ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್ ಕೋರಿಕೆಯಂತೆ, ಗುಂಪು ಹತ್ಯೆಯಲ್ಲಿ ಹಲ್ಲೆಗೀಡಾದ ಅಶ್ರಫ್ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ. ಕೆ. ಹರಿಪ್ರಸಾದ್, …
Read More »ವಿಡಿಯೋ ಮಾಡಲು ಬಳಸಿದ್ದ ಮಾರಕಾಸ್ತ್ರ ಮಾಯ! ಸಾಕ್ಷ್ಯನಾಶ ಸಾಬೀತಾದ್ರೆ ವಿನಯ್, ರಜತ್ ಗೆ ಸಂಕಷ್ಟ
ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಶಾರ್ಟ್ ವಿಡಿಯೋ ಮಾಡಿದ್ದ ಪ್ರಕರಣ ಚಾರ್ಜ್ ಶೀಟ್ ಹಂತ ತಲುಪಿದೆ. ವಿಡಿಯೋಗೆ ಬಳಸಿದ್ದ ಮಾರಕಾಸ್ತ್ರಗಳು ಮೂರು ತಿಂಗಳು ಕಳೆದರೂ ಪೊಲೀಸರಿಗೆ ಸಿಗದಿರುವುದು ಇಬ್ಬರೂ ಆರೋಪಿಗಳಿಗೂ ಪುನಃ ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದೆ. ಮಾರಕಾಸ್ತ್ರ ದೊರೆಯದಿದ್ದರೆ ಸಾಕ್ಷ್ಯನಾಶವೆಂದು ಉಲ್ಲೇಖಿಸಿ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಮಾರಕಾಸ್ತ್ರಗಳ ಮಾದರಿಯನ್ನು ತಯಾರಿಸಿ ಕೊಟ್ಟಿದ್ದರು …
Read More »ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ
ಬೆಂಗಳೂರು, ಜುಲೈ 7: ಅನ್ನಭಾಗ್ಯ (Anna Bhagya) ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು. ಅನ್ನಭಾಗ್ಯ ಯೋಜನೆಗೆ 10 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ಈಗ ಶಾಕ್ ಎದುರಾಗಿದೆ. ಮುಂದಿನ ತಿಂಗಳು ಅಕ್ಕಿ ಸಿಗುತ್ತದೆಯೋ ಇಲ್ಲವೋ ಎಂಬಾತಾಗಿದೆ. ಯಾಕೆಂದರೆ, ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್ ಆಗಿದೆ. ಆಹಾರ ಧಾನ್ಯ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ. 15 ದಿನಗಳ ಗಡುವಿಗೂ ಸ್ಪಂದಿಸದ ಸರ್ಕಾರ ಅನ್ನಭಾಗ್ಯ ಆಹಾರ ಧಾನ್ಯಗಳನ್ನು ಸಾಗಿಸುವ …
Read More »ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲು ಕೋರಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ಸಿಎಲ್)ಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, …
Read More »ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರದಿಂದ ಹಲ್ಲೆ
ಬೆಂಗಳೂರು: ಅಪರಿಚಿತರು ಮೊಬೈಲ್ ಫೋನ್ ಕೇಳಿದಾಗ ಕೊಡುವ ಮುನ್ನ ಸ್ವಲ್ಪ ಎಚ್ಚರವಿರಲಿ. ಕರೆ ಮಾಡಲು ಕೊಟ್ಟ ಫೋನ್ನ್ನು ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 3ರಂದು ಹಾಡಹಗಲೇ ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಈ ಘಟನೆ ಜರುಗಿದೆ. ದುಷ್ಕರ್ಮಿಯ ಅಟ್ಟಹಾಸಕ್ಕೆ ಸೆಕ್ಯುರಿಟಿ ಗಾರ್ಡ್ ಪರ್ವಿಂದರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅಸ್ಗರ್ ಎಂಬಾತನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಮೊಬೈಲ್ …
Read More »ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ
ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ …
Read More »ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿಯ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಯುವಕರು ಸೇರಿದಂತೆ ವಿವಿಧ ವಯೋಮಾನದವರ ಹಠಾತ್ ಹೃದಯಾಘಾತ ಸಾವಿನ ಪ್ರಕರಣಗಳಿಗೂ ಮತ್ತು ಕೋವಿಡ್ ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ‘ಹಾರ್ಟ್ ಅಟ್ಯಾಕ್’ಗಳು ಸಂಭವಿಸಿವೆ ಎನ್ನುವುದು ವೈದ್ಯಕೀಯ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ದಿಢೀರ್ ಹೃದಯಾಘಾತಗಳಿಗೆ ಜನರು …
Read More »ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ
ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ ಮಧ್ಯೆ ಬೇಕಿದೆ ನೀರು ವಿನಿಮಯ ಒಪ್ಪಂದ ದಶಕಗಳಿಂದ ನೀರು ವಿನಿಮಯ ಒಪ್ಪಂದ ಯೋಜನೆ ನೆನೆಗುದ್ದಿಗೆ ಬೇಸಿಗೆಯಲ್ಲಿ ಪರಸ್ಪರ ನೀರು ವಿನಿಮಯದಿಂದ ಅನುಕೂಲ ಮಳೆಗಾಲದಲ್ಲಿ ಪ್ರವಾಹ ನಿರ್ವಹಣೆಗೂ ಅನುಕೂಲ ಕೃಷ್ಣಾ ನದಿಗೆ ಪ್ರವಾಹ ಬಂದ್ರೆ ಉತ್ತರ ಕರ್ನಾಟಕ ನೂರಾರು ಹಳ್ಳಿಗಳಿಗೆ ಎಫೆಕ್ಟ್ ಕರ್ನಾಟಕ ಮಹಾರಾಷ್ಟ್ರ ರಾಜ್ಯದಲ್ಲೂ ಕೃಷ್ಣಾ ನದಿ ಎಫೆಕ್ಟ್ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಬಿಟ್ಟರೆ …
Read More »ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಆದೇಶ ಮಾಡಿದೆ. ಬುಡ್ಗ ಅಥವಾ …
Read More »ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ …
Read More »