ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಳಗಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ, ನನಗೂ ಒಳ್ಳೆಯ ಕಾಲ ಬರಲಿದೆ. ನಾನೀಗ ಪ್ರತಿ ದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ… ಎಂದಿದ್ದಾರೆ. ಬಿಎಸ್ವೈ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲೂ ಇವರಿಗೆ ಸ್ಥಾನ ಸಿಕ್ಕಿಲ್ಲ. ಇವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಅವಕಾಶ …
Read More »ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …
Read More »ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್ ಬಂಗಲೆ! ಅರೇಬಿಯನ್ ಶೈಲಿಯ ಅರಮನೆಗೆ ಚಿನ್ನದ ಲೇಪನ.
ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್ ಅಹ್ಮದ್ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ …
Read More »ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ
ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. 127 ಪಿಎಸ್ಐ, 130 ಎಸ್ಎಸ್ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು …
Read More »ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ …
Read More »ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾಜಿನಗರದ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ಅವ್ಯವಹಾರ, ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿ.ಆರ್.ಪಿ.ಎಫ್. ಭದ್ರತೆಯೊಂದಿಗೆ ಇಡಿ ದಾಳಿ ನಡೆಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬಿಜೆಪಿ ಮುಖಂಡ ರೋಷನ್ …
Read More »KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ. 24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …
Read More »ಬಿಎಸ್ವೈ ನಾಯಕತ್ವದ ವಿರುದ್ಧ ಸಡ್ಡು ಹೊಡೆದವರಿಗೆ ಕೈತಪ್ಪಿದ ಮಂತ್ರಿ ಸ್ಥಾನ..!
ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ ಒಕ್ಕಲಿಗ ಸಮುದಾಯದಿಂದ ಸಿ.ಪಿ.ಯೋಗೇಶ್ವರ್, ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಅರವಿಂದ ಬೆಲ್ಲದ್ …
Read More »ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ
ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …
Read More »ಸಿಎಂ ಸ್ವಗೃಹದ ಬಳಿ ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಗೃಹದ ಬಳಿ ಲಘು ಅಪಘಾತ ಸಂಭವಿಸಿದೆ. ಯಾವುದೇ ಅನಾಹುತು ಸಂಭವಿಸಿಲ್ಲ. ಆರ್. ಟಿ. ನಗರದ ಮುಖ್ಯಮಂತ್ರಿ (Chief Minister) ನಿವಾಸದ ಬಳಿ ಘಟನೆ ನಡೆದಿದೆ. ಓನ್ ವೇ(one way) ಮಾಡಿರುವ ಹಿನ್ನಲೆ ವಾಹನ ಸವಾರರಿಗೆ ಗೊಂದಲವಾಗಿದ್ದು, ಅಪಘಾತಕ್ಕೆ( Accident) ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ಜಗನ್ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ …
Read More »