Breaking News
Home / ಜಿಲ್ಲೆ / ಧಾರವಾಡ (page 2)

ಧಾರವಾಡ

ಜಿಲ್ಲಾ ಆರೋಗ್ಯ ಇಲಾಖೆ ಉಗ್ರಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಖಾಲಿಯಾಗಿದೆ ಎಂಬ ಮಾಹಿತಿ ಲಭ್ಯ

ಧಾರವಾಡ: ಜಿಲ್ಲಾ ಆರೋಗ್ಯ ಇಲಾಖೆ ಉಗ್ರಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಖಾಲಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಇಲಾಖೆಯ ಉಗ್ರಾಣದಲ್ಲಿ 8,800 ಡೋಸ್ ವ್ಯಾಕ್ಸಿನ್ ಮಾತ್ರ ಇತ್ತು. ಇಂದು ಅವುಗಳನ್ನು ಜಿಲ್ಲೆಯ 74 ಆರೋಗ್ಯ ಇಲಾಖೆಯ ವ್ಯಾಕ್ಸಿನ್ ಕೇಂದ್ರಗಳಿಗೆ ಸಪ್ಲೈ ಮಾಡಲಾಗಿದೆ. ಬೆಳಗಾವಿಯ ರಿಜನಲ್ ಸೆಂಟರ್ ನಿಂದ ಧಾರವಾಡಕ್ಕೆ ವ್ಯಾಕ್ಸಿನ್ ಬಂದರೆ ಮಾತ್ರ ನಾಳೆ ಸಾರ್ವಜನಿಕರಿಗೆ ವ್ಯಾಕ್ಸಿನ್ ಲಭ್ಯವಾಗಲಿದೆ. ಸದ್ಯ ಧಾರವಾಡ ಜಿಲ್ಲೆಗೆ 1,37,380 ಕೋವಿಶೀಲ್ಡ್ ವ್ಯಾಕ್ಸಿನ್, 11,200 ಡೋಸ್ ಕೋವ್ಯಾಕ್ಸಿನ್ …

Read More »

ಶಿವಳ್ಳಿ ಗ್ರಾಮ ಪಂಚಾಯತಿ “ಕೈ” ಪಾಲು..!

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿದಂತಾಗಿದೆ.           ಶಿವಳ್ಳಿ ಗ್ರಾಮದ ಮೂರನೇಯ ವಾರ್ಡಿನಲ್ಲಿ ಜಯ ಗಳಿಸಿದ ವಿಜಯಮಹಾಂತೇಶ ಶಿವಲಿಂಗಯ್ಯ ವಸ್ತ್ರದ ಅವರು ಅಧ್ಯಕ್ಷರಾಗಿಯೂ, ಉಪಾಧ್ಯಕ್ಷರಾಗಿ ಶಂಕರೆವ್ವ ಈಶ್ವರಪ್ಪ ಸಣ್ಣಮುದ್ದಿಯವರು ಅವಿರೋಧವಾಗಿ ಆಯ್ಕೆಯಾದರು.   ಶಿವಳ್ಳಿ ಪಂಚಾಯತಿಯಲ್ಲಿ ಒಟ್ಟು ಒಂಬತ್ತು ಸದಸ್ಯರ ಬಲ ಹೊಂದಿದ್ದು, ಅತೀ ಹೆಚ್ಚು ಸದಸ್ಯರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ-ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ..!

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಮಾವನವರಾದ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನವನ್ನ ಮತ್ತೆ ಹದಿನಾಲ್ಕು ದಿನಗಳವರೆಗೆ ಮುಂದೂಡಿ ಆದೇಶ ಮಾಡಲಾಗಿದೆ. ನವೆಂಬರ್ 5ರಂದು ಬಂಧನವಾಗಿರುವ ವಿನಯ ಕುಲಕರ್ಣಿ ಹಾಗೂ ಕೆಲವು ದಿನಗಳ ಹಿಂದೆ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಚಂದ್ರಶೇಖರ ಇಂಡಿಯವರನ್ನ ಕಾರಾಗೃಹದಲ್ಲಿ ಇಡಲಾಗಿದ್ದು, ಇಂದು ಮತ್ತೆ 14 ದಿನದ ನ್ಯಾಯಾಂಗ ಬಂಧನವನ್ನ …

Read More »

ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ

    ಚಲಿಸುತ್ತಿದ್ದ ಬೈಕ್​ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್​ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …

Read More »

ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …

Read More »

ಧಾರವಾಡದ ಬಳಿ ಭೀಕರ ರಸ್ತೆ ಅಪಘಾತ ಐವರ ದುರ್ಮರಣ: ಹಲವರಿಗೆ ಗಾಯ

ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ …

Read More »

ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭ

ಧಾರವಾಡದಲ್ಲಿ ಇಂದು ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದವನ್ನು ಪಡೆಯಲಾಯಿತು.   ಪೇಜಾವರ ಮಠಾಧೀಶರಾದ ಪ್ರಾಥಃಸ್ಮರಣೀಯ, ಯತಿಕುಲ ಚಕ್ರವರ್ತಿ, ಪದ್ಮವಿಭೂಷಣ ಪುರಸ್ಕೃತ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶ್ವ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮಧ್ವಾಚಾರ್ಯರ ಸಿದ್ಧಾಂತ ಪ್ರಚಾರಕ್ಕೆಂದೇ ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ಮಾಧ್ವ ಮಹಾಮಂಡಲ. ಶ್ರೀಗಳವರು ಕರ್ನಾಟಕದ ಅನೇಕ ಕಡೆ ಮಂಡಲದ ಶಾಖೆಗಳನ್ನು …

Read More »

ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿ

ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ. ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ ಯುವಕ ಮೀನಾಕ್ಷಿಯನ್ನು ವರಿಸಿಕೊಳ್ಳಲು ಒಪ್ಪಿದ್ದು, ನಗರದ ಸೈದಾಪೂರದ ನಿವಾಸಿಯಾದ ಮೀನಾಕ್ಷಿ ಜೊತೆ ಕಮಲಾಪುರದ ನಿವಾಸಿ ವಿನಾಯಕ ವಿವಾಹವಾಗಿದ್ದಾರೆ. ವಿನಾಯಕ್ ಮೊದಲಿನಿಂದಲೂ ವಿಶೇಷ ಚೇತನ ಹುಡುಗಿ ಕೈ ಹಿಡಿಯಬೇಕೆಂಬ ಸಂಕಲ್ಪ ಹೊಂದಿದ್ದರು. ಮೀನಾಕ್ಷಿ ವಿಶೇಷ …

Read More »

ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ

ಧಾರವಾಡ: ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ ವಿಧಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ  ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಂತೆ ವಿನಯ ಕುಲಕರ್ಣಿ ಡಿ. 21ರವರೆಗೆ ಜೈಲು ಗತಿಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ  ಸಚಿವ ವಿನಯ ಅವರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ನ್ಯಾಯಾಂಗ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »