Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 21)

ಬೆಂಗಳೂರು ಗ್ರಾಮಾಂತರ

ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್‌ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ

ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …

Read More »

ಇಂದು SSLC ಕನ್ನಡ, ಇಂಗ್ಲಿಷ್ ಸೇರಿ ಭಾಷಾ ಪರೀಕ್ಷೆ

ಬೆಂಗಳೂರು:ಎಸ್‌ಎಸ್‌ಎಲ್ಸಿ ಭಾಷಾ ವಿಷಯದ ಪರೀಕ್ಷೆ ಜುಲೈ 22 ರ ಗುರುವಾರ ಇಂದು ನಡೆಯಲಿದೆ. ರಾಜ್ಯದ 4485 ಪರೀಕ್ಷಾ ಕೇಂದ್ರಗಳಲ್ಲಿ 8,76,508 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಜುಲೈ 19 ರಂದು ಮೊದಲ ಪತ್ರಿಕೆಯ ಪರೀಕ್ಷೆ ನಡೆದಿತ್ತು. ಇಂದು ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ 10 ರೊಳಗೆ ಫಲಿತಾಂಶ …

Read More »

ಕಾನ್ಸ್‌ಟೇಬಲ್‌ಗೆ ಪೇಟ ತೊಡಿಸಿ ಸನ್ಮಾನ; ಶಿವು ಉತ್ತಮ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಪಂತ್ ಶ್ಲಾಘನೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್‌ ಅವರು ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ಕಾನ್ಸ್‌ಟೇಬಲ್‌ ಶಿವುಗೆ ಪೇಟ ತೋಡಿಸಿ, ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ಬಕ್ರೀದ್ ಹಿನ್ನಲೆ ನೆನ್ನೆ ರಾತ್ರಿ ಪೊಲೀಸ್ ಆಯುಕ್ತರಾದ ಕಮಲ್‌ಪಂತ್‌ ಸಿಟಿ ರೌಂಡ್ಸ್‌ ಹಾಕಿದ್ದರು. ಈ ವೇಳೆ ಕಮಲ್‌ಪಂತ್ ಅವರನ್ನು ಸನ್ಮಾನಿಸಲು ಮುಸ್ಲಿಮರು ಆಗಮಿಸಿದ್ದರು, ಆಗ ಸನ್ಮಾನಿಸಬೇಕಿರುವುದು ನನಗಲ್ಲ ಎಂದು ಪೊಲೀಸ್ ಕಾನ್ಸ್‌ಟೇಬಲ್‌ ಶಿವು ಅವರಿಗೆ ಸನ್ಮಾನಿಸಿದ್ದಾರೆ. ನಿನ್ನೆ ರಾತ್ರಿ ಶಿವಾಜಿನಗರ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ, ಗೋವಿಂದಪುರ, …

Read More »

‘ಸಿಡಿ ಅಸ್ತ್ರ’ಕ್ಕೆ ಬೆಟ್ಟಿ ಬಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ : ‘ಶಾಸಕ ಎಂಪಿ ರೇಣುಕಾಚಾರ್ಯ’ ವಿರುದ್ಧ ‘CD ಷಡ್ಯಂತ್ರ’.?

ಬೆಂಗಳೂರು : ಸಿಎಂ ಬದಲಾವಣೆ ಬೆನ್ನಲ್ಲೇ, ಈಗ ಸಿಡಿ ಷಡ್ಯಂತ್ರದ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಿಡಿ ವಿಚಾರ ಕೂಡ ಈಗ ಮುನ್ನಲೆಗೆ ಬಂದಿದ್ದು, ಇದೇ ಕಾರಣಕ್ಕಾಗಿ ದಿಢೀರ್ ದೆಹಲಿಗೆ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಎಂಪಿ ರೇಣುಕಾಚಾರ್ಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗಿದೆ.   ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಪರವಾಗಿ …

Read More »

ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …

Read More »

ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ವಿವಿಧ ಸ್ವಾಮೀಜಿಗಳು ಬ್ಯಾಟಿಂಗ್ ಬೀಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರಿನ ಕೊಳದ ಮಠದ ಡಾ.ಶಾಂತವೀರ ಶ್ರೀಗಳು, ಯಡಿಯೂರಪ್ಪ ಬದಲಾವಣೆ ವಿಚಾರ ಕುರಿತು ಊಹಾಪೋಹ ಕೇಳಿ ಬರುತ್ತಿದೆ. ರಾಜ್ಯಕೀಯ ಅನ್ನೋದು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ವೀರಶೈವ ಲಿಂಗಾಯತ ಜನಾಂಗದವರು ಐವತ್ತಕ್ಕು ಹೆಚ್ಚು ಜನ ಸ್ಥಾನದಲ್ಲಿದ್ದಾರೆ. ಸಮುದಾಯವನ್ನು ಕಡೆಗಣಿಸುವ ಕೆಲಸ ಆಗಬಾರದು ಅಂತ ಹೇಳಿದರು. ನಾಯಕತ್ವ ಬದಲಾವಣೆ ಮಾಡುವುದಾದರೆ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಆದೇಶ: B.S.Y.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ …

Read More »

ವಿಶೇಷ ಜಿಲ್ಲಾಧಿಕಾರಿ: ಐಎಎಸ್‌ ಅಧಿಕಾರಿ ನೇಮಕಕ್ಕೆ ಸೂಚನೆ

 ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.   ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ. ‘ಕರ್ನಾಟಕ ಭೂಕಂದಾಯ …

Read More »

ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ: ಅಧ್ಯಯನದ ಮಾನದಂಡ ಪರಿಶೀಲಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಡಗದ ಸ್ಥಾನಮಾನ ಕಲ್ಪಿಸುವ ವಿಚಾರವಾಗಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಲ್ಲಿಸಿರುವ ಅಧ್ಯಯನ ವರದಿಯನ್ನು ಪರಿಗಣಿಸುವ ಮೊದಲು ಸೂಕ್ತ ಮಾನದಂಡಗಳನ್ನು ಅನುಸರಿಸಿ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಅಧ್ಯಯನದ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನೀಡಿರುವ ಪ್ರಶ್ನಾವಳಿ ಮತ್ತು ಅರ್ಜಿ ನಮೂನೆಯನ್ನು ರದ್ದಪಡಿಸುವಂತೆ ಕೋರಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ …

Read More »

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿ

ಬೆಂಗಳೂರು, ಜು. 20: ಕರ್ನಾಟಕದಲ್ಲಿ ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಐದು ಜಿಲ್ಲೆಗಳ 1261 ವಿದ್ಯಾರ್ಥಿಗಳು 600 ಅಂಕಗಳಿಗೆ 600 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 445 ವಿದ್ಯಾರ್ಥಿಗಳು 600 ಅಂಕಗಳಿಗೆ ಸರಾಸರಿ 600 ಅಂಕ ಗಳಿಸಿದ್ದಾರೆ. ಮಂಗಳವಾರ ಸಂಜೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದರು. ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್ ಸಿ ಯಲ್ಲಿ …

Read More »