ವಿಜಯಪುರ : ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರೂ ಸುದೈವಶಾತ್ ಯಾವುದೇ ಅಪಾಯವಾಗಿಲ್ಲ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ ಸಂಘಟನೆಗಾಗಿ ಜಿಲ್ಲೆಯ ಪ್ರವಾಸದಲ್ಲಿದ್ದರು. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ …
Read More »ಸಿಡಿಲಿಗೆ ರೈತ, ಹೋರಿ ಬಲಿ: ಓರ್ವನಿಗೆ ಗಾಯ, ದ್ರಾಕ್ಷಿ ಬೆಳೆ ಹಾನಿ
ವಿಜಯಪುರ: ಬೇಸಿಗೆ ಮಳೆಯ ಬಿರುಗಾಳಿ, ಸಿಡಿಲಿಗೆ ಜಿಲ್ಲೆಯಲ್ಲಿ ಓರ್ವ ರೈತ ಹಾಗೂ ಒಂದು ಜಾನುವಾರು ಬಲಿಯಾಗಿದ್ದು, ಮತ್ತೋರ್ವ ರೈತ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಬಿರುಗಾಳಿ, ಗುಡು, ಸಿಡಿಲಿನ ಅಬ್ಬರ ಜೋರಾಗಿದೆ. ಪರಿಣಾಮ ಗೋದಿ ರಾಶಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರಿ ಹೊದಿಸುವಾಗ ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್.ಎಚ್. ಗ್ರಾಮದ ಯುವ ರೈತ ಬಸವರಾಜ ಹಣಮಂತ ಹಮಾರಿ ಹಾಗೂ ಸಂಗಪ್ಪ ಹಣಮಂತ ಹಮಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …
Read More »ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!
ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …
Read More »ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು. ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ …
Read More »ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ. ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಲೋಕಾರ್ಪಣೆಗೆ ಸಿದ್ಧಗೊಂಡ ಎಂ.ಬಿ.ಪಾಟೀಲ್ ಕಂಚಿನ ಪ್ರತಿಮೆ
ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ …
Read More »ಎಂಬಿ.ಪಾಟೀಲ್ ನನ್ನ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲ್ಲಿಸುವ ಹೊಣೆ ನನ್ನದು: ಶಿವಾನಂದ ಪಾಟೀಲ್
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬಬಲೇಶ್ವರ ಬಿಟ್ಟು ನಾನು ಪ್ರತಿನಿಧಿಸುತ್ತಿರುವ ಬಸವನಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನಗಿರಲಿ ಎಂದು ಸ್ವಪಕ್ಷೀಯ ಬಸವನಬಾಗೇವಾಡಿ ಹಾಲಿ ಶಾಸಕ ಶಿವಾನಂದ ಪಾಟೀಲ ಆಹ್ವಾನಿಸಿದ್ದಾರೆ. ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ನನ್ನ ಮೂಲ ಕ್ಷೇತ್ರವಾಗಿದ್ದು, ಅಲ್ಲಿಂದ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ಧೇನೆ. ರಾಜಕೀಯ ಕಾರಣದಿಂದ ಬಬಲೇಶ್ವರ ಕ್ಷೇತ್ರದ ಜನರಿಗೆ ಹೇಳದೇ ನಾನು …
Read More »ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ
ವಿಜಯಪುರ: ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ …
Read More »ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ
ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ. ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ …
Read More »ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ
ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …
Read More »