ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …
Read More »4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!
ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು …
Read More »ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..!
ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..! ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡ್ನಾ ಪೊಲೀಸಪ್ಪ? ಒಂದೇ ಒಂದು ಹಗ್ ಮಾಡು ಯಾರಿಗು ಹೇಳುವುದಿಲ್ಲ ಅಂತಾ ಟೆಕ್ಕಿಗೆ ಹಿಂಸೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಅಮಾನತು..! ಬಾಪೂಜಿನಗರದ ಯುವತಿಯೊಬ್ಬಳು ಪಾಸ್ ಪೋರ್ಟ್ಗೆ ಅರ್ಜಿ ಸಲ್ಲಿಸಿದ್ಲು ಈ ವೇಳೆ ಪಾಸ್ ಪೋರ್ಟ್ ವೆರಿಫಿಕೇಷನ್ ಅಂತಾ ಎರಡು …
Read More »ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ …
Read More »ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್ನಿಂದ ಸಿಗಲಿದೆ ರೇಷನ್
ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ 27: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಿದ್ದವರಿಗೆ ಮರು ಪರಶೀಲನೆ ಭರವಸೆ ನೀಡಿತ್ತು. …
Read More »ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು!
ಎಂ. ಚಿನ್ನಸ್ವಾಮಿ ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು! ಮಂಗಳಂ ಚಿನ್ನಸ್ವಾಮಿ 1900 ಮಾರ್ಚ್ 29ರಂದು ಮಂಡ್ಯದಲ್ಲಿ ಜನಿಸಿದರು. ವೃತ್ತಿಯಲ್ಲಿ ವಕೀಲರಾದ ಚಿನ್ನಸ್ವಾಮಿ ಅವರು 1925ರಿಂದ 1975ರವರೆಗೆ ಸಕ್ರಿಯವಾಗಿ ವಕೀಲಿ ವೃತ್ತಿಯನ್ನು ನಡೆಸಿದವರು. ಅವರು ಅನೇಕ ಪ್ರಸಿದ್ಧ ಸಂಸ್ಥೆಗಳಿಗೆ ಕಾನೂನು ತಜ್ಞರಾಗಿದ್ದರು. …
Read More »ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ
ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು …
Read More »ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ
ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಬೆಳಗ್ಗೆ 11.30ಕ್ಕೆ ಈ ಪತ್ರಿಕಾಗೋಷ್ಠಿ ನಡೆಯಲಿದೆ. ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಕುಮಾರ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಬೆಂಗಳೂರು ಸದಾಶಿವನಗರದಲ್ಲಿರುವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಯುವುದು. ಯಾವುದೇ ಕಾರಣದಿಂದ ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಘೋಷಿಸಿರುವ ಈ ನಾಯಕರು ಈಗಾಗಲೆ ಹಲವು …
Read More »ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ
ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ ಉದ್ದೇಶಿಸಿರುವ ಬೆನ್ನಲ್ಲೇ ರಾಜ್ಯದ ಪ್ರಬಲ ಸಮುದಾಯ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ, ವರದಿಯೇ ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದ್ದು, ಹೊಸದಾಗಿ ಸಮೀಕ್ಷೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಂಡಿದೆ. ಅಷ್ಟೇ ಅಲ್ಲ, ಇದಕ್ಕೆ ಪರ್ಯಾಯವಾಗಿ ಶೀಘ್ರ ತನ್ನ ಸಮುದಾಯದ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಈ ಮಹತ್ವದ …
Read More »ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ
ಬೆಂಗಳೂರು: ಬಿಗ್ಬಾಸ್ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್ ಹಾಗೂ ರಂಜಿತ್ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …
Read More »