Breaking News

ಬೆಂಗಳೂರು

ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್‍ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …

Read More »

ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​..

ಬೆಂಗಳೂರು: ನೀವು ನಿಮ್ಮ ಬೈಕ್​ನ್ನ ಮನೆ ಹೊರಗಡೆ ನಿಲ್ಲಿಸ್ತಿದ್ದೀರಾ..? ಹಾಗಾದ್ರೆ ಹುಷಾರ್​ ಆಗಿರಿ. ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​ ಒಂದು ಈಗ ನಗರದಲ್ಲಿ ಸಕ್ರಿಯವಾಗಿದೆ. ವೀರಣ್ಣ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬೈಕ್​ನ್ನು ಮನೆಯ ಹೊರಗೆ ನಿಲ್ಲಿಸಿ ತಮ್ಮ ಅಪಾರ್ಟ್​ಮೆಂಟ್​ಗೆ ಹೋಗಿ ಬರೋದ್ರೊಳಗಾಗಿ ನಿಲ್ಲಿಸಿದ ಬೈಕ್​ ನಾಪತ್ತೆಯಾಗಿದೆ. ಒಳಗಡೆ ಹೋಗಿ ಬರೋದ್ರೊಳಗಾಗಿ ಬೈಕ್​ ಕಾಣದ್ದನ್ನ ಕಂಡು ಮಾಲೀಕ ಅರೆ ಕ್ಷಣ ಗಲಿಬಿಲಿಗೊಂಡಿದ್ದಾನೆ. ತದನಂತರ ಸಿಸಿಟಿವಿ …

Read More »

ಹೆಚ್ಚಾಯ್ತು ರೌಡಿಶೀಟರ್​​ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್​ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್​ಡೌನ್ ಸಡಿಲಿಕೆಯಾಗಿ ಅನ್​ಲಾಕ್​ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …

Read More »

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್‌ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …

Read More »

ಬೆಂಗಳೂರು ಏರ್​ಪೋರ್ಟ್​ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್​ಗಳು

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್​ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್​ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್​ನಿಂದ ಕಾರ್ಗೋ ಟರ್ಮಿನಲ್​ಗೆ ಪಾರ್ಸ್​ಲ್​ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್​ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್​ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …

Read More »

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …

Read More »

ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್‌ವೈ

ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಆರೆಸ್ಸೆಸ್‌ ಕಚೇರಿಗೆ ಭೇಟಿ ನೀಡಿ, ಮುಖಂಡ ಮುಕುಂದ್‌ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ …

Read More »

ರಾಜ್ಯಪಾಲ ಹುದ್ದೆಗಾಗಿ ಮನವೊಲಿಕೆ ಯತ್ನ? ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Read More »

ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು ಎಂದರು. ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ …

Read More »

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸಾರಿಗೆ ಇಲಾಖೆ 4 ನಿಗಮಗಳ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Read More »