ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ ಇಂದು ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ವಿಜಯೋತ್ಸವ ಹಾಗೂ ಹೊಸವರ್ಷದ ಸಂಭ್ರಮಾಚರಣೆಯನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ… 1818ರ ಜನವರಿ 1ರಂದು ಸಂಭವಿಸಿದ ಆ ಐತಿಹಾಸಿಕ ವಿಜಯವು ಕೇವಲ ಒಂದು ಯುದ್ಧದ ಗೆಲುವಲ್ಲ; ಅದು ಜಾತಿವಾದದ ವಿರುದ್ಧ ಸ್ವಾಭಿಮಾನದಿಂದ ಗಳಿಸಿದ ಮಹಾನ್ ಜಯ, …
Read More »ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್ 108 ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದೆ. ಈ ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆಯು ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಮತ್ತು …
Read More »ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ
ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು
ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದಾನಂದನಗರದ ಎನ್ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ. ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ …
Read More »12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್
ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ. ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ …
Read More »ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …
Read More »ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?
ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ. ವಯಸ್ಸಾದಂತೆ ಅವರಿಗೆ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಆನೇಕರು ವೃದ್ಧರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿರುತ್ತಾರೆ. ಇದೆಲ್ಲವನ್ನೂ ಮನಗಂಡಿರುವ ಸರ್ಕಾರ, 65 ವರ್ಷದ ಅಥವಾ ಮೇಲ್ಪಟ್ಟ ವೃದ್ಧರಿಗಾಗಿ 2007 ರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿತ್ತು. ಏನಿದು ಸಂಧ್ಯಾ ಸುರಕ್ಷಾ ಯೋಜನೆ? ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು, ವಿಶೇಷಚೇತನರು, ಅವಿವಾಹಿತ ಮಹಿಳೆಯರಿಗೆ …
Read More »ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶುಕ್ರವಾರ ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠಕ್ಕೆ ಅರ್ಜಿಯ ತುರ್ತು ವಿಚಾರಣೆಯೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭೀಯೋಜಕ ಬಿ.ಎ. …
Read More »ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ
ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವಿಜಯನಗರ, ಜಾಲಹಳ್ಳಿ, ಆರ್ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. …
Read More »
Laxmi News 24×7