Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 31)

ಬೆಂಗಳೂರು ಗ್ರಾಮಾಂತರ

ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?

ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …

Read More »

ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್​ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್​ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ …

Read More »

ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ. ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ …

Read More »

19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …

Read More »

ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, …

Read More »

‘ಲಾಕ್ಡೌನ್’ ನಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ, ‘ಅನ್ಲಾಕ್’ ಬಗ್ಗೆ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿ ಮಾಡಲಾದ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗುವುದು. ಕೈಗಾರಿಕೆ ಚಟುವಟಿಕೆಗಳಿಗೆ ಮತ್ತಷ್ಟು ಅವಕಾಶ ನೀಡಲಿದ್ದು, ಆಟೋ, ಟ್ಯಾಕ್ಸಿ, ಕ್ಯಾಬ್ ಗಳಿಗೆ …

Read More »

ಯುವತಿಯ ಮೇಲೆ ಅತ್ಯಾಚಾರ,ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಮೇ. 28: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಚಿತ್ರಹಿಂಸೆ ನೀಡುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ. ಈ ಸಂಬಂಧ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಬಡಾವಣೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಈ ಘಟನೆ ನಡೆದಿದೆ. …

Read More »

ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …

Read More »

14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ

ಕೊರೊನಾ ಎರಡನೇ ತಡೆಯಲು ರಾಜ್ಯ ಸರ್ಕಾರವು 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ, ಬಹುಪಾಲು ವ್ಯಾಪಾರ ವಹಿವಾಟುಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಾದ್ಯಂತ ಚಿತ್ರಮಂದಿರಗಳನ್ನು ಈಗಾಗಲೇ ಬಂದ್ ಮಾಡಿರುವ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿರುವ ರಾಜ್ಯ ಸರ್ಕಾರ ಚಿತ್ರೀಕರಣದ ಮೇಲೆಯೂ ನಿರ್ಬಂಧ ಹೇರಿದೆ. ಸಿನಿಮಾ, ಧಾರಾವಾಹಿ, …

Read More »

ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್‌

ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್‌ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ …

Read More »