ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜನರು ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲು ಕೆಎಸ್ಆರ್ಟಿಸಿಯು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 1,200 ಹೆಚ್ಚುವರಿ ವಿಶೇಷ ಬಸ್ ಸೇವೆ ಕಲ್ಪಿಸಿದೆ. ಸೆಪ್ಟೆಂಬರ್ 15 ಮತ್ತು 16ರಂದು ವಾರಾಂತ್ಯ ಹಾಗೂ ಸೆಪ್ಟೆಂಬರ್ 18ರಂದು ಗೌರಿ ಗಣೇಶ ಹಬ್ಬ ಇದ್ದು, ಪ್ರಯಾಣಿಕರ ದಟ್ಟಣೆ ಹೆಚ್ಷಾಗಲಿದೆ. ಹಾಗಾಗಿ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಸಾರಿಗೆ …
Read More »ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶದ ಪ್ರಮುಖ ಅಂಶಗಳು.
ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದಲ್ಲಿನ ಪ್ರಮುಖ ಅಂಶಗಳು: …
Read More »ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದ್ರೆ ಅದು ವರ್ಗಾವಣೆ ಮಾತ್ರ:ಯತ್ನಾಳ್
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲಾ ಸ್ಥಗಿತ ಆಗಿದೆ. ನಮ್ಮ ಅಧಿಕಾರಾವಧಿಯಲ್ಲಿನ ಕೆಲಸಗಳನ್ನೆಲ್ಲಾ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದ್ರು. ಆದರೆ ಈಗ ನೂರಾರು ಷರತ್ತುಗಳನ್ನು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಸಿಗುವುದಿಲ್ಲ …
Read More »ಮೈಸೂರು: ಮುಖ್ಯ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್ಐ ಪುತ್ರನ ವಶಕ್ಕೆ ಪಡೆದ ಪೊಲೀಸರು
ಮೈಸೂರು: ನಗರದ ರಿಂಗ್ ರಸ್ತೆ ಮತ್ತು ರಾಜೀವ್ ಗಾಂಧಿ ನಗರದ ರಸ್ತೆಗಳಲ್ಲಿ ಪಿಎಸ್ಐ ಪುತ್ರನೊಬ್ಬ ವ್ಹೀಲಿಂಗ್ ಮಾಡಿದ್ದು, ಈ ಸಂಬಂಧ ನಗರದ ಸಿದ್ದಾರ್ಥನಗರ ಸಂಚಾರ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಉದಯಗಿರಿ ನಿವಾಸಿಯಾದ ಪಿಎಸ್ಐಯೊಬ್ಬರ ಪುತ್ರನಾಗಿದ್ದಾನೆ. ಈತ ನಗರದ ರಿಂಗ್ ರಸ್ತೆ ಮತ್ತು ರಾಜೀವ್ ನಗರದ ಪ್ರಮುಖ ರಸ್ತೆಗಳಲ್ಲಿ ತನ್ನ ಬೈಕ್ನಲ್ಲಿ ವ್ಹೀಲಿಂಗ್ ಮಾಡಿದ್ದಾನೆ. ಇದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳ್ಳಿ ಹಂಚಿಕೊಂಡಿದ್ದು ವಿಡಿಯೋ ಆಧರಿಸಿ ವಶಕ್ಕೆ …
Read More »ವಿವಿಗಳ ಆರ್ಥಿಕ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದ ಬಳಿಕ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ
ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಬಾಕಿ ಪಾವತಿ ಸೇರಿದಂತೆ ಎಲ್ಲ ವಿವಿಗಳ ಆರ್ಥಿಕ ಸಮಸ್ಯೆ ಕುರಿತು ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವಿವಿ ಕುಲಪತಿಗಳು ಹಾಗು ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಎಸ್ ವಿ ಸಂಕನೂರು ಕುರಿತು ನಿಯಮ 72ರ ಅಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಕಳೆದ ಮೂರ್ನಾಲ್ಕು …
Read More »ಬೆಂಗಳೂರು – ಮೈಸೂರು ಹೈವೇಯ ದುಪ್ಪಟ್ಟು ಟೋಲ್ ವಿರೋಧಿಸಿ ಕರವೇ ಸ್ವಾಭಿಮಾನಿ ಸೇನೆ ಪ್ರತಿಭಟನೆ
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ದುಪ್ಪಟ್ಟು ಟೋಲ್ ವಸೂಲಿ ವಿರೋಧಿಸಿ ಹಾಗೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಪ್ರತಿಭಟನೆ ನಡೆಸಿತು. ರಾಜ್ಯಾಧ್ಯಕ್ಷರಾದ ನಿಂಗರಾಜ್ ಗೌಡ ನೇತೃತ್ವದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ನೂರಾರು ಜನ ಕಾರ್ಯಕರ್ತರು ಮೈಸೂರು ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದಿಂದ ಎಕ್ಸ್ಪ್ರೆಸ್ ಹೈವೇ ನಿರ್ಮಾಣವಾಗಿದೆ. ಆದರೂ ಅದನ್ನ ಬಳಸಲು ದುಪ್ಪಟ್ಟು …
Read More »ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ
ಬೆಂಗಳೂರು: ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ ಎದುರಾಗಿದೆ. ತರಕಾರಿ ಹಾಗೂ ನಿತ್ಯ ಬಳಸುವ ವಸ್ತುಗಳು ಆಗಸಕ್ಕೇರಿದ ಹಿನ್ನೆಲೆ ತರಕಾರಿ ಖರೀದಿಗೆ ಹಿಂದೆ ಮುಂದೆ ಯೋಚಿಸುವ ಪರಿಸ್ಥಿತಿ ಬಂದಿದೆ. ದುಬಾರಿ ಬೆಲೆ ಕಾರಣ ಶಾಲಾ ಬಿಸಿಯೂಟದಲ್ಲಿ ಪೌಷ್ಠಿಕಾಂಶದ ಕೊರತೆ ಎದುರಾಗಿದೆ. ಅಂಗನವಾಡಿ ಕೇಂದ್ರಗಳು ನೀಡುತ್ತಿರುವ ಊಟದಲ್ಲಿ ತರಕಾರಿ ತುಂಡುಗಳೇ ನಾಪತ್ತೆ ಆಗುತ್ತಿದೆ. ಅಂಗನವಾಡಿ ಕೇಂದ್ರಗಳು ಬರಿ ಅನ್ನ ಮತ್ತು ತಿಳಿಸಾರು ಮೊರೆ ಹೋಗುತ್ತಿದ್ದಾರೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಟಿಕ …
Read More »ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು
ಬೆಂಗಳೂರು : ಆಹಾರೋತ್ಪನ್ನಗಳ ವ್ಯಾಪಾರ ಪರವಾನಗಿ ಪರಿಶೀಲನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆಹಾರ ನಿರೀಕ್ಷಕ (ಫುಡ್ ಇನ್ಸ್ಪೆಕ್ಟರ್)ನನ್ನು ವಶಕ್ಕೆ ಬಂಧಿಸಿದ್ದಾರೆ. ಒಂದು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟು 43 ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದಾಗ ಫುಡ್ ಇನ್ಸ್ಪೆಕ್ಟರ್ ಮಹಾಂತೇಗೌಡ ಬಿ ಕಡಬಾಳುನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆಹಾರೋತ್ಪನ್ನಗಳ ಮಾರಾಟ ಪರವಾನಗಿ ನೀಡಲು ರಂಗಧಾಮಯ್ಯ ಎಂಬುವರಿಂದ ₹ 1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಾಂತೇಗೌಡ, ಮುಂಗಡವಾಗಿ 10 ಸಾವಿರ …
Read More »ಸದನದಲ್ಲಿ ವರ್ಗಾವಣೆ ಕಮಿಷನ್ ರೇಟ್ ಕಾರ್ಡ್ ಸದ್ದು
ಬೆಂಗಳೂರು: ಸದನದಲ್ಲಿ ವರ್ಗಾವಣೆ ಕಮಿಷನ್ ರೇಟ್ ಕಾರ್ಡ್ ಸದ್ದು ಮಾಡಿತು. ವಿಷಯ ಪ್ರಸ್ತಾಪ ಮಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ್ರು ಅಂತ ಸದನದಲ್ಲಿ ಪತ್ರ ತೋರಿಸಿದ್ರು. ಆದ್ರೆ, ಆ ಪತ್ರ ನಮಗೆ ಕೊಡದೇ ಅವರೇ ತಗೊಂಡು ಹೋದ್ರು ಎಂದು ಟಾಂಗ್ ನೀಡಿದರು. ನಮ್ಮ ಮೇಲೆ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ಆದರೆ, ಅದು ಸುಳ್ಳು, ಯಾವುದೇ ವರ್ಗಾವಣೆ ದಂಧೆ ನಡೆಯುತ್ತಿಲ್ಲ. ಪತ್ರಿಕೆಯಲ್ಲಿ ಹೆಚ್ಡಿಕೆ ಪತ್ರ ಕೊಟ್ಟಿದ್ದಾರೆ …
Read More »ರಾಜ್ಯದಲ್ಲಿ 2,000 ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಟಾಟಾ ಟೆಕ್ನಾಲಜೀಸ್
ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ವಿಧಾನಸೌಧದಲ್ಲಿ ಬುಧವಾರ ಕಂಪನಿಯ ಉನ್ನತ ಅಧಿಕಾರಿಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ. ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ …
Read More »