Home / ಜಿಲ್ಲೆ / ಬಾಗಲಕೋಟೆ (page 3)

ಬಾಗಲಕೋಟೆ

ಡಾ.ವಿಜಯ ಸಂಕೇಶ್ವರ ಅವರಿಗೆ ‘ಶ್ರೀ ಸಿದ್ಧಶ್ರೀ ಪ್ರಶಸ್ತಿ’, ವಿಜಯಾನಂದ ಚಿತ್ರಕ್ಕೆ ‘ಅತ್ಯುತ್ತಮ ಬಯೋಪಿಕ್​’ ಪ್ರದಾನ

ಬಾಗಲಕೋಟೆ: ಪುಣ್ಯಕ್ಷೇತ್ರ ಸಿದ್ಧನಕೊಳ್ಳದ ಸಿದ್ಧೇಶ್ವರ ಮಠದಿಂದ 2023ನೇ ಸಾಲಿನ ‘ಶ್ರೀ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ’ಯನ್ನು ವಿಆರ್​ಎಲ್​ ಸಮೂಹ ಸಂಸ್ಥೆ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರಿಗೆ ಪ್ರದಾನ ಮಾಡಲಾಯಿತು. ಮೂರು ದಿನಗಳ ಸಿದ್ಧಶ್ರೀ ಉತ್ಸವದಲ್ಲಿ ಎರಡನೇ ದಿನವಾದ ಭಾನುವಾರ ರಾತ್ರಿ ನಡೆದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಾ.ವಿಜಯ ಸಂಕೇಶ್ವರ ಅವರಿಗೆ ಪ್ರಶಸ್ತಿ ವಿತರಿಸಲಾಯಿತು. ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್​ ಪ್ರಶಸ್ತಿಯನ್ನೂ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು. ಸಿದ್ಧನಕೊಳ್ಳದ ಧರ್ಮಾಧಿಕಾರಿ ಡಾ. …

Read More »

ಒಂದೇ ಬಾರಿಗೆ 4 ಕರುಗಳಿಗೆ ಜನ್ಮನೀಡಿ ಅಚ್ಚರಿ ಮೂಡಿಸಿದ ಹಸು!

ಬಾಗಲಕೋಟೆ: ಪ್ರಪಂಚದಲ್ಲಿ ಪ್ರತಿದಿನವೂ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ವಿಷಯಗಳನ್ನು ನಂಬಲು ಸಹ ಸಾಧ್ಯವಾಗುವುದಿಲ್ಲ. 2 ಮುಖ, 5 ಕಾಲಿನ ಕರುಗಳು ಮತ್ತು ಪ್ರಾಣಿಗಳನ್ನು ನೀವು ನೋಡೇ ಇರುತ್ತೀರಿ. ಒಂದೇ ಬಾರಿಗೆ 2 ಕರುಗಳಿಗೆ ಜನ್ಮನೀಡಿದ ಹಸುಗಳನ್ನೂ ನೀವು ಕಂಡಿರುತ್ತೀರಿ. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದ್ದು, ಅಚ್ಚರಿ ಮೂಡಿಸಿದೆ. ಹೌದು, ಅಚ್ಚರಿಯಾದರೂ ಇದು ನಿಜ.ಬಾಗಲಕೋಟೆಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ …

Read More »

ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …

Read More »

ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್‌ ಪಾಟೀಲ್‌, 20 ವರ್ಷದ ಹನಮಂತ್‌ ಬೊಮ್ಮಕ್ಕನವರ್‌, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್‌ ಓವರ್‌ ಟೇಕ್‌ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ. ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್‌ ಗುದ್ದಿದ್ದರಿಂದ ಟ್ರ್ಯಾಕ್ಟರ್‌ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್‌ ನಲ್ಲಿದ್ದ ಇಬ್ಬರು …

Read More »

ಸಂಕ್ರಾಂತಿ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಸಿದ್ದರಾಮಯ್ಯ

ಬಾಗಲಕೋಟೆ : ಜನವರಿ 15 ರಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದಲ್ಲಿ ಬಳಿ ಎಸ್ ಆರ್ ಕೆ ಶುಗರ್ ಕಾರ್ಖಾನೆ ಯ ಅಡಿಗಲ್ಲು ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡುತ್ತಾ, ಜನವರಿ ಡಿಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ,ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಪ್ರವಾಸ …

Read More »

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ!

ಬಾಗಲಕೋಟೆ ಜಿಲ್ಲೆಯ ಹೆರಕಲ್ಲ ಗ್ರಾಮದ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆ. ಗ್ರಾಮದ ಯೋಧ ಈರಪ್ಪ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವಾಗ ಪತ್ತೆಯಾದ ನರಿ ಮರಿಗಳು.   ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೆರಕಲ್ಲ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ 5 ನರಿ ಮರಿಗಳು ಪತ್ತೆಯಾಗಿವೆ.   ಗ್ರಾಮದ ಯೋಧ ಈರಪ್ಪ ವಾರದ ಎಂಬುವವರ ಜಮೀನಿನಲ್ಲಿ ಮರಿಗಳು ಪತ್ತೆಯಾಗಿವೆ.   ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಈರಪ್ಪ ಅವರು …

Read More »

ಮುಧೋಳದಲ್ಲಿ 3 ದಿನ ನಿಷೇಧಾಜ್ಞೆ; ತೀವ್ರತೆ ಪಡೆದ ಕಬ್ಬು ಬೆಳೆಗಾರರ ಹೋರಾಟ

ಬಾಗಲಕೋಟೆ: ಕಳೆದ 45 ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಧೋಳದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದರ ಮಧ್ಯೆಯೇ ನಿಷೇಧಾಜ್ಞೆ ಜಾರಿ ಬೆನ್ನಲ್ಲೇ ಮತ್ತಷ್ಟು ಆಕ್ರೋಶಗೊಂಡ ರೈತರು, ಹಳ್ಳಿ-ಹಳ್ಳಿಯಿಂದ ಮುಧೋಳಕ್ಕೆ ಆಗಮಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದ್ದಾರೆ. ಮುಧೋಳದಿಂದ ವಿವಿಧ ಹಳ್ಳಿಗಳಿಗೆ ತೆರಳುವ ಪ್ರಮುಖ ರಸ್ತೆ-ಹೆದ್ದಾರಿಗಳನ್ನು ಬಂದ್‌ ಮಾಡಿ, ರಸ್ತೆಯಲ್ಲೇ ಒಲೆ ಹೂಡಿ ಅಡುಗೆ ಮಾಡಿ ಮಧ್ಯಾಹ್ನದ ಊಟ ಮಾಡಿದ್ದಾರೆ. ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ವರ್ಷ …

Read More »

ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.   ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು.   ಕೆಲಸದ ವೇಳೆ ಇವರು ಗೋವಿನಜೋಳ ರಾಶಿ …

Read More »

ಕಬ್ಬು ಹೋರಾಟವನ್ನು ಕಡೆಗಣಿಸದಿರಿ: ರೈತರ ಕಟ್ಟಕಡೆಯ ಎಚ್ಚರಿಕೆ!

ಬಾಗಲಕೋಟೆ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಮುಧೋಳ ನಗರದಲ್ಲಿ ರೈತ ಮುಖಂಡರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಎಸ್​​​ಪಿ ಜಯಪ್ರಕಾಶ್ ಕೂಡ ಹಾಜರಿದ್ದರು. ಈ ವೇಳೆ ‘ಕಬ್ಬು ಬೆಳೆಗಾರರು ಶಾಂತ ರೀತಿಯಲ್ಲಿ ಹೋರಾಟ ಮಾಡಬೇಕು, ಎಂತಹ ಸಂದರ್ಭದಲ್ಲೂ ರೈತರು ಕಾನೂನು ಕೈಗೆ ತೆಗೆದುಕೊಳ್ಳಬಾರದು’ ಎಂಬ ಕಿವಿಮಾತನ್ನು ಹೇಳಿದರು. ಇದೇ ವೇಳೆ ಮಾತನಾಡಿದ ರೈತರು, ‘ಕಬ್ಬಿನ ಹಂಗಾಮು ಪ್ರಾರಂಭವಾಗಿ …

Read More »

ಅಂತರ್ಜಲ ಹೆಚ್ಚಳ; ಕೆಂದೂರು ಗ್ರಾಮಸ್ಥರು ಕಂಗಾಲು

ಬಾದಾಮಿ: ಈ ಬಾರಿ ಮಳೆ ಪ್ರಮಾಣ ಹೆಚ್ಚಳವಾಗಿರುವುದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗಿದ್ದು, ಬಾದಾಮಿಯ ಕೆಂದೂರು ಗ್ರಾಮಸ್ಥರು ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೆಂದೂರು ಗ್ರಾಮದಲ್ಲಿ ಅಂತರ್ಜಲ ಹೆಚ್ಚಳದಿಂದಾಗಿ ಬೋರ್ ವೆಲ್ ಗಳಿಂದ ನೀರು ಹೊರಚಿಮ್ಮುತ್ತಿದ್ದು, ಜಮೀನುಗಳು ಜಲಾವೃತಗೊಂಡಿವೆ. ಬೋರ್ ವೆಲ್ ಗಳು, ಕೊಳವೆ ಬಾವಿಗಳಿಂದ ಏಕಾಏಕಿ ನೀರು ಹೊರಚಿಮ್ಮುತ್ತಿದ್ದು, ಕಳೆದ 20 ದಿನಗಳಿಂದ ಹೊಲಗದ್ದೆಗಳು ಕೆರೆಗಳಂತಾಗಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹೊಲಗಳು ಸಂಪೂರ್ಣ ಜಲಾವೃತಗೊಂಡಿದ್ದು, ಶುಂಠಿ, ಕಡಲೆ, ಕಬ್ಬು ಬೆಳೆ ಸಂಪೂರ್ಣ ನೀರುಪಾಲಾಗಿವೆ. …

Read More »