ಬೆಂಗಳೂರು/ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕೇರಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಮಳೆಯಿಂದಾಗಿ ಶುಕ್ರವಾರ ಕರ್ನಾಟಕದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ, …
Read More »ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ …
Read More »ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳಿಂದ ಅಲಂಕಾರ
ಬೆಂಗಳೂರು ಜುಲೈ 22: ಕೊರೊನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ …
Read More »`ರಾಜೀನಾಮೆ’ಗೆ ಮೊದಲೇ ವಲಸಿಗ ಸಚಿವರಲ್ಲಿ ಮನೆ ಮಾಡಿದ ಆತಂಕ!
ಬೆಂಗಳೂರು, ಜು. 23: ರಾಜ್ಯದಲ್ಲಿ `ಮುಖ್ಯಮಂತ್ರಿ ಬದಲಾವಣೆ’ ಚರ್ಚೆ ಬೆನ್ನಲ್ಲೆ `ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರು’ ಎನ್ನಲಾದ ವಲಸಿಗ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಗುರುವಾರ ವಿಧಾನಸೌಧದಲ್ಲಿನ ನಡೆದ ಸಚಿವ ಸಂಪುಟ ನಡುವೆಯೇ ವಲಸಿಗರು ಒಂದೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಸಚಿವ ಬಿ.ಎ. ಬಸವರಾಜ್ (ಭೈರತಿ) ಕೊಠಡಿಯಲ್ಲಿ ಆರು ಮಂದಿ ಸಚಿವರು ಒಟ್ಟಿಗೆ ಸಭೆ …
Read More »ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್ ಹೈ ಕಮಾಂಡ್
ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸುದೀರ್ಘ ಚರ್ಚೆಯಲ್ಲಿ ಅವಕಾಶಗಳು ಎದುರಾದರೆ ಸರ್ಕಾರ ರಚನೆಯ ಪ್ರಸ್ತಾವವನ್ನು ರಾಜ್ಯ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದಾರೆ. ಆದರೆ, ಇದಕ್ಕೆ ಹೈಕಮಾಂಡ್ ಸ್ಪಷ್ಟ ನಕಾರ ವ್ಯಕ್ತಪಡಿಸಿದ್ದು, ಸಂಪೂರ್ಣ ಬಹುಮತ ಬರದ ಹೊರತು ಮೈತ್ರಿ ಅಥವಾ …
Read More »ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿಮಾಡಿ ಎಸ್ಕೇಪ್
ಬೆಂಗಳೂರು: ಗಾಂಜಾ ನಶೆಯಲ್ಲಿ ಮೂವರು ಪುಂಡರು ವಿಜಯನಗರದ ಆರ್ಟಿಪಿಸಿಆರ್ ಲೇಔಟ್ನಲ್ಲಿ ತಡರಾತ್ರಿ ಸಿಕ್ಕ ಸಿಕ್ಕ ವಾಹನಗಳ ಗಾಜು ಪುಡಿ ಮಾಡಿದ ಘಟನೆ ನಡೆದಿದೆ. ಅದೇ ಏರಿಯಾದ ಯುವಕರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್ಗಳನ್ನ ಯುವಕರು ಪುಡಿಪುಡಿ ಮಾಡಿದ್ದು ಸಿಸಿಟಿವಿಗಳಲ್ಲಿ ಕೃತ್ಯದ ದೃಶ್ಯ ಸೆರೆಯಾಗಿದೆ. ಯುವಕರು ಕೃತ್ಯ ತಡೆಯಲು ಹೋದವರ ಮೇಲೆ ಕಲ್ಲು ತೂರಿ ಯುವಕರು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ …
Read More »ಎದೆ ಝಲ್ ಎನಿಸುವ ರೌಡಿಶೀಟರ್ ಬಾಬ್ಲಿ ಕೊಲೆಯ ದೃಶ್ಯ
ಬೆಂಗಳೂರು: ರೌಡಿ ಶೀಟರ್ ಬಬ್ಲಿ ಕೊಲೆಯ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ19 ರಂದು ಕೋರಮಂಗಲ ಬ್ಯಾಂಕ್ನಲ್ಲಿ ಕೊಲೆ ನಡೆದಿತ್ತು. ಆಡುಗೋಡಿ ರೌಡಿಶೀಟರ್ ಆಗಿದ್ದ ಬಬ್ಲಿ ಹೆಂಡತಿ ಜೊತೆ ಬ್ಯಾಂಕ್ ಗೆ ಬಂದಿದ್ದಾಗ ಅಟ್ಯಾಕ್ ನಡೆದಿತ್ತು. ಬ್ಯಾಂಕ್ ಒಳಗೆ ನುಗ್ಗಿ ರೌಡಿಗಳ ಗ್ಯಾಂಗ್ ಬಬ್ಲಿಯನ್ನ ಕೊಚ್ಚಿ ಕೊಲೆ ಮಾಡಿತ್ತು.. ಕೊಲೆಯ ನಂತರ ಬೈಕ್ ಮೇಲೆ ಮಚ್ಚು ಹಿಡಿದು ಗ್ಯಾಂಗ್ ಸಂಭ್ರಮಿಸಿತ್ತು.. ಈ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಕೋರಮಂಗಲ ಪೊಲೀಸರು …
Read More »ಸಿಎಂ ಬದಲಾಗೋ ಮುನ್ನ ಪಂಚಮಸಾಲಿಗೆ ಒಬಿಸಿ ಮೀಸಲಾತಿ ಕೊಡಿ ಎಂದ ಸ್ವಾಮೀಜಿ
ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮಯದಾಯಕ್ಕೆ ಒಬಿಸಿ(2ಎ) ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಿಎಂ ಸ್ಥಾನ ಬದಲಾಗುವ ಮುನ್ನ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗದ ಮೀಸಲಾತಿಗೆ ಸೇರಿಸಬೇಕೆಂದು 39 ದಿನ ಪಾದಯಾತ್ರೆ ಕೈಗೊಂಡು ಒತ್ತಾಯಿಸಲಾಗಿತ್ತು. ಆಗ ಮುಂದಿನ 6 ತಿಂಗಳಲ್ಲಿ ಮೀಸಲಾತಿ ನೀಡುವುದಾಗಿಸಿಎಂ ಯಡಿಯೂರಪ್ಪ ಅವರು ಸದನದಲ್ಲಿ ಭರವಸೆ ಕೊಟ್ಟಿದ್ದ, ಹಿನ್ನೆಲೆಯಲ್ಲಿ ಮಾ. …
Read More »ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ
ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ. ಧನ್ವಂತರಿ ಯಾಗದಲ್ಲಿ ಭಾಗಿಯಾದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, …
Read More »ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!
ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ …
Read More »