ಬೆಂಗಳೂರು: ಬಿಜೆಪಿ ಕಟ್ಟಾಳು ಬಿಎಸ್ ಯಡಿಯೂರಪ್ಪ ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಾವು ರಾಜೀನಾಮೆ ನಿರ್ಧರಿಸಿರುವುದನ್ನು ಹೇಳುವಾಗ ಯಡಿಯೂರಪ್ಪ ಗದ್ಗದಿತರಾದರು ಆ ಕ್ಷಣ ಅವರ ಅಭಿಮಾನಿಗಳಷ್ಟೇ ಅಲ್ಲದೇ ರಾಜ್ಯದ ಪ್ರತಿಯೊಬ್ಬರಿಗೂ ಬೇಸರವಾಗಿತ್ತು. ಇದೀಗ ಬಿಎಸ್ವೈ ಅವರು ತಮ್ಮ ನಿವಾಸದಲ್ಲಿ ಕಾಲಕಳೆಯುತ್ತಿದ್ದು, ಬೆಳ್ಳಂಬೆಳಿಗ್ಗೆ ನಿವಾಸದಲ್ಲಿರುವ ಹಸುಗಳನ್ನು ಮುದ್ದಾಡಿದ್ದಾರೆ. ಸದ್ಯ ರಾಜಕೀಯ ಜಂಜಾಟಗಳನ್ನು ಬದಿಗೊತ್ತಿ, ಎಸ್.ಆರ್.ವಿಶ್ವನಾಥ್ ತಂದು ಕೊಟ್ಟಿದ್ದ ಹಸುಗಳ ಜೊತೆ ಸಮಯ ಕಳೆದಿದ್ದಾರೆ. ಇನ್ನು ಈ ಹಸುಗಳ ಮೇಲೆ ಯಡಿಯೂರಪ್ಪ …
Read More »ಯಡಿಯೂರಪ್ಪಗೆ ವಯಸ್ಸು 75 ವರ್ಷ, ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ – ಕಾಂಗ್ರೆಸ್ ಎಂಎಲ್ಸಿ ಸಿ.ಎಂ. ಇಬ್ರಾಹಿಂ
ಬೆಂಗಳೂರು: ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯಾ, ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ವಯಸ್ಸು. ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಆರೂವರೆ ಕೋಟಿ ಜನರಿರುವ ರಾಜ್ಯದಲ್ಲಿ ಬದಲಾವಣೆ ಸಹಿಸಲ್ಲ. ಏಕಾಏಕಿ ರಾಜಕೀಯ ಒತ್ತಡ ಹಾಕಿ ಪಡೆಯೋದು ಸರಿಯಲ್ಲ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಅಕ್ಟೋಬರ್ನಲ್ಲಿ ಅಲ್ಪಸಂಖ್ಯಾತರ …
Read More »ಛಲದಂಕಮಲ್ಲನ ಹೋರಾಟದ ಹಾದಿ
ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …
Read More »ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …
Read More »ಯಾರಾಗ್ತಾರೆ ರಾಜ್ಯ ದ ಮುಂದಿನ ಸಿಎಂ?..
ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಗಾದಿ ಎಂಬ ಕುತೂಹಲ ಈಗ ತೀವ್ರವಾಗಿದೆ. ಬಿಜೆಪಿ ಹೈಕಮಾಂಡ್ ಭಾಗವಾಗಿರುವ ನಾಯಕರು, ಹಿರಿಯ ಸಚಿವರು, ಶಾಸಕರು ಸೇರಿದಂತೆ ಹಲವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿವೆ. ಸಂಭವನೀಯರ ಪಟ್ಟಿಯಲ್ಲಿರುವರ ಸಾಮರ್ಥ್ಯ- ದೌರ್ಬಲ್ಯದ ಅಂಶಗಳೇನು ಎಂಬ ವಿವರ ಇಲ್ಲಿದೆ. ಪ್ರಲ್ಹಾದ ಜೋಶಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಉತ್ತರ ಕರ್ನಾಟಕದವರು, ಸಂಘ ಪರಿವಾರದ ನಿಷ್ಠಾವಂತ ಮತ್ತು ಪ್ರಧಾನಿ ಮೋದಿ ಅವರೊಂದಿಗಿನ ನಿಕಟ ಒಡನಾಟ ಇರುವುದು ವರದಾನವಾಗಬಹುದು. ವಿವಾದಗಳಿಲ್ಲ. …
Read More »ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು: ಎಚ್.ವಿಶ್ವನಾಥ್ :
ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ವಿಜಯೇಂದ್ರ ಹಾಗೂ ಮೊಮ್ಮಕ್ಕಳು ಎಲ್ಲವನ್ನೂ ಹಾಳು ಮಾಡಿಬಿಟ್ಟರು. ಯಡಿಯೂರಪ್ಪ ಹೆಸರು, ಅಧಿಕಾರ, ರಾಜ್ಯದ ಅಭಿವೃದ್ಧಿ ಎಲ್ಲವೂ ಅವರ ಮಗನಿಂದ ಹಾಳಾಯಿತು. ಭ್ರಷ್ಟಾಚಾರದಿಂದಾಗಿಯೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರಕ್ಕೆ ಅವರ ಮನೆಯೇ ಮೂಲವಾಯಿತು. ಅದಕ್ಕೆ …
Read More »ಐಪಿಎಸ್ ಅಧಿಕಾರಿ ಚನ್ನಣ್ಣನವರ್ ನನ್ನಣ್ಣ ಎಂದು ಭಕ್ತರಿಂದ ಲಕ್ಷ ಲಕ್ಷ ಲಪಟಾಯಿಸಿ ಎಸ್ಕೇಪ್ ಆದ ಅರ್ಚಕ!
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ನನ್ನ ಅಣ್ಣ, ಬೇಕಿದ್ದರೆ ಈ ಫೋಟೋ ನೋಡಿ. ನಾನು ಪ್ರಭಾವಿ ವ್ಯಕ್ತಿ. ಆಶ್ರಯ ಯೋಜನೆ ಅಡಿ ಮನೆ ಬೇಕಿದ್ದರೆ ಇಷ್ಟು ಲಕ್ಷ ರೂಪಾಯಿ ಕೊಡಿ, ಅಣ್ಣನ ಇನ್ಫ್ಲುಯೆನ್ಸ್ ಬಳಸಿ ಮನೆ ಕೊಡಿಸುವೆ ಎಂದ ಅರ್ಚಕನೊಬ್ಬ ದೇವಾಲಯಕ್ಕೆ ಬರುವ ಭಕ್ತರಿಗೆ ಪಂಗನಾಮ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರಹಳ್ಳಿಯ ಅರ್ಚಕ ಮಹಾಬಲ ಅಲಿಯಾಸ್ ಮಂಜನಾಥ್ ವಂಚನೆ ಮಾಡಿದ ಆರೋಪಿ. ಉತ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ …
Read More »ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್
ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ಈ ಭೇಟಿಯ ವೇಳೆ, ಸ್ಪೀಕರ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಧಾನಸಭಾ ಸಚಿವಾಲಯ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತಂತೆ ವಿವರಿಸಿದ್ದಾರೆ. ಅಲ್ಲದೆ ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ. ಭೇಟಿ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ, ಭಾರತದ ಸಂವಿಧಾನ ಕುರಿತ ಚರ್ಚೆ, ಸಂಸದೀಯ ನಡೆವಳಿಕೆಯಲ್ಲಿ ಮೌಲ್ಯಗಳು ಮತ್ತು ತತ್ವ, ಸಿದ್ಧಾಂತಗಳು …
Read More »ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ : ಕಾಂಗ್ರೆಸ್
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ” ಬಿಎಸ್ ವೈ ಕಣ್ಣೀರು ಪದತ್ಯಾಗ’ ವಲ್ಲ ‘ಪದಚ್ಯುತಿ’ ಎಂದು ಸಾರಿ ಹೇಳುತ್ತಿದೆ” ಎಂದು ವ್ಯಂಗ್ಯವಾಡಿದೆ. ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ಬಿಜೆಪಿಯ ಹೈಕಮಾಂಡ್ …
Read More »ಬಿಎಸ್ವೈ ರಾಜೀನಾಮೆ ನಿರ್ಧಾರ: ಕಾರು ಚಾಲಕನ ಕಣ್ಣೀರು
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಜನಸ್ನೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ಯಡಿಯೂಪ್ಪ ತಮ್ಮ ನಿರ್ಧಾರ ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
Read More »
Laxmi News 24×7