ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರು ದೇಶವನ್ನು ಅಧೋಗತಿಗೆ …
Read More »ಆರ್ಎಸ್ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್, ಬ್ಲೂ ಫಿಲ್ಮ್, ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..?
ಆರ್ಎಸ್ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್ ಹೊಡೆಯಬೇಕಾ..? ಬ್ಲೂ ಫಿಲ್ಮ್ ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..? ಏನು ಮಾಡಬೇಕು..? ಹೇಳಿಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಆರ್ಆರ್ಎಸ್ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಪ್ರಶ್ನೆ ಮಾಡಿದ್ದು ಆರ್ಎಸ್ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ರಾಜ್ಯ ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ..? …
Read More »ಕಾಂಗ್ರೆಸ್ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಮುನ್ನವೇ ರಾಜಕೀಯ ಜ್ವರ ಆರಂಭವಾಗಿದೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ಸಮಾಜಸೇವಕರು ಲಗ್ಗೆ ಇಟ್ಟಿದ್ದಾರೆ. ವಿವಿಧ ಪಕ್ಷಗಳ ಹಾಲಿ ಶಾಸಕರು ಮತ್ತೂಮ್ಮೆ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ, ಸಮಾಜ ಸೇವೆ ನೆಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಸನ್ನದ್ಧರಾಗಿದ್ದಾರೆ. …
Read More »ಭಾರೀ ಮಳೆಗೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಬಿಬಿಎಂಪಿಯ ಕೆಲಸಕ್ಕೆ ಸಾರ್ವಜನಿಕರ ಆಕ್ರೋಶ
ಬೆಂಗಳೂರು: ಭಾರೀ ಮಳೆಗೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಇದೇನು ಕೆರೆಯೋ ಎನ್ನುವಂತೆ ರಸ್ತೆಗಳು ಭಾಸವಾಗುತ್ತಿವೆ. ರಾಜ್ಕುಮಾರ್ ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತಿದ್ದು, ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ದ್ವಿಚಕ್ರ ವಾಹನಗಳು ಕೆಟ್ಟು ನಿಂತಿವೆ. ಸಾರ್ವಜನಿಕರು ಬಿಬಿಎಂಪಿಯ ಕೆಲಸಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ಕೂಡ ಧಾರಾಕಾರ …
Read More »ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
ಬೆಂಗಳೂರು: ಬೇಷರತ್ ಆಗಿ ಜೆಡಿಎಸ್ ಸೇರುತ್ತೇನೆ ಎಂದಿದ್ದ ಸಿ.ಎಂ.ಇಬ್ರಾಹಿಂ ಈಗ ಪರಿಷತ್ ಸದಸ್ಯ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಚಾರ ಜೆಡಿಎಸ್ ನಾಯಕರಿಗೆ ಕಸಿವಿಸಿ ಸೃಷ್ಟಿಸಿದೆ. ಬದಲಾದ ಸನ್ನಿವೇಶದಲ್ಲಿ ಪರಿಷತ್ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಇಬ್ರಾಹಿಂ, ನನಗೆ ಅವಕಾಶ ನೀಡಿದರೆ ಮುಸ್ಲಿಂ ಸಮುದಾಯಕ್ಕೆ ಒಳ್ಳೆಯ ಸಂದೇಶ ಕೊಟ್ಟಂತಾಗಲಿದೆ ಎಂಬ ದಾಳ ಉರುಳಿಸಿದ್ದಾರೆ. ಇಲ್ಲದೇ ಹೋದರೆ ಇಡೀ ಸಮುದಾಯ ಅನುಮಾನದಿಂದಲೇ ನೋಡುವಂತಾಗಲಿದೆ. ನನಗೆ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಿ ಎಂದು ಇಬ್ರಾಹಿಂ …
Read More »ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಡಿವೈಎಸ್ಪಿ ಆಪ್ತ ‘ಆರ್ಪಿಐ’ ಸೇರಿ ಇಬ್ಬರ ಬಂಧನ
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಆಪ್ತ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಆರ್ಪಿಐ) ಜಿ. ಬಸವರಾಜ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ. ‘ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಬಸವರಾಜ್, ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ವೃತ್ತಿ ಆರಂಭಿಸಿದ್ದರು. ಇನ್ನೊಬ್ಬ ಬಂಧಿತ ಸಿ.ಎಂ. ನಾರಾಯಣ, ಪಿಎಸ್ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿ. ಇಬ್ಬರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ …
Read More »ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್ನಲ್ಲಿ …
Read More »850 ರೂಪಾಯಿ ಬೆಲೆಯ ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ.
ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ ಅಮೃತ ಅಂತ ಹೇಳೋರೆ ಹೆಚ್ಚು. ಅಷ್ಟು ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ. ಹೀಗಂತ ಹೇಳಿದ್ದು ಗೋವಾ ಕೃಷಿ ಸಚಿವ ರವಿ ನಾಯ್ಕ್. ಇತ್ತೀಚೆಗೆ ಅಮಿತ್ ಶಾ ಗೋವಾಗೆ ಭೇಟಿ ಕೊಟ್ಟ ವೇಳೆ ಅವರಿಗೆ ಇದೇ …
Read More »ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್ ಸಿಂಗ್ ಸಿರೋಯಾ, ಕಾಂಗ್ರೆಸ್ನ ಆರ್.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್.ಎಂ. ರಮೇಶ್ ಗೌಡ …
Read More »ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ನಿಸರ್ಗದಿಂದಲೇ ಬಯಲಾಗಿದೆ: ಕಾಂಗ್ರೆಸ್
ಬೆಂಗಳೂರು: ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಶೇ 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ. ಇದು ಶೇ 40 …
Read More »