Breaking News

ಬೆಂಗಳೂರು

ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ

ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …

Read More »

ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …

Read More »

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತ: ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು :‌ ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ …

Read More »

ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ …

Read More »

ಶಾಲೆಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ, ಇಲ್ಲವಾದಲ್ಲಿ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಗೂ ಅವಕಾಶವಿಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿ …

Read More »

ದಕ್ಷ ಅಧಿಕಾರಿ ಅಣ್ಣಾಮಲೈ ಹಾದಿಯಲ್ಲಿ ರವಿ.ಡಿ.ಚನ್ನಣ್ಣನವರ್ ?

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಮಾಣಿಕ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ನಡೆ ತೀವ್ರ ಕೂತುಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಚೆನ್ನಣ್ಣನವರನ್ನು ಈಚೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಿದೆ. ಪ್ರಸ್ತುತ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮಠಯಾತ್ರೆ ಕೈಗೊಂಡಿರುವ ಅವರು, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಕಾಗಿನೆಲೆ ಪೀಠಕ್ಕೆ …

Read More »

ಕನ್ನಡದಲ್ಲಿ ಬ್ಯಾಂಕ್ ಪರೀಕ್ಷೆ : ಕೇಂದ್ರದಿಂದ ಸಮಿತಿ ರಚನೆ

ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ. 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ …

Read More »

ಒಬ್ಬ ಹೆಣ್ಣಾದ ನನ್ನನ್ನು ಈ ಪ್ರಕರಣಕ್ಕೆ ಬಳಸಿಕೊಂಡರು -ಉಮಾಪತಿ ವಿರುದ್ಧ ಅರುಣಾಕುಮಾರಿ ಕಿಡಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್​ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …

Read More »

ಕೊರೊನಾ ಪಾಸಿಟಿವ್​ ಬಂತೆಂದು ಎಸ್ಕೇಪ್​ ಆಗಿದ್ದ 96,000 ಜನರು ಪತ್ತೆ.. 400 ಮಂದಿ ಈಗಲೂ ಮಿಸ್ಸಿಂಗ್

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ರೆ, ಮತ್ತೊಂದೆಡೆ ಸೋಂಕಿತರು ನಾಪತ್ತೆಯಾಗ್ತಿದ್ರು. ಇದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲೇ ಹೆಚ್ಚು ಮಂದಿ ನಾಪತ್ತೆ‌ಯಾಗಿದ್ದರು. ಈ ನಡುವೆ ಪೊಲೀಸ್ರಿಗೆ ಸಿಕ್ಕವರು ಎಷ್ಟು ಮಂದಿ ಗೊತ್ತಾ? ಕೊರೊನಾ.. ಹೆಸ್ರು ಕೇಳಿದ್ರೆನೆ ಒಂದು ಸಮಯದಲ್ಲಿ ಎಲ್ಲರೂ ಬೆಚ್ಚಿ ಬೀಳ್ತಿದ್ರು. ಇನ್ನು ತಮಗೆ ಹೆಮ್ಮಾರಿ ತಗುಲಿದೆ ಅಂದಾಕ್ಷಣ ಅದೆಷ್ಟೋ ಸೋಂಕಿತರು ಹೆದರಿ ಹೇಳದೆ ಕೇಳದೆ ನಾಪತ್ತೆಯಾಗ್ಬಿಟ್ಟಿದ್ರು. ತಪ್ಪಿಸಿಕೊಂಡವರ …

Read More »

ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್​ಲೈನ್​ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್​ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ‌ ಇರ್ತೇನೆ. ಅಂಬರೀಶ್ …

Read More »