ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, …
Read More »ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಉಗುಳಿದ್ದಾರೆ ದಂಡ!
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದರಿಂದ ಸಾಂಕ್ರಾಮಿಕ ರೋಗಗಳು ಹರುಡುವುದಲ್ಲದೆ, ಶುಚಿತ್ವಕೂ ಭಂಗ ಉಂಟಾಗಿ ಜನಸಾಮಾನ್ಯರಿಗೆ ಅನಾನುಕೂಲವಾಗುತ್ತದೆ. ನಿಗಮದ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವ ಕ್ರಮ ಜೂನ್ 2020 ರಿಂದ ಜಾರಿಗೆ ತರಲಾಗಿರುತ್ತದೆ. ಜನ ಸಾಮಾನ್ಯರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯುಟಿಫುಲ್ ಬೆಂಗಳೂರು ಹಾಗೂ ಸಾರಾ ಜಹಾನ್ ಸೆ ಅಚ್ಚಾ ಫುಣೆ ತಂಡಗಳು “ಉಗುಳುವ ನಿಷೇಧದ ಅಭಿಯಾನ” ನಿಗಮದೊಂದಿಗೆ ಸೇರಿ ಹಮ್ಮಿಕೊಂಡಿರುತ್ತಾರೆ. ಕೊರೋನಾ ಮಹಾಮಾರಿಯು ಪ್ರಪಂಚವನ್ನೇ …
Read More »ರಾಜ್ಯದ ಯಾವ್ಯಾವ ಕಡೆ ಎಷ್ಟಿದೆ ಪೆಟ್ರೋಲ್, ಡೀಸೆಲ್ ಬೆಲೆ
ಬೆಂಗಳೂರು, ಆಗಸ್ಟ್ 07: ದೇಶದಲ್ಲಿ ಸತತ 20 ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದ್ದು, ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 7ರಂದು ಕೂಡ ಇಂಧನ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಜುಲೈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಳಿತ ಕಂಡುಬಂದಿತ್ತು. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ …
Read More »ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ; ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆ ಸಚಿವರ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಾವಧಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದ್ದು, ಇನ್ಮುಂದೆ ಬಿ.ಎಸ್.ವೈ.ಗೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯ ಹಾಗೂ ಅಧಿಕಾರ ಕೂಡ ಸಿಗಲಿದೆ.
Read More »ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಯತ್ನ ದ್ವೇಷದ ರಾಜಕಾರಣ: ಸಿದ್ದರಾಮಯ್ಯ
ಬೆಂಗಳೂರು: ‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನ ದ್ವೇಷದ ರಾಜಕಾರಣವಾಗುತ್ತದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣ ಎಂಬ ಹೆಸರಿಡಬೇಕೆಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಬೆಂಗಳೂರಿನ ಮೇಲ್ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, …
Read More »ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡ್ತಿರುವ ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿ
ಬೆಂಗಳೂರು:ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿಗಳು ಕೆಲಸದ ಟೈಮಿಂಗ್ ವಿಚಾರವಾಗಿ ನಿಮ್ಹಾನ್ಸ್ ಹಾಸ್ಪಿಟಲ್ ಒಳಗೆ ಪ್ರತಿಭಟನೆ ನಡೆಸಿದರು. ಸಿಬ್ಬಂದಿಗಳು ರೇಡಿಯಾಲಜಿ ಡಿಪಾರ್ಟ್ಮೆಂಟ್ ನಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವುದರಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ ಏಳು ಗಂಟೆಯವರೆಗೆ ಕೆಲಸ ಮಾಡಲು ಕೇಳಿದರು ಇದಕ್ಕೆ ಒಪ್ಪದ ಹಾಸ್ಪಿಟಲ್ ವಿರುದ್ದ ಒಂದು ತಿಂಗಳಿನಿಂದ ಮಳೆ ಬಿಸಿಲು …
Read More »ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗರಂ
ಬೆಂಗಳೂರು,ಆ.7- ನನಗೆ ಇನ್ಸಲ್ಟ್ ಮಾಡ್ತೀರಾ? ಎಂದು ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆಂದು ಮಾಹಿತಿ ಸಿಕ್ಕಿದೆ. ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ,ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ನಾನೊಬ್ಬ ಶಾಸಕ, ನನಗೆ ಇನ್ಸಲ್ಟ್ ಮಾಡ್ತೀರಾ? ಇದು ಎರಡನೇ ಸಲ ಈ …
Read More »ಸಿಎಂ ಆದ 24 ಗಂಟೆಯೊಳಗೆ ದೇವೇಗೌಡರ ಮನೆಗೇಕೆ ಹೋಗಬೇಕಿತ್ತು? -ಗುಡುಗಿದ ಬಿಜೆಪಿ ಶಾಸಕ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು? ಎಂದು ಶಾಸಕ ಪ್ರೀತಂಗೌಡ ಗುಡುಗಿದ್ದಾರೆ. ನೂರು ಮೀಟರ್ ಓಡೋಕೆ ಬಂದಿಲ್ಲ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನೂರು ಮೀಟರ್ ಓಡಲಿಕ್ಕೆ ಬಂದಿಲ್ಲ, ಮ್ಯಾರಥಾನ್ ಓಡಲು ಬಂದಿದ್ದೇನೆ. ಯಾರ ಹತ್ತಿರನೂ ಮಂತ್ರಿ ಮಾಡಿ ಎಂದು ಕೇಳಿಲ್ಲ. ಮಂತ್ರಿ ಮಾಡಿಲ್ಲ ಅನ್ನೋದ್ಕಿಂತ ನಾನು ಕೇಳಿಲ್ಲ. …
Read More »ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್
ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ …
Read More »ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ
ಬೆಂಗಳೂರು: ಅಡ್ಡಾದಿಡ್ಡಿ ಆಟೋ ಚಲಾಯಿಸಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್( 21) ಮೃತ ದುರ್ದೈವಿಗಳು. ಇನ್ನು ಆಟೋದಲ್ಲಿದ್ದ ವಾಸಪ್ಪ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು …
Read More »
Laxmi News 24×7