Breaking News

ಬೆಂಗಳೂರು

ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು: ಎಚ್‌.ವಿಶ್ವನಾಥ್‌ :

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ವಿಜಯೇಂದ್ರ ಹಾಗೂ ಮೊಮ್ಮಕ್ಕಳು ಎಲ್ಲವನ್ನೂ ಹಾಳು ಮಾಡಿಬಿಟ್ಟರು. ಯಡಿಯೂರಪ್ಪ ಹೆಸರು, ಅಧಿಕಾರ, ರಾಜ್ಯದ ಅಭಿವೃದ್ಧಿ ಎಲ್ಲವೂ ಅವರ ಮಗನಿಂದ ಹಾಳಾಯಿತು. ಭ್ರಷ್ಟಾಚಾರದಿಂದಾಗಿಯೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರಕ್ಕೆ ಅವರ ಮನೆಯೇ ಮೂಲವಾಯಿತು. ಅದಕ್ಕೆ …

Read More »

ಐಪಿಎಸ್​ ಅಧಿಕಾರಿ ಚನ್ನಣ್ಣನವರ್ ನನ್ನಣ್ಣ ಎಂದು ಭಕ್ತರಿಂದ ಲಕ್ಷ ಲಕ್ಷ ಲಪಟಾಯಿಸಿ ಎಸ್ಕೇಪ್​ ಆದ ಅರ್ಚಕ!

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ನನ್ನ ಅಣ್ಣ, ಬೇಕಿದ್ದರೆ ಈ ಫೋಟೋ ನೋಡಿ. ನಾನು ಪ್ರಭಾವಿ ವ್ಯಕ್ತಿ. ಆಶ್ರಯ ಯೋಜನೆ ಅಡಿ ಮನೆ ಬೇಕಿದ್ದರೆ ಇಷ್ಟು ಲಕ್ಷ ರೂಪಾಯಿ ಕೊಡಿ, ಅಣ್ಣನ ಇನ್​ಫ್ಲುಯೆನ್ಸ್​ ಬಳಸಿ ಮನೆ ಕೊಡಿಸುವೆ ಎಂದ ಅರ್ಚಕನೊಬ್ಬ ದೇವಾಲಯಕ್ಕೆ ಬರುವ ಭಕ್ತರಿಗೆ ಪಂಗನಾಮ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರಹಳ್ಳಿಯ ಅರ್ಚಕ ಮಹಾಬಲ ಅಲಿಯಾಸ್ ಮಂಜನಾಥ್ ವಂಚನೆ ಮಾಡಿದ ಆರೋಪಿ. ಉತ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ …

Read More »

ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ಈ ಭೇಟಿಯ ವೇಳೆ, ಸ್ಪೀಕರ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಧಾನಸಭಾ ಸಚಿವಾಲಯ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತಂತೆ ವಿವರಿಸಿದ್ದಾರೆ. ಅಲ್ಲದೆ ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ. ಭೇಟಿ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ, ಭಾರತದ ಸಂವಿಧಾನ ಕುರಿತ ಚರ್ಚೆ, ಸಂಸದೀಯ ನಡೆವಳಿಕೆಯಲ್ಲಿ ಮೌಲ್ಯಗಳು ಮತ್ತು ತತ್ವ, ಸಿದ್ಧಾಂತಗಳು …

Read More »

ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ : ಕಾಂಗ್ರೆಸ್

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ” ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ” ಎಂದು ವ್ಯಂಗ್ಯವಾಡಿದೆ. ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ಬಿಜೆಪಿಯ ಹೈಕಮಾಂಡ್ …

Read More »

ಬಿಎಸ್​ವೈ ರಾಜೀನಾಮೆ ನಿರ್ಧಾರ: ಕಾರು ಚಾಲಕನ ಕಣ್ಣೀರು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಜನಸ್ನೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ಯಡಿಯೂಪ್ಪ ತಮ್ಮ ನಿರ್ಧಾರ ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

Read More »

ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…?

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ …

Read More »

4 ಬಾರಿ ಸಿಎಂ ಆದ್ರೂ ಅವಧಿ ಪೂರೈಸಿಲ್ಲ; BSY ಹೋದರೂ ಮತ್ತೋರ್ವ ಭ್ರಷ್ಟ ಸಿಎಂ ಬರ್ತಾರೆ; ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪಗೆ ಸರಿಸಾಟಿಯಾದ ನಾಯಕ ಬೇರೆ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಓರ್ವ ಭ್ರಷ್ಟ ಸಿಎಂ ಆಗಿದ್ದರು. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂದು 6 ತಿಂಗಳ ಹಿಂದೆಯೇ ನಾನು ಹೇಳಿದ್ದೆ. ಇದು ಗೊತ್ತಿರುವ ವಿಚಾರ. …

Read More »

ಬೆಂಗಳೂರಿನಲ್ಲಿ ಮಠಾಧೀಶರ ಸಮಾವೇಶ: ಪ್ರಹ್ಲಾದ್ ಜೋಷಿ, ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ

ಬೆಂಗಳೂರು,ಜು.25: ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಮಠಾಧೀಶರ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿ.ಎಸ್.ಯಡಿಯೂರಪ್ಪರ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸುವಂತಿಲ್ಲ ಎಂದು ಕೆಲವು ಮಠಾಧೀಶರು, ಬಿಜೆಪಿ ನಾಯಕರು ಘೋಷಣೆ ಕೂಗಿ, ಒತ್ತಾಯಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬಳಿಕ ಪೊಲೀಸರು ಮಧ್ಯಪ್ರವೇಶ …

Read More »

ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜೆ.ಪಿ ನಡ್ಡಾ

ಬೆಂಗಳೂರು/ಗೋವಾ: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಡ್ಡಿಯವರ ಬೆನ್ನು ತಟ್ಟಿದ್ದಾರೆ. ಜುಲೈ 25 ಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಬೆಳಗಾವಿಯಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಸಂಜೆ ಹೈಕಮಾಂಡ್‌ನಿಂದ …

Read More »

ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …

Read More »