Breaking News
Home / ಜಿಲ್ಲೆ / ಬಿಜಾಪುರ (page 11)

ಬಿಜಾಪುರ

ನಕಲಿ ವೈದ್ಯರಿಂದ ಊರು ತುಂಬಾ ಹರಡಿತು ಕೊರೋನ ಸೋಂಕು!!!

ವಿಜಯನಗರ: ಕರೊನಾ ನಗರಗಳಿಗೆ ಮಾತ್ರ ಸೀಮಿತವಾಗದೆ ಹಳ್ಳಿ ಹಳ್ಳಿಗೂ ಹಬ್ಬಲಾರಂಭಿಸಿದೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವರು ವೈದ್ಯರಂತೆ ನಾಟಕವಾಡಿ ಜನಸಾಮಾನ್ಯರಿಂದ ಹಣ ಲೂಟಿ ಮಾಡುವ ಕೆಲಸಕ್ಕೂ ಮುಂದಾಗಿದ್ದಾರೆ. ಅದೇ ರೀತಿಯ ಘಟನೆ ವಿಜಯನಗರ ಜಿಲ್ಲೆಯಲ್ಲೂ ನಡೆದಿದ್ದು, ಗ್ರಾಮವನ್ನೇ ಸೀಲ್​ಡೌನ್​ ಮಾಡುವಂತಹ ಸ್ಥಿತಿ ಬಂದೊದಗಿದೆ. ಹೌದು! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕೆಲ ನಕಲಿ ಡಾಕ್ಟರ್​ಗಳು ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಕರೊನಾ ಲಕ್ಷಣವಿರುವ …

Read More »

ಕೋವಿಡ್-19 ಆನ್​ ಡ್ಯೂಟಿ ಸೌಲಭ್ಯ ದುರ್ಬಳಕೆ; ಆಚಾರ್ಯರಿಂದ ಕಾರು ಸೀಜ್‌

ವಿಜಯಪುರ: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿಗೊಳಿಸಿ ಪೊಲೀಸರು ಎಲ್ಲೆಡೆ ನಾಕಾ ಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ. ಇಷ್ಟಾಗಿಯೂ ಕೆಲವು ಮಂದಿ ಕಾನೂನು ಹಾಗೂ ಕಟ್ಟುನಿಟ್ಟು ನಿಯಮಗಳನ್ನು ತಪ್ಪಿಸಿ ಓಡಾಡಲು ಪ್ರಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆಗಳು ಕೇಳಿಬರುತ್ತಿವೆ. ಇಂತಹದ್ದೇ ಮತ್ತೊಂದು ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅರ್ಜೆಂಟ್ ಕೋವಿಡ್-19 ಆನ್​ ಡ್ಯೂಟಿ’ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ಅರ್ಚಕರನ್ನು ಕರೆದೊಯ್ಯುತ್ತಿದ್ದ ಕಾರು ಕಂಡುಬಂದಿದ್ದು, ಅದನ್ನು …

Read More »

ವಿಜಯಪುರ: ‘ಬಿಎಲ್ ಡಿಇ’ ಆಸ್ಪತ್ರೆಗೆ ರೆಮಿಡಿಸಿವರ್ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ

ವಿಜಯಪುರ: ತನ್ನ ಮಾಲಿಕತ್ವದ 500 ಕೋವಿಡ್ ಬೆಡ್ ಗಳ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಶೇಕಡ 70% ಕಡಿತಗೊಳಿಸಿ ಕಡಿಮೆ ವೆಚ್ಚದಲ್ಲಿ ನಿರ್ವಹಣೆ ಮಾಡಿ ಮಾನವೀಯತೆ ಮೆರೆದ ಮಾಜಿ ಗೃಹಸಚಿವ ಎಂ.ಬಿ ಪಾಟೀಲ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಮನವಿ ಸಲ್ಲಿಸಿದರೂ ಸರಿಯಾದ ಪ್ರಮಾಣದಲ್ಲಿ ರೆಮಿಡಿಸಿವರ್ ಔಷಧವನ್ನು ನೀಡದೇ, ಬೇಡಿಕೆಗೆ ಸರಿಯಾಗಿ ಸ್ಪಂದಿಸದೇ ಅಸಡ್ಡೆ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, …

Read More »

ಕರೊನಾ ಕರಾಳತೆ: ಹೆಣದ ರಾಶಿಯಲ್ಲಿ ವೈದ್ಯರ ಹಣದ ಹುಡುಕಾಟ- 9 ಲಕ್ಷ ರೂ ಕೊಟ್ಟರೂ ಮತ್ತಷ್ಟು ಆಸೆ!

ವಿಜಯಪುರ: ಕರೊನಾ ಎರಡನೆಯ ಅಲೆ ತನ್ನ ರೌದ್ರಾವತಾರ ತೋರುತ್ತಿರುವ ನಡುವೆಯೇ, ಇಂದಿನ ಕೆಲವು ಆಸ್ಪತ್ರೆಗಳ ಸ್ಥಿತಿ ನೋಡಿದರೆ, ಸೋಂಕಿತರು ಅದರ ಒಳ ಹೋದವರು ಹೊರಕ್ಕೆ ಬರುತ್ತಾರೆ ಎಂಬ ಯಾವ ಆಸೆಯನ್ನೂ ಇಟ್ಟುಕೊಳ್ಳದ ಪರಿಸ್ಥಿತಿ ಇದೆ. ಇವುಗಳ ನಡುವೆಯೇ ಕೆಲವರು ಆಸ್ಪತ್ರೆಗಳು ಹಣ ಮಾಡುವ ದಂಧೆಗೆ ಇಳಿದಿವೆ. ದಿನನಿತ್ಯ ಹೆಣದ ರಾಶಿ ನೋಡುತ್ತಿದ್ದರೂ, ಮನುಷ್ಯನ ಜೀವನದ ಅಸಾಯಕತೆ ಕಣ್ಣಮುಂದೆ ಇದ್ದರೂ, ಕೆಲ ವೈದ್ಯರು ಹಣಕ್ಕಾಗಿ ಬಾಯಿ ಬಿಡುವುದು ಮಾತ್ರ ನಿಲ್ಲದ ಸ್ಥಿತಿ …

Read More »

ಸಂಕಷ್ಟಕ್ಕೆ ಮಿಡಿದ ಎಂ.ಬಿ.ಪಾಟೀಲ್‌ಗೆ ಧನ್ಯವಾದ: ಸುಧಾಕರ್

ವಿಜಯಪುರ/ಬೆಂಗಳೂರು, ಏಪ್ರಿಲ್ 23: ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ವಿಜಯಪುರದ ಬಿಎಲ್‌ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೊನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ …

Read More »

ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು

ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ …

Read More »

ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…

ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ‌. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ …

Read More »

ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್

ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ …

Read More »

ಈಗ ಈಶ್ವರಪ್ಪನವರಿಗೆ ತಲೆಕೆಟ್ಟಿದೆ – ಸಿಎಂ ಬದಲಾಗದಿದ್ದರೆ ಇನ್ನೂ ಹಲವರಿಗೆ ತಲೆ ಕೆಡಲಿದೆ: ಯತ್ನಾಳ್

ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪನವರ ಆರೋಪಕ್ಕೆ ಮಹತ್ವ ನೀಡಬೇಕು. ಅವರು ಮಾಡಿರುವ ತಪ್ಪಾದರೂ ಏನು ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರು ಈಶ್ವರಪ್ಪ. ನಿನ್ನೆ ಮೊನ್ನೆ ಬಂದವರು ಅವರ ಬಗ್ಗೆ ಕಮೆಂಟ್ ಮಾಡುವುದು ಸರಿಯಲ್ಲ. ನಾನು ಹಾಗೂ ಯಡಿಯೂರಪ್ಪ ಪಕ್ಷ ಬಿಟ್ಟು ಮತ್ತೆ ಬಂದವರು. ಆದರೆ ಈಶ್ವರಪ್ಪ ಬಿಜೆಪಿಯಲ್ಲೇ …

Read More »

ಪೊಲೀಸ್ ಧ್ವಜ ದಿನಾಚರಣೆ: ಔರಾದಕರ್ ವರದಿ ಜಾರಿಗೆ ಆಗ್ರಹ

ವಿಜಯಪುರ: ರಾಘವೇಂದ್ರ ಔರಾದಕರ್ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪಿ.ಹುಲಸಗುಂದ ಆಗ್ರಹಿಸಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು. ಈ ಮೂಲಕ ಪೊಲೀಸರನ್ನು ಒತ್ತಡ ಮುಕ್ತರನ್ನಾಗಿ ಮಾಡಬೇಕು. ಪೊಲೀಸರು ಬಿಡುವಿನ ವೇಳೆ ತಮ್ಮ ಕುಟುಂಬದ ಕಲ್ಯಾಣಕ್ಕೆ ಗಮನ ನೀಡಲು ಅವಕಾಶ …

Read More »