Breaking News

ಬಿಜಾಪುರ

ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..

ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ರಾತ್ರಿ ಇಡೀ ಅಲೆದು ಕೊನೆಗೆ …

Read More »

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ …

Read More »

ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿಆಂಟಿಯ ಹೈಟೆಕ್ ಸೆಕ್ಸ್ ದಂಧೆ

ವಿಜಯಪುರ: ಕೊರೊನಾ ರುದ್ರ ನರ್ತನದ ನಡುವೆ ಎಗ್ಗಿಲ್ಲದೇ ಮಾಂಸ ದಂಧೆ ನಡೆಯುತ್ತಿದೆ. ವಿಜಯಪುರ ನಗರದ ಗಾಂಧಿನಗರದಲ್ಲಿ ಮಾಂಸ ದಂಧೆ ಹಾಡಹಗಲೇ ಪ್ರಾರಂಭವಾಗಿದೆ. ಮಧ್ಯ ವಯಸ್ಕ ಮಹಿಳೆ ಈ ಮಾಂಸ ದಂಧೆಯನ್ನು ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ. ವೇಶ್ಯಾವಾಟಿಕೆಗೆ ಮುಂಬೈ, ಪುಣೆಯಿಂದ ಯುವತಿಯರನ್ನು ಕರೆಸುತ್ತಿದ್ದಾಳೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಕುಟುಂಬಸ್ಥರು ಹೆಚ್ಚಾಗಿರುವ ಈ ಏರಿಯಾದಲ್ಲಿ ವೇಶ್ಯಾವಾಟಿಕೆ ನಡಸಬೇಡಿ ಅಂತಾ ಸ್ಥಳೀಯರು ಹೇಳಿದ್ರೆ, ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿ ಎಂದು ಧಮ್ಕಿ …

Read More »

ಕಾಪಿ ಚೀಟಿ ಕೊಡುವ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ : ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ

ವಿಜಯಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಸಾಗರ ಚಲವಾದಿ (19) ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಹೂವಿನಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ನಕಲು ಮಾಡಲು ಕಾಪಿ ಚೀಟಿ ಕೊಡುವ ವೇಳೆ ಪೊಲೀಸರು ಯುವಕನನ್ನು ಹಿಡಿದು, ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಯುವಕ ಮೃತಪಟ್ಟಿದ್ದಾನೆ …

Read More »

ಯೋಚಿಸಿ ಮಾತನಾಡುವಂತೆ ಸಿದ್ದುಗೆ ಕೋಟ ಶ್ರೀನಿವಾಸ್ ವಾರ್ನ್

ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …

Read More »

ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು

ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …

Read More »

ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು

ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು. ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ ಈ ಖದೀಮರ ಮಾತನ್ನು …

Read More »

ಮೀನುಗಾರಿಕೆಗೆ ತೆರಳಿದ್ದ ಮೂವರಲ್ಲಿ ಇಬ್ಬರು ನಾಪತ್ತೆ………….

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪರಶುರಾಮ ಲಮಾಣಿ(35) ಹಾಗೂ ರಮೇಶ ಲಮಾಣಿ (38) ನಾಪತ್ತೆಯಾಗಿರುವ ಮೀನುಗಾರರು. ಗುರುವಾರ ಸಂಜೆ ತೆಪ್ಪದ ಮೂಲಕ ಮೂವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಭಾರೀ ಮಳೆಗಾಳಿಗೆ ತೆಪ್ಪ ಮುಗಿಚಿ ಬಿದ್ದಿದೆ. ಹೀಗಾಗಿ ಮೂವರ ಪೈಕಿ ಅಕ್ಷಯ ಲಮಾಣಿ ಎಂಬಾತ ಈಜಿ ದಡ ಸೇರಿದ್ದಾನೆ. ಆದರೆ ಉಳಿದ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. …

Read More »

ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ……

ವಿಜಯಪುರ: ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ ಮಾಡಿ ಆತಂಕ ಮೂಡಿಸಿದ್ದಾನೆ. ಜಿಲ್ಲೆಯ ಇಂಡಿಯಿಂದ ಬೈಕಿನಲ್ಲಿ ಸಹೋದರನ ಜೊತೆಗೆ ಲಚ್ಯಾಣ ಗ್ರಾಮಕ್ಕೂ ತೆರಳಿರುವ ವ್ಯಕ್ತಿ ಬುಧವಾರ ದಿಢೀರನೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈತ ಕಲಬುರಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮುಗಿಸಿದ್ದಾನೆ. ಮೇ 16 ರಂದು ಮುಂಬೈನಿಂದ ಪತ್ನಿ ತವರೂರಿಗೆ ತೆರಳಿದ್ದ ವೇಳೆ ಕ್ವಾರಂಟೈನ್ ಗೆ ಒಳಗಾಗಿದ್ದ ಈತ …

Read More »

ನೀರು-ಕೆಸರಲ್ಲಿ ಬೈಕ್ ತಳ್ಳುತ್ತಾ ಕರ್ನಾಟಕಕ್ಕೆ ಎಂಟ್ರಿ………..

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚಾಗಿ ಪತ್ತೆಯಾಗಿದೆ. ಇದರಿಂದ ಜಿಲ್ಲಾಡಳಿತ ಒಂದಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಜನ ಜಿಲ್ಲಾಡಳಿತದ ಕಣ್ಣಿನಿಂದ ತಪ್ಪಿಸಿಕೊಂಡು ಕಳ್ಳದಾರಿ ಮೂಲಕ ಎಂಟ್ರಿ ಆಗುತ್ತಿದ್ದಾರೆ. ಕರ್ನಾಟಕಕ್ಕೆ ಮುಂಬೈನದ್ದೇ ಟೆನ್ಶನ್. ಮಹಾರಾಷ್ಟ್ರದಿಂದ ಬರೋರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರ ಗಡಿದಾಟಿದೆ. ಈಗ 7 ದಿನ ಕ್ವಾರಂಟೈನ್‍ಗೆ ಸೂಚಿಸಿದ್ದರಿಂದ ಮುಂಬೈನಿಂದ ಬರುವವರು ಕಳ್ಳಾಟ ಮಾಡುತ್ತಿದ್ದಾರೆ. ಕ್ವಾರಂಟೈನ್ ತಪ್ಪಿಸಿಕೊಳ್ಳಲು ನದಿಯಿಂದ …

Read More »