Breaking News
Home / ಜಿಲ್ಲೆ / ಬಿಜಾಪುರ (page 6)

ಬಿಜಾಪುರ

ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ

ವಿಜಯಪುರ: ಹಣದ ಆಸೆಗಾಗಿ ಸರ್ಕಾರಿ ಉದ್ಯೋಗಿನಿಯನ್ನು ಅಪಹರಣ ಮಾಡಿ 5 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಜುಮ್ಮನಗೋಳ, ಶಿವಾಜಿ ಉಪ್ಪಾರ, ಆಕಾಶ ವೀರಕರ, ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು. ಇಂಡಿ ಪಟ್ಟಣದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ವಿಜಯಪುರ ನಗರ ನಿವಾಸಿ ಲಕ್ಷ್ಮೀ ಜಗದೀಶ ಸೊನ್ನದ ಎಂಬ ನೌಕರಳು ಅಪಹರಣಕ್ಕೊಳಗಾದವರು. ಆ.22 ರಂದು ಕೆಲಸ ಮುಗಿಸಿ ವಿಜಯಪುರ ನಗರಕ್ಕೆ …

Read More »

ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ

ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.   ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …

Read More »

ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿ ದ್ದರೂ ತಮ್ಮ ಸನ್ನಡತೆಯಿಂದ. ಉತ್ತಮ ಜೀವ ರೂಪಿಸಿಕೊಳ್ಳುವ ಭರವಸೆ ಮೂಡಿಸಿರುವ ಖೈದಿಗಳಲ್ಲಿ ಮೂವರು ಸಹೋದರರು ಹಾಗೂ ಅವರ ತಂದೆ ಸೇರಿ ಒಂದೇ ಕುಟುಂಬದ ನಾಲ್ವರು ಇದ್ದಾರೆ. ಬಸಪ್ಪ ಮಲಕಾರಿ ಜಟಗೊಂಡ, ಗೌಡಪ್ಪ ಜಟಗೊಂಡ, …

Read More »

ಬಬಲೇಶ್ವರ ಪಾಕಿಸ್ತಾನದಲ್ಲಿ ಇದೆಯಾ: ಸವದಿ ಪ್ರಶ್ನೆ

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರವೇನು ಪಾಕಿಸ್ತಾನದಲ್ಲಿ ಇದೆಯಾ? ಅದು ಕರ್ನಾಟಕ ರಾಜ್ಯದಲ್ಲಿ ಇದೆ ತಾನೇ? ಹೀಗೆಂದು ಪ್ರಶ್ನಿಸಿದವರು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ. ನಾಗಠಾಣದಲ್ಲಿ ಭಾನುವಾರ ನಡೆದ ನೂತನ ಬಸ್‌ ನಿಲ್ದಾಣ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದಿಂದ ನೀವು ಸ್ಪರ್ಧಿಸುತ್ತೀರಿ ಎಂಬ ಮಾತು ಕೇಳಿಬರುತ್ತಿದೆ ನಿಜಾನಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.   ‘ನಾನು ಸದ್ಯ ವಿಧಾನ …

Read More »

ಅಲೋಕ್​ ಕುಮಾರ್​ ಎಚ್ಚರಿಕೆಗೆ ಹೆದರಿ ಕೋರ್ಟ್​ಗೆ ಶರಣಾದ ಭೀಮಾತೀರದ ಕುಖ್ಯಾತ ಹಂತಕನ ಪತ್ನಿ

ವಿಜಯಪುರ: ಎಡಿಜಿಪಿ ಅಲೋಕ್​ ಕುಮಾರ್​ ಖಡಕ್​ ಎಚ್ಚರಿಕೆಗೆ ಹೆದರಿದ ಭೀಮಾತೀರದ ಕುಖ್ಯಾತ ಹಂತಕ ಮಲ್ಲಿಕಾರ್ಜುನ್ ಚಡಚಣನ ಪತ್ನಿ ವಿಮಲಾಬಾಯಿ ಚಡಚಣ ನ್ಯಾಯಾಲಯಕ್ಕೆ ಆಗಮಿಸಿ ಬಂದು ಶರಣಾಗಿದ್ದಾಳೆ. ವಿಜಯಪುರ 4ನೇ JMFC ನ್ಯಾಯಾಲಯಕ್ಕೆ ಆಗಮಿಸಿ ವಿಮಲಾಬಾಯಿ ಶರಣಾಗಿದ್ದಾಳೆ. 2020ರ ನವೆಂಬರ್ 2 ರಂದು ಮಹಾದೇವ ಸಾಹುಕಾರ ಬೈರಗೊಂಡ ಮೇಲೆ ನಡೆದ ದಾಳಿಯ ಬಳಿಕ ವಿಮಲಾಬಾಯಿ ಭೂಗತಳಾಗಿದ್ದಳು. ಕೆಲ ದಿನಗಳ ಹಿಂದಷ್ಟೇ ಅಲೋಕ್​ ಕುಮಾರ್​ ಅವರು ಭೂಗತರಾದ ಚಡಚಣ ಗ್ಯಾಂಗ್‌ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು. …

Read More »

ರಾತ್ರಿ ನಾಯಿಗಳು ಬೊಗಳುವ ಸದ್ದು ಕೇಳಿ ಮನೆಯಿಂದ ಹೊರಬಂದ ವಿಜಯಪುರ ನಿವಾಸಿಗಳಿಗೆ ಕಾದಿತ್ತು ಶಾಕ್!​

ವಿಜಯಪುರ: ಕಾಳರಾತ್ರಿ, ನಿರವ ಮೌನ, ನಾಯಿಗಳ ಬೊಗಳುವಿಕೆಯ ಸದ್ದು, ಗಾಬರಿಗೊಂಡು ಮನೆಯಿಂದ ಹೊರಬಂದ ನಿವಾಸಿಗಳಿಗೆ ಕಂಡಿದ್ದು ದೊಣ್ಣೆ ಹಿಡಿದುಕೊಂಡು, ಮುಸುಕು ಧರಿಸಿ ಹೊರಟಿದ್ದ ದಾಂಡಿಗರ ಪಡೆ….! ಅಬ್ಬಾ ಏನಿದು? ಯಾರು ಈ ಮುಸುಕುಧಾರಿಗಳು? ಎಲ್ಲಿಗೆ ಹೊರಟಿದ್ದಾರೆ? ಎಂದು ಅರಿಯದ ಜನ ಆತಂಕದಿಂದಲೇ ಮನೆಯ ಬಾಗಿಲು, ಕಿಟಕಿ ಹಾಕಿಕೊಂಡು ಬೆಚ್ಚಗೆ ಮಲಗಿಕೊಂಡಿದ್ದಾರೆ. ಆದರೆ, ರಾತ್ರಿ ಪೆಟ್ರೋಲಿಂಗ್‌ನಲ್ಲಿದ್ದ ಪೊಲೀಸರು ನಾಯಿಗಳ ಜೋರಾದ ಬೊಗಳುವಿಕೆಯ ಸದ್ದು ಕೇಳಿ ಆ ಬಡವಾಣೆಗೆ ಕಾಲಿಟ್ಟರೆ ಇದ್ದಕ್ಕಿದ್ದಂತೆ ಎಲ್ಲರೂ ಮಂಗಮಾಯ. …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತೀರ್ಮಾನಿಸುವುದು ಜನ,ಬಿಜೆಪಿ ನಾಯಕರಲ್ಲ: ರಮೇಶ್ ಕುಮಾರ್

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುವುದು ರಾಜಕೀಯ ಸಹಜ. ಆದರೆ ಯಾರು ಅಧಿಕಾರಕ್ಕೆ ಬರಬೇಕೆಂದು ತೀರ್ಮಾನಿಸುವುದು ರಾಜ್ಯದ ಜನತೆಯೇ ಹೊರತು ಬಿಜೆಪಿ ನಾಯಕರಲ್ಲ ಎಂದು ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷರಾದ ಶಾಸಕ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.   ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕರೇ ಹೇಳಿದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತೆಂದು ಕಾಂಗ್ರೆಸ್ ನಾಯಕರು ಹೇಳಿದರೆ ಅದರ ರಾಜಕಾರ …

Read More »

ಹರ ಘರ್ ತಿರಂಗಾ ಪೊಸ್ಟರ್ ತ್ರೀ ಚಕ್ರ ವಿತರಣೆ ಬಿಡುಗಡೆಗೊಳಿಸಿದ ಸಚಿವ ಕತ್ತಿ

ವಿಜಯಪುರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ವಿಕಲಚೇತನ ಇಲಾಖೆಯಿಂದ 10 ಜ‌ನ ಅಂಗವಿಕಲರಿಗೆ ತ್ರೀ ಚಕ್ರ ಸೈಕಲ್ ವಿತರಣೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಹಾಗೂ ಚೆಕ್ ವಿತರಿಸಲಾಯಿತು. ಹರ್ ಘರ್ ತಿರಂಗಾ ಪ್ರಚಾರದ ಪೋಸ್ಟರ್ …

Read More »

ಆಲಮಟ್ಟಿ ಜಲಾಶಯದಲ್ಲಿ ಅವನಲ್ಲ, ಅವಳು. ಬುರ್ಖಾಧಾರಿಯ ಅಸಲಿಯತ್ತೇನು? ಪೊಲೀಸರು ಹೇಳಿದ್ದೇನು?

ವಿಜಯಪುರ: ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಬುರ್ಖಾಧಾರಿ ವ್ಯಕ್ತಿಯೊಬ್ಬ ಸಂಚರಿಸಿ ಭಾರಿ ಆತಂಕ ಸೃಷ್ಟಿಯಾಗಿತ್ತು. ಆಲಮಟ್ಟಿ ಜಲಾಶಯದ ಸುತ್ತಮುತ್ತ ಅನುಮಾನಾಸ್ಪದವಾಗಿ ತಿರುಗಾಡುತ್ತಾ ಇದ್ದ ಈ ವ್ಯಕ್ತಿ ಬುರ್ಖಾ ಧರಿಸಿದ್ದ ಕಾರಣ ಮೊದಲು ಮಹಿಳೆ ಎಂದು ಅಂದುಕೊಳ್ಳಲಾಗಿತ್ತು. ಕೆಲ ಸಮಯದ ಬಳಿಕ ಆ ಬುರ್ಖಾಧಾರಿ, ಪಕ್ಕದಲ್ಲಿರುವ ಮುಳ್ಳು ಕಂಟಿಗಳ ಕಡೆಗೆ ಹೋಗಿ ವಾಪಸ್​ ಬರುವಾಗ ಬುರ್ಖಾ ತೆಗೆದು ಆಚೆ ಬಂದಿದ್ದನ್ನು ಗಮನಿಸಿದ ಪೊಲೀಸರು ಬುರ್ಖಾ ಧರಿಸಿದ್ದು ಮಹಿಳೆ ಅಲ್ಲ. ಪುರುಷ ಎಂಬುದು …

Read More »

ಮೋದಿ-ಯೋಗಿಗೆ ಕುಟುಂಬವಿಲ್ಲ, ನಮಗಿದೆ: ಕುಟುಂಬ ರಾಜಕಾರಣಕ್ಕೆ ಸಚಿವ ಉಮೇಶ್​ ಕತ್ತಿ ಸಮರ್ಥನೆ

ವಿಜಯಪುರ: ಪ್ರಧಾನಿ ಮೋದಿ ಹಾಗೂ ಯೋಗಿಗೆ ಕುಟುಂಬ ಇಲ್ಲ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಕುಟುಂಬ ರಾಜಕಾರಣ ಎನ್ನುವುದು ಇದೆ ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದರು‌.   ಮೋದಿ, ಯೋಗಿ ಕುಟುಂಬ ಇಲ್ಲದ ನಾಯಕರು. ನಾವೆಲ್ಲ ಕುಟುಂಬ ರಾಜಕಾರಣದಿಂದ ಬಂದವರು. ನನ್ನ ತಂದೆ ರಾಜಕಾರಣದಲ್ಲಿ ಇದ್ದರು, ಈಗ ನಾನೂ ಇದ್ದೇನೆ. ಯಡಿಯೂರಪ್ಪ ರಾಜಕಾರಣದಲ್ಲಿದ್ದರು, ಈಗ ಅವರ ಪುತ್ರ …

Read More »