Breaking News

ಬೆಂಗಳೂರು

ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

ಬೆಂಗಳೂರು: ಯುವತಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಯುವತಿಯ ಸ್ನೇಹಿತರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಒದೆ ತಿಂದ ವ್ಯಕ್ತಿ. ಹೆಬ್ಬಾಳ ಮೂಲದ ಯುವತಿಯನ್ನು ಹಿಂಬಾಲಿಸಿದ್ದ ಮುನಿರಾಜು. ಮಾನಸಿಕ, ದೈಹಿಕವಾಗಿ ಯುವತಿಗೆ ಕಿರುಕುಳ ನೀಡಿದ್ದ. ಇದೇ ವೇಳೆ ಈ ಬಗ್ಗೆ ಯುವತಿ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುನನ್ನು ಹಿಂಬಾಲಿಸಿದ್ದಾರೆ. ಬಳಿಕ ಸಂಜಯನಗರಕ್ಕೆ ಬರುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುಗೆ ಮುಖ …

Read More »

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ

  ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …

Read More »

ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …

Read More »

ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್​ ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ …

Read More »

ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …

Read More »

ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ

ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. …

Read More »

ಸಿಎಂ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ‌ಮೇಜರ್ ಸರ್ಜರಿ!

ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ‌ಮೇಜರ್ ಸರ್ಜರಿ ಆಗಲಿದೆ. ನಗರ ಪೊಲೀಸ್ ಆಯುಕ್ತ ಸ್ಥಾನಕ್ಕೇರಲು ನಾಲ್ವರು ಅಧಿಕಾರಿಗಳು ರೇಸ್​ ನಲ್ಲಿದ್ದಾರೆ. ಆಗಸ್ಟ್​ಗೆ ಪೊಲೀಸ್ ಆಯುಕ್ತರ ಅಧಿಕಾರ ಅವಧಿ ಅಂತ್ಯಗೊಳ್ಳಲಿದೆ. ಹೀಗಾಗಿ ಮುಂದಿನ ಪೊಲೀಸ್ ಆಯುಕ್ತರ ಹುದ್ದೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರತಾಪ್ ರೆಡ್ಡಿ, ಗುಪ್ತಚರ ವಿಭಾಗದ ಬಿ. ದಯಾನಂದ್, ಪೊಲೀಸ್ ತರಬೇತಿ ವಿಭಾಗದ ಅಮೃತ್ ಪೌಲ್, ರಾಜ್ಯ …

Read More »

ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕರ ಸ್ವೀಕರಿಸಿರುವ ಬೆನ್ನಲ್ಲೇ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ. ಈ ನಡುವೆ ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ. ನಿನ್ನೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸಚಿವ …

Read More »

ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …

Read More »