Breaking News
Home / ಜಿಲ್ಲೆ / ಬಾಗಲಕೋಟೆ (page 9)

ಬಾಗಲಕೋಟೆ

ಪ್ರಿಯಕರನ ಮನೆಯಲ್ಲೇ ವಿವಾಹಿತ ಯುವತಿ ಸಾವು : ಯುವತಿ ಪೋಷಕರಿಂದ ಪ್ರಿಯಕರನ ಮನೆಗೆ ಬೆಂಕಿ

ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ. ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಂಜೀತ್ …

Read More »

ಮಹಾಲಿಂಗಪೂರ ಪುರಸಭೆ ಪ್ರಕರಣ:ಶಾಸಕ ಸಿದ್ದು ಸವದಿ- ತಹಶೀಲ್ದಾರ ಸಿಐಡಿಯಿಂದ ಪ್ರತ್ಯೇಕ ವಿಚಾರಣೆ

ಬನಹಟ್ಟಿ: ಕಳೆದ ವರ್ಷ ನ.9 ರಂದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ವೇಳೆ ಮಹಿಳಾ ಸದಸ್ಯೆಯರ ಎಳೆದಾಟದ ಗಲಾಟೆಗೆ ಸಂಬಂಧಿಸಿದಂತೆ ಡಿವೈಎಸ್ಪಿ ಎಸ್. ಸತ್ಯವತಿ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಬನಹಟ್ಟಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ರಾತ್ರಿವರೆಗೂ ತೇರದಾಳ ಶಾಸಕ ಸಿದ್ದು ಸವದಿ ಹಾಗು ಅಂದಿನ ರಬಕವಿ-ಬನಹಟ್ಟಿ ತಹಶೀಲ್ದಾರರಾಗಿದ್ದ ಪ್ರಶಾಂತ ಚನಗೊಂಡ ಅವರನ್ನು ಪ್ರತ್ಯೇಕವಾಗಿ ತೀವ್ರ ವಿಚಾರಣೆ …

Read More »

ವಿದ್ಯುತ್ ಮಗ್ಗ ನೇಕಾರರಿಗೆ 3 ಸಾವಿರ ಲಾಕ್ ಡೌನ್ ವಿಶೇಷ ದನ ಸಹಾಯಕ್ಕಾಗಿ ಅರ್ಜಿ ಅಹ್ವಾನ

ಬಾಗಲಕೋಟೆ : ಕೋವಿಡ್-19 ರ 2ನೇ ಅಲೆಯಿಂದ ಲಾಕ್‍ಡೌನ್ ಘೋಷಣೆ ಮಾಡಿದ್ದು, ಇದರಿಂದ ಬಾದಿತವಾದ ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳಾದ ಟ್ವಿಸ್ಟಿಂಗ್, ವೈಂಡಿಂಗ್, ಯಾರ್ನಡೈಯಿಂಗ್, ವಾರ್ಪಿಂಗ್, ಝರಿ ವೈಂಡಿಂಗ್ & ವಾರ್ಪಿಂಗ್, ವಾರ್ಪ ನಾಟಿಂಗ್ ಹಾಗೂ ಸೈಜಿಂಗ್ ಕೆಲಸಗಾರರಿಗೆ ತಲಾ 3 ಸಾವಿರ ರೂ.ಗಳಂತೆ ಪರಿಹಾರಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಶಿಕ್ಷಣ ಇಲಾಖೆಯ ‘ಈ ಆಪ್’ ಹಾಕೊಳ್ಳಿ, ನಿಮ್ಮ ‘ಪರೀಕ್ಷಾ ಸಿದ್ಧತೆ’ಗೆ …

Read More »

ದೂರು ನೀಡಲು ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ; ಎಸ್​ಪಿ ಮೊರೆ ಹೋದ ಕುಟುಂಬಸ್ಥರು

ಬಾಗಲಕೋಟೆ: ದೂರು ನೀಡಲು ಪೊಲೀಸ್ ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್‌ಐ ರವಿ ಪವಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲ ಪತ್ನಿಗೆ ಗೊತ್ತಾಗದಂತೆ ತುಳಸಿಗೇರಿ ಗ್ರಾಮದ ನಿವಾಸಿ ರಂಗಪ್ಪ ಎಂಬುವವನು ಎರಡನೇ ಮದುವೆಯಾಗಿದ್ದ. ರಂಗಪ್ಪನ ಮೊದಲ ಪತ್ನಿ ಲಕ್ಷ್ಮೀ ಸಹೋದರ ಸಚಿನ್ ಗಿಡ್ಡಿ, ಲಕ್ಷ್ಮೀ ಭಾವ ಶ್ರೀಕಾಂತ್ ರಂಗಪ್ಪನ ವಿರುದ್ಧ ದೂರು ನೀಡಲು ಠಾಣೆಗೆ …

Read More »

“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ

ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …

Read More »

ಅಕ್ರಮ ಸಂಗ್ರಹ: 2261 ಚೀಲ ರಸಗೊಬ್ಬರ ಪತ್ತೆ

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ₹11.05 ಲಕ್ಷ ಮೌಲ್ಯದ 2261 ಚೀಲ ವಿವಿಧ ಬಗೆಯ ರಸಗೊಬ್ಬರವನ್ನು ಕೃಷಿ ಇಲಾಖೆಯ ವಿಚಕ್ಷಣಾ ತಂಡದವರು ಸೋಮವಾರ ವಶಪಡಿಸಿಕೊಂಡಿದ್ದಾರೆ ಕಮತಗಿಯ ವಿನಾಯಕ ಕೃಷಿ ಕೇಂದ್ರ ಹಾಗೂ ಅನ್ನದಾನೇಶ್ವರಿ ಕೃಷಿ ಸೇವಾ ಕೇಂದ್ರಗಳ ಹೆಸರಿನ ಉಗ್ರಾಣಗಳಲ್ಲಿ ರಸಗೊಬ್ಬರದ ಚೀಲಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ವಿಚಕ್ಷಣಾ ತಂಡದ ಸಹಾಯಕ ನಿರ್ದೇಶಕರಾದ ಬಿ.ಜಿ.ಮಾಳೇದ, …

Read More »

ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …

Read More »

ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …

Read More »

ಅನೈತಿಕ ಸಂಬಂಧ ಶಂಕೆ ; ಪತ್ನಿ ಕೊಲೆ, ಮಗನೂ ಭಾಗಿ

ಬಾಗಲಕೋಟೆ: ಮನೆಯಲ್ಲಿ ಪತ್ನಿ ನಿದ್ರೆ ಮಾಡುತ್ತಿರುವಾಗಲೇ ಆಕೆಯ ಕುತ್ತಿಗೆ ಬಿಗಿದು ಗಂಡ ಕೊಲೆ ಮಾಡಿದ್ದಾನೆ. ತನ್ನ ಕಣ್ಣೆದುರಲ್ಲೇ ಅಮ್ಮನನ್ನು ಕೊಲ್ಲುತ್ತಿದ್ದ ಅಪ್ಪನಿಗೆ 14 ವರ್ಷದ ಮಗನೂ ಸಾಥ್​ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆತ್ಮಹತ್ಯೆ ಎಂದು ಬಿಂಬಿಸಿ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಹೋದಾಗ ಕೊಲೆ ರಹಸ್ಯ ಬಯಲಾಗಿದೆ. ಇಂತಹ ದುರ್ಘಟನೆ ಬಾಗಲಕೋಟೆ ‌ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಸಂಭವಿಸಿದೆ. ಮಹಾದೇವಿ ವಡ್ರಾಲ(40) ಕೊಲೆಯಾದ ದುರ್ದೈವಿ. ಪತಿ ಹನುಮಂತ ವಡ್ರಾಲ ಮತ್ತು …

Read More »

ಡಾ.‌ಪದ್ಮಜೀತ ಪಾಟೀಲ್ ಅಂಬ್ಯುಲೆನ್ಸ್ ಸೇವೆ: ಮನೆಯಿಂದ ಕೋವಿಡ್ ಕೇರ್ ಸೆಂಟರ್

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯಾವದೇ ಆಸ್ಪತ್ರೆಗೆ ತೆರಳಲು ಉಚಿತ ಅಂಬ್ಯುಲೆನ್ಸ್ ಹಾಗು ಕೊರೊನಾದಿಂದ ಮೃತಪಟ್ಟ ಶವ ಸಾಗಿಸಲೂ ಪ್ರತ್ಯೇಕ ವಾಹನದ ಜೊತೆಗೆ ಆಕ್ಸಿಜನ್ ಸಹಿತ ವಾಹನವನ್ನೂ ಉಚಿತ ಸೇವೆ ಮಾಡಲು ಡಾ. ಪದ್ಮಜೀತ್ ನಾಡಗೌಡ ಪಾಟೀಲ ಫೌಂಡೇಶನ್ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಪದ್ಮಜೀತ್ ನಾಡಗೌಡ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತೇರದಾಳ ವಿಧಾನಸಭಾ ಕ್ಷೇತ್ರದ ಸರ್ವ ಜನತೆಗೆ ಉಚಿತವಾಗಿ …

Read More »