾಧಾನ ಪಡಿಸುವ ಸಿಎಂ ತಂತ್ರಕ್ಕೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ನನ್ನಂತಹ ಹಿರಿಯ ಶಾಸಕನನ್ನು ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಿಸಿ, ಸಿಎಂ ಯಡಿಯೂರಪ್ಪ ನನಗೆ ಅವಮಾನ ಮಾಡಿದ್ದಾರೆ. ನಾನು 1998 ರಲ್ಲೇ ಹೌಸಿಂಗ್ ಬೋರ್ಡ್ ಅಧ್ಯಕ್ಷ …
Read More »ಚಿತ್ರದುರ್ಗದ ಕೋವಿಡ್ ಆಸ್ಪತ್ರೆ ಶೀಲ್ ಡೌನ್
ಚಿತ್ರದುರ್ಗ: ಕೋವಿಡ್ ಆಸ್ಪತ್ರೆ ಹತ್ರಚಸುಳಿದಾಡೋಕೂ ಜನ್ರು ಹೆದರುತ್ತಾರೆ. ಆದರೆ ಕೋಟೆ ನಾಡಿನ ಜನರು ಮಾತ್ರ ಇಲ್ಲಿ ಹೋಗಿ ಸೆಲ್ಫಿ ತೆಗೆಯೋದು, ಒಳಗೆ ಹೋಗಿ ಬರೋದು ಮಾಡ್ತಾರಂತೆ ಅದಕ್ಕೆ ಆರೋಗ್ಯಾಧಿಕಾರಿಗಳು ಆಸ್ಪತ್ರೆಯನ್ನೆ ಸೀಲ್ ಡೌನ್ ಮಾಡಿದ್ದಾರೆ ಕೋಟೆ ನಾಡಿನ ಜನರು ಬೆಚ್ಚೋದಿಲ್ಲ. ಕೋರೋನಾ ಸೋಂಕಿಗೂ ಬಗ್ಗೋಲ್ಲ ಎನ್ನೋದನ್ನು ಸಾಬೀತು ಮಾಡಿದ್ದಾರೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿದ್ದ ಪಾಸಿಟಿವ್ ಪ್ರಕರಗಳು ಒಂದೂ ಇಲ್ಲದೆ ಕೋರೋನಾ ಮುಕ್ತವಾಗಿದೆ. ಇದಕ್ಕಾಗಿ ಆಸ್ಪತ್ರೆ ಹಾಗೂ ಅದರ ಮುಂದಿನ ರಸ್ತೆಯನ್ನು …
Read More »3 ತಿಂಗಳಾದ್ರೂ ಬಾರದ 3 ಸಾವಿರ ಪ್ರೋತ್ಸಾಹ ಧನ- ಆಶಾ ಕಾರ್ಯಕರ್ತೆಯರು ಆಕ್ರೋಶ…..
ಕಲಬುರಗಿ/ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕಿಟ್ಟು ಸರ್ಕಾರ ನಿರ್ವಹಿಸಿದ ಕೆಲಸ ಮಾಡಿದ್ದಾರೆ. ಹೀಗಿದ್ದರು ಸಹ ರಾಜ್ಯ ಸರ್ಕಾರ ಘೋಷಿಸಿದ್ದ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಹಣ ಮಾತ್ರ ನೀಡಿಲ್ಲ ಎಂದು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 44-45 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ಇದ್ದರೂ ಮನೆ ಮನೆಗೆ ಹೋಗಿ ಸರ್ವೇ ಮಾಡಿದ್ದೆವೆ. ಮನೆಯಲ್ಲಿದವರಿಗೇ ಕ್ವಾರಂಟೈನ್ ಹಾಗೂ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಸಾಗಿಸುವ …
Read More »ಜಿಲ್ಲಾಡಳಿತಗಳ ಎಡವಟ್ಟಿಗೆ ಬೀದಿಗೆ ಬಿದ್ದ ವೃದ್ಧ……….
ಚಿತ್ರದುರ್ಗ: ಕೊರೊನಾ ನಡುವೆಯೂ ಎರಡು ಜಿಲ್ಲಾಡಳಿತಗಳ ಎಡವಟ್ಟಿನಿಂದ ವಯೋವೃದ್ಧ ಬೀದಿಪಾಲಾಗಿರುವ ಮನಕಲಕುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ ತಿಂಗಳಲ್ಲಿ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಶಿವಮೂರ್ತಿ ಅವರನ್ನು ತಡೆದ ಮಂಡ್ಯ ಜಿಲ್ಲಾಡಳಿತ 30 ದಿನಗಳ ಕಾಲ ಕ್ವಾರಂಟೈನ್ ಮಾಡಿತ್ತು. ಬಳಿಕ ಅವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸ್ವ-ಗ್ರಾಮಕ್ಕೆ ಶಿವಮೂರ್ತಿಯವರನ್ನು ಕಳುಹಿಸುವ ಬದಲಾಗಿ ಸರ್ಕಾರಿ ವಾಹನದಲ್ಲಿ ಚಿತ್ರದುರ್ಗಕ್ಕೆ ಕಳುಹಿಸಿದೆ. ಅಲ್ಲದೇ ಅಧಿಕಾರಿಗಳ ಎಡವಟ್ಟಿನಿಂದಾಗಿ ಚಿತ್ರದುರ್ಗಕ್ಕೆ ಬಂದ ಶಿವಮೂರ್ತಿ ಅವರನ್ನು ಅಲ್ಲೂ …
Read More »ಪರಿಶೀಲಿಸಲು ಬೈಕ್ ತಡೆದಿದ್ದಕ್ಕೆ ಆಂಧ್ರ ಯುವಕರಿಂದ ರಾಜ್ಯ ಪೊಲೀಸರ ಮೇಲೆ ಹಲ್ಲೆ
ಚಿತ್ರದುರ್ಗ: ಕೋವಿಡ್-19 ಸೋಂಕಿನಿಂದ ಜನರನ್ನು ಸಂರಕ್ಷಿಸಲು ಅರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಹಾಗೂ ಆಶಾ ಕಾರ್ಯಕರ್ತೆರು ಹಗಲು ಇರುಳು ಎನ್ನದೇ ಶ್ರಮಿಸುತಿದ್ದಾರೆ. ಆಂಧ್ರದಿಂದ ಬಂದಿದ್ದ ಬೈಕ್ ಸವಾರರನ್ನು ತಡೆದು ಪರಿಶೀಲನೆ ನಡೆಸಿದ ಪರಿಣಾಮ ಕರ್ತವ್ಯನಿರತ ಕೊರೊನಾ ವಾರಿಯರ್ಸ್ ಎನಿಸಿರುವ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್ ಪೋಸ್ಟ್ ಬಳಿ ಪರಶುರಾಂಪುರ ಠಾಣೆಯ ಕರ್ತವ್ಯ ನಿರತ ಪೊಲೀಸ್ …
Read More »ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..
ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಗುಜರಾತ್ನ ಅಹಮದಾಬಾದ್ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್ಓ ಡಾ.ಪಾಲಾಕ್ಷ, ಗುಜರಾತ್ನಿಂದ ಬಂದಿದ್ದ ಮೂವರು …
Read More »ಮೇ 3ರ ಬಳಿಕವೂ ಲಾಕ್ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ
ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ನಗರದ ಹಳೆ ಮಾಧ್ಯಮಿಕ …
Read More »
Laxmi News 24×7