Breaking News

ಬೆಂಗಳೂರು

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

ರಾಮನಗರ: ಗ್ಯಾಸ್ ಸಮಸ್ಯೆ  ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮಟೆ ಚಳುವಳಿ ನಡೆಸಿದ್ದಾರೆ. ಗ್ಯಾಸ್ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳು ಉಪಚುನಾವಣೆಯಲ್ಲಿ ಮುಳುಗಿವೆ. ಆಟೋ ಚಾಲಕರು, ಹೋಟೆಲ್ ಮಾಲೀಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ನಿತ್ಯ ಬಂಕ್ ಮುಂದೆ ಆಟೋ …

Read More »

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ (LPG), ಆಟೋ ಗ್ಯಾಸ್ ಸಮಸ್ಯೆಯಾಗಿದ್ದು, ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಆಟೋ ಚಾಲಕರಿಗೆ ತೊಂದರೆ ಆಗುತ್ತಿದೆ. ಹೋಟೆಲ್‌ನವರಿಗೆ ತೊಂದರೆಯಾಗಿದೆ. ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಗ್ಯಾಸ್‌ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು. …

Read More »

50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

  ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ, ಡಿವೈಎಸ್‌ಪಿ ಕಲಾವತಿ ನೇತ್ರತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಬಸವರಾಜ್ ಪ್ರಭು …

Read More »

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ  ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು  ಬೆಂಗಳೂರು ಪೊಲೀಸರು  ಬಂಧಿಸಿದ್ದಾರೆ. ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಧಿಕಾರಿ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ …

Read More »

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿದರು. ಅವರನ್ನು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ ಮೋಹನ್‌ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More »

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

ಬೆಂಗಳೂರು: ಬಾಗಲಕೋಟೆಯ ಪ್ರತಿ ಹಳ್ಳಿಗೆ 5ರಿಂದ 10 ಲಕ್ಷ ರೂ.ಯನ್ನು ಕಾಂಗ್ರೆಸ್ ಪಕ್ಷ ಹಂಚುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆಯ  ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಖಚಿತ. ಚರಂತಿಮಠರನ್ನು ಗೆಲ್ಲಿಸಲು ಜನರು ತೀರ್ಮಾನ ಮಾಡಿದ್ದಾರೆ. ಮುಸ್ಲಿಮರೂ ಕೂಡ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ. ಹಳ್ಳಿಗಳಲ್ಲಿ ಸೋಲು ಖಚಿತವೆಂದು ಗೊತ್ತಾದ ಬಳಿಕ …

Read More »

ಕೈಚೀಲ ಖರೀದಿ ಅಕ್ರಮ – ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ. ಕೈಚೀಲ ಖರೀದಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್  ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನಲ್ಲಿ  ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಕೈಚೀಲ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎಫ್‌ಐಆರ್ ದಾಖಲು ಮಾಡಲು ಮನವಿ ಮಾಡಲಾಗಿತ್ತು . ಆದರೆ ಪೂರ್ವಾನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ …

Read More »

ದಕ್ಷ ಪೊಲೀಸ್ ಸೇವೆಗಾಗಿ ಕುಮಟಾದ ರಾಮನಾಥ ಪಟಗಾರಗೆ ಒಲಿದ ‘ಮುಖ್ಯಮಂತ್ರಿಗಳ ಚಿನ್ನದ ಪದಕ’

ಕುಮಟಾ: ಪೊಲೀಸ್ ಇಲಾಖೆಯಲ್ಲಿನ ದಕ್ಷ ಹಾಗೂ ನಿಷ್ಠಾವಂತ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ 2025ನೇ ಸಾಲಿನ ‘ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಕುಮಟಾ ತಾಲೂಕಿನ ಕಲಭಾಗ ಗ್ರಾಮದವರಾದ ಹಾಗೂ ಪ್ರಸ್ತುತ ಮುಖ್ಯಮಂತ್ರಿಗಳ ಭದ್ರತಾ ಪಡೆಯ ಸಿಬ್ಬಂದಿಯಾಗಿರುವ ಶ್ರೀ ರಾಮನಾಥ ಎಸ್. ಪಟಗಾರ ಅವರು ಭಾಜನರಾಗಿದ್ದಾರೆ. ಇವರ ಈ ಸಾಧನೆ ಇಡೀ ಉತ್ತರ ಕನ್ನಡ ಜಿಲ್ಲೆಗೆ ಹಾಗೂ ಕುಮಟಾ ತಾಲೂಕಿಗೆ ಹೆಮ್ಮೆಯನ್ನು ತಂದಿದೆ. ಜುಲೈ 1, 1978ರಲ್ಲಿ ಹಿರಿಯ ಧುರೀಣರಾದ ಶ್ರೀ …

Read More »

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ ಕುಮಟಾ: ಭಾರತೀಯ ಸೇನೆಯಲ್ಲಿ ಸತತ 24 ವರ್ಷಗಳ ಕಾಲ ದೇಶಸೇವೆಗೈದು ಸೇವಾ ನಿವೃತ್ತಿ ಪಡೆದಿರುವ ತಾಲೂಕಿನ ಕಡೇಕೋಡಿಯ ಹೆಮ್ಮೆಯ ಪುತ್ರ, ಹವಾಲ್ದಾರ್ ಶ್ರೀ ವಿನಾಯಕ ಹೊಸಬಯ್ಯ ಪಟಗಾರ ಅವರು ತಮ್ಮ ಹುಟ್ಟೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲು ಕುಮಟಾ ಸಜ್ಜಾಗಿದೆ. ದೇಶದ ವಿವಿಧ ಗಡಿಗಳಲ್ಲಿ ಹಾಗೂ ಬೇರೆ ಬೇರೆ ಪ್ರದೇಶಗಳಲ್ಲಿ …

Read More »

ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಪರ್ಸ್ ಸಿಕ್ಕಿದೆ

ಕುಮಟಾ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಹಣವಿರುವ ಪರ್ಸ್ ಒಂದು ಸಾರಿಗೆ ಸಂಸ್ಥೆಯ ನಿರ್ವಾಹಕರಿಗೆ ಸಿಕ್ಕಿದ್ದು, ವಾರಸುದಾರರು ಸೂಕ್ತ ದಾಖಲೆಗಳನ್ನು ನೀಡಿ ಪಡೆದುಕೊಳ್ಳುವಂತೆ ಕುಮಟಾ ಘಟಕದ ಸಂಚಾರ ಶಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 01/03/2026 ರಂದು ಮಧ್ಯಾಹ್ನ 14.00 ಗಂಟೆಗೆ ಕುಮಟಾ ಬಸ್ ನಿಲ್ದಾಣದಿಂದ ಕಡ್ನೀರು ಮಾರ್ಗವಾಗಿ ಹೊನ್ನಾವರಕ್ಕೆ ಹೋಗುವ ಬಸ್ಸಿನಲ್ಲಿ (ವಾಹನ ಸಂಖ್ಯೆ: KA 31 F 1292) ಈ ಘಟನೆ ನಡೆದಿದೆ. ಬಸ್ಸು …

Read More »