Home / ಜಿಲ್ಲೆ / ಬಿಜಾಪುರ (page 13)

ಬಿಜಾಪುರ

ಕುಡಿದ ಮತ್ತಿನಲ್ಲಿ ನಡೆದೇ ಹೋಯ್ತು ಕೊಲೆ

ವಿಜಯಪುರ: ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ …

Read More »

ಜೈಲು ಪಾಲಾದ ಸಿಡಿಪಿಓಗಳು!

ವಿಜಯಪುರ : ಇಬ್ಬರು ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು ಮೂವರು ಸಿಡಿಪಿಓ ಗಳನ್ನು ಪೊಲೀಸರು ಜೈಲಿಗಟ್ಟಿರುವ ಘಟನೆ ನಡೆದಿದೆ. ಜಮಖಂಡಿಯ ಗೋಪಾಲ್ ತೇಲಿ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಗಿರೀಶ್ ತೇಲಿ, ಮಹಾದೇವ ತೇಲಿ ಎಂಬ ಅಧಿಕಾರಿಗಳು ಅಂಗನವಾಡಿ ಮಕ್ಕಳಿಗೆ ಸೇರಬೇಕಿದ್ದ ಕೆಎಂಎಫ್ ಹಾಲಿನ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಜಮಖಂಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ವಶಕ್ಕೆ ಪಡೆದಿದ್ದರು. …

Read More »

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ …

Read More »

ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!

ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮುಂದೆ ನನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ಬಿ ಎಸ್ ವೈ ಆಡಳಿತವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮುಂದೆ ತನಗೇನಾದರೂ ತೊಂದರೆಯಾದರೆ ಅದಕ್ಕೆ ಆಡಳಿತ ನಡೆಸುತ್ತಿರುವ ತಾವೇ ಜವಾಬ್ದಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಡಿಜಿ-ಐಜಿಪಿಗೆ ಪತ್ರ ಬರೆದಿದ್ದಾರೆ. ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆದ ಬೆನ್ನಲ್ಲೇ ಪತ್ರ ಬರೆದಿರುವ ಯತ್ನಾಳ್, ನಾನು ಪ್ರಖರ ಹಿಂದೂ ಪರ ಸಂಘಟನೆ ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ಮೇಲೆ ಈ ಹಿಂದೆ ಕೆಲ ಹಿಂದೂ ವಿರೋಧಿ ಹಾಗೂ ಮತಾಂಧ ಶಕ್ತಿಗಳು ದಾಳಿ …

Read More »

ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್​ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಸಿಎಂ ಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ

ವಿಜಯಪುರ(ಡಿಸೆಂಬರ್​. 25): ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ, ಬದಲಾವಣೆಯಾಗುತ್ತೋ ಗೊತ್ತಿಲ್ಲ. ಮತ್ತೇನಾದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸದಾಗಿ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಬಗ್ಗೆ ನೀವು ಮಾಧ್ಯಮದವರೇ ಅದನ್ನು ಎಬ್ಬಿಸಿದ್ದೀರಿ. ನೀವು ಯಾವಾಗ ಯಾರ ಪರವಾಗಿ ಸುದ್ದಿ ಬಿತ್ತರಿಸುತ್ತಿರೋ ಗೊತ್ತಿಲ್ಲ. ಎಲ್ಲವೂ …

Read More »

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ ಸಂಪುಟ ವಿಸ್ತರಣೆಯಾಗುತ್ತೋ, ಇನ್ನೇನು ಆಗುತ್ತೋ ಎಂಬುದು ಗೊತ್ತಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯತ್ನಾಳ್ ಪಕ್ಷದ ಅಧ್ಯಕ್ಷರಲ್ಲ, ಅವರೊಬ್ಬ ಆರ್ಡಿನರಿ ಶಾಸಕ. ಬೀದಿಯಲ್ಲಿ ನಿಂತು ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಪಕ್ಷದ ಚೌಕಟ್ಟಿನಲ್ಲಿ …

Read More »

ಸರಣಿ ಕಳ್ಳತನ- ಖದೀಮರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ: ಬುಧವಾರ ತಡರಾತ್ರಿಯಲ್ಲಿ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಂಧಗಿ ಪಟ್ಟಣದ ಸಂಗೀತಾ ಮೊಬೈಲ್ ಶೋರೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ಮೊಬೈಲ್‍ಗಳನ್ನು ಖದೀಮರು ದೋಚಿದ್ದಾರೆ. ಅಲ್ಲದೆ ಸಿದ್ದೇಶ್ವರ ಸೂಪರ್ ಬಾಜಾರ್, ಪೂಜಾರಿ ಟೈರ್ ರಿಮೊಡಿಂಗ್ ಶಾಫ್ ಹಾಗೂ ಸ್ಪೂರ್ತಿ ವೈನ್ ಶಾಫ್ ಗಳಲ್ಲಿಯೂ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. …

Read More »

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ.: ಯತ್ನಾಳ ಕಿಡಿ

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »