Home / ಜಿಲ್ಲೆ / ದಾವಣಗೆರೆ (page 8)

ದಾವಣಗೆರೆ

ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …

Read More »

ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ

ಆಹಾರ ಪದಾರ್ಥಗಳ ಕಿಟ್​ಗಳನ್ನು ಪಡೆಯುವ ಸಲುವಾಗಿ ನೂರಾರು ಜನರು ಒಂದೆಡೆ ಸೇರಿದ್ದರು. ಎಲ್ಲರೂ ಬಿಸಿಲಿನಲ್ಲಿ ಗಂಟೆಗೂ ಹೆಚ್ಚು ಕಾದರೂ ಶಾಸಕ ರೇಣುಕಾಚಾರ್ಯ ಅವರು ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾಗೊಂಡ ಜನರು ತಾವು ಮನೆಗೆ ಹೋಗುವುದಾಗಿ ಹೇಳಿದ್ದಾರೆ. ದಾವಣಗೆರೆ: ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹನಮಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಿಟ್ ಬೇಡ ಅಂದ್ರೆ ಎದ್ದು ಹೋಗು ಎಂದು ಶಾಸಕರು …

Read More »

ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿ,,,,,,,,,,

ದಾವಣಗೆರೆ: ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿಕೊಟ್ಟಿದೆ. ಜಿಲ್ಲೆಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಾವು ಗ್ರೀನ್ ಝೋನ್‍ನಲ್ಲಿ ಇದ್ದೇವೆ ಎಂದು ನೆಮ್ಮದಿಯಯಲ್ಲಿದ್ದ ದಾವಣಗೆರೆ ಜಿಲ್ಲೆಯ ಜನತೆ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದೆ. ದಾವಣಗೆರೆ ನಗರದ ಭಾಷಾ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ …

Read More »

ತೂಕದಲ್ಲಿ ಮೋಸ ಮಾಡಿದ 146 ಪಡಿತರ ಅಂಗಡಿ ಲೈಸೆನ್ಸ್ ಅಮಾನತು : ಸಚಿವ ಗೋಪಾಲಯ್ಯ

ದಾವಣಗೆರೆ : ಚಿತ್ರದುರ್ಗದ ಬಳಿಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ದಾವಣಗೆರೆ ಬೇಟಿ ನೀಡದರು. ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಇಲಾಖೆಗೆ ಸಂಭಂದಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ದೇಶದಾದ್ಯಂತ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡ್ತಿದೆ. ಹಾಗಾಗಿ …

Read More »

ಸರ್ಜಿಕಲ್ ಸ್ಪಿರಿಟ್‍ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ

ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್ ಸ್ಪಿರಿಟ್‍ನ್ನು ಕಳ್ಳಬಟ್ಟಿ ಸರಾಯಿ ಎಂದು ನಂಬಿಸಿ ಮಾರಾಟ ಮಾಟುತ್ತಿದ್ದಾರೆ. ದಾವಣಗೆರೆಯಲ್ಲಿ ಸರ್ಜಿಕಲ್ ಸ್ಪಿರಿಟ್ ದಂಧೆ ಜೋರಾಗಿದ್ದು, ಸರ್ಜಿಕಲ್ ಸ್ಪೀರಿಟ್‍ನ್ನು ನೀರಿಗೆ ಬೆರೆಸಿ ಕಳ್ಳಬಟ್ಟಿ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಯಾರೇ ಕೇಳಿದರೂ ಸರ್ಜಿಕಲ್ ಸ್ಪಿರಿಟ್ ನೀಡದಂತೆ ಡ್ರಗ್ ಕಂಟ್ರೋಲ್ ರೂಮ್‍ಗೆ ಪತ್ರ ಬರೆಯಲಾಗಿದೆ. ಸರ್ಜಿಕಲ್ ಸ್ಪಿರಿಟ್ ಬೇಕು …

Read More »

ದಾವಣಗೆರೆ:ಲಾಕ್‍ಡೌನ್ ಉಲ್ಲಂಘಿಸಿದವರ ಕೈಗೆ ಸ್ಲೇಟ್ ಕೊಟ್ಟು ಜಾಗೃತಿ

ದಾವಣಗೆರೆ: ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗುತ್ತಿದ್ದವರನ್ನು ಎಳೆತಂದ ದಾವಣಗೆರೆ ಪೊಲೀಸರು ಅವರ ಕೈಗೆ ಸ್ಲೇಟ್ ಕೊಟ್ಟು ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಮನವಿ ಮಾಡುತ್ತಿದ್ದಾರೆ. ಹೀಗಾದರೂ ದಾವಣಗೆರೆಯಲ್ಲಿ ನೂರಕ್ಕೂ ಅಧಿಕ ಮಂದಿ ಹೊರಗೆ ಬಂದು ಕಾನೂನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆದಿದ್ದಾರೆ ಹೊರಗಡೆ ಬಂದು ಸುಖಾಸುಮ್ಮನೆ ತಿರುಗುತ್ತಿದ್ದ …

Read More »

ರಾಜ್ಯದ ರೈತರೇ ಗಮನಿಸಿ : ಸ್ವಯಂಪ್ರೇರಿತರಾಗಿ‌ ಬೆಳೆ‌ನಾಶಪಡಿಸಿಕೊಂಡರೆ ಸಿಗಲ್ಲ ಪರಿಹಾರ..!

ದಾವಣಗೆರೆ,: ಯಾವುದೇ ರೈತರು ಆತುರದ ಬುದ್ಧಿಗೆ ಬೆಲೆಕೊಟ್ಟು ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಕೊರೊನಾ‌ ಲಾಕ್ಡೌನ್ ಅನಿರೀಕ್ಷಿತವಾಗಿದ್ದು, ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ.ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಆತುರಕ್ಕೆ ಸ್ವಯಂಪ್ರೇರಿತರಾಗಿ ಬೆಳೆ ನಾಶ ಪಡಿಸಿಕೊಂಡರೆ ಪರಿಹಾರ ಸಾಧ್ಯವಿಲ್ಲ.ಪ್ರಾಕೃತಿಕ ನಷ್ಟಕ್ಕೆ ಮಾತ್ರ ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಹಿನ್ನಲೆಯಲ್ಲಿ ರೈತರ ಪರಿಸ್ಥಿತಿ,ಕೃಷಿ ಚಟುವಟಿಕೆ ಕುರಿತು ಜಿಲ್ಲೆಯ ಕೃಷಿ,ತೋಟಗಾರಿಕೆ ಅಧಿಕಾರಿಗಳು,ಜನಪ್ರತಿನಿಧಿಗಳ …

Read More »

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖ

ದಾವಣಗೆರೆ: ಜಿಲ್ಲೆಯ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಮಕ್ಕಳ ಸೇರಿ ಮೂವರು ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಸಂಸದರು ಆರೋಗ್ಯ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಮಗಳು ಮತ್ತು‌ ಮಗ ಸೇರಿದಂತೆ ಇನ್ನೊಬ್ಬ ಯುವಕ 16 ದಿನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ನಾಳೆ ಡಿಸ್ಚಾರ್ಜ್ ಆಗುತ್ತಿದ್ದಾರೆ. ಹಗಲಿರುಳು ಶ್ರಮಿಸಿದ ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಧನ್ಯವಾದ ಎಂದು ಅವರು ಹೇಳಿದ್ದಾರೆ. ನಮ್ಮ ಜಿಲ್ಲೆ ಸದ್ಯ ಕೊರೊನಾ ಮುಕ್ತ. ಜನರು ಇನ್ನಷ್ಟು ಜಾಗೃತಿಯಿಂದ …

Read More »

ದಾವಣಗೆರೆ:ವರುಣನ ಆರ್ಭಟ – ಮನೆಗೆ ನುಗ್ಗಿದ ನೀರು,,,,,..

ದಾವಣಗೆರೆ: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ಆದರೆ ದಾವಣಗೆರೆಯಲ್ಲಿ ರಾತ್ರಿ ಇಡೀ ಸತತ ಮಳೆ ಸುರಿದಿದ್ದು, ಬಹುತೇಕ ಮನೆಗಳಿಗೆ ನೀರು ನುಗ್ಗಿದೆ. ದಾವಣಗೆರೆ ನಗರದ ಬೇತೂರ ರಸ್ತೆಯ ಆನೆಕೊಂಡ ಎಕೆ ಕಾಲೋನಿಯ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಜನರು ರಾತ್ರಿ ಇಡೀ ಜಾಗರಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಕಡೆ ರಸ್ತೆಯಲ್ಲಿ …

Read More »