ಬೆಂಗಳೂರು: ಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಸದ್ಯ ಲೂಸ್ ಮಾದ ಯೋಗಿ 50ನೇ ಚಿತ್ರ ರೋಸಿ ನಿರ್ದೇಶನದಲ್ಲಿ ಬ್ಯುಸಿಯಾಗಿ ಅವರು ಈ ಮಧ್ಯೆ ‘ಲಾರ್ಡ್ ಗಾಗಾ’ ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಿರ್ದೇಶನ ಪಕ್ಕಕ್ಕಿಟ್ಟು ಶೂನ್ಯ ಲಾರ್ಡ್ ಗಾಗಾ ಮೂಲಕ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಶೂನ್ಯ ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾಗೆ ಲಾರ್ಡ್ ಗಾಗಾ ಎಂಬ …
Read More »ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ವರದಿ ನೀಡಲು ಸೂಚನೆ; ತುಷಾರ್ ಗಿರಿ ನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ …
Read More »ದಿನ ಬೆಳಗಾದರೆ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ; ಡಿ.ಕೆ.ಶಿವಕುಮಾರ್
ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನ ಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿಯೇ ಪ್ರತಿಕ್ರಿಯಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಉತ್ತರಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಸಭೆ, …
Read More »ಡಿ.ಕೆ.ಶಿ ಗೆ ವಿರೋಧವಿಲ್ಲ…ಎಲ್ಲರೂ ಒಂದೇ ಪಕ್ಷದಲ್ಲಿದ್ದೇವೆ ನಿವೃತ್ತಿಯಾದರೂ ಸಿದ್ಧರಾಮಯ್ಯ ಪಕ್ಷಕ್ಕೆ ಬೇಕೆಬೇಕು; ಸಚಿವ ಸತೀಶ ಜಾರಕಿಹೊಳಿ
ಬೆಂಗಳೂರು: ಡಿ.ಕೆ. ಶಿವಕುಮಾರ ಅವರಿಗೆ ವಿರೋಧವೆಂದಿನೂ ಇಲ್ಲ. ನಾವು ನಮ್ಮ ಹಕ್ಕುಗಳನ್ನು ಕೇಳಿದ್ದೇವೆ. ನಾವೆಲ್ಲರೂ ಒಂದೇ ಪಕ್ಷದಲ್ಲಿದ್ದೇವೆ. ಸಿಎಂ ಸಿದ್ಧರಾಮಯ್ಯನವರ ಕೊಡುಗೆ ಕಾಂಗ್ರೆಸಗೆ ಅಪಾರವಾಗಿದ್ದು, ಒಂದು ವೇಳೆ ನಿವೃತ್ತಿಯಾದರೂ ಕೂಡ ಪಕ್ಷಕ್ಕೆ ಅವರ ಮಾರ್ಗದರ್ಶನ ಅತ್ಯವಶ್ಯಕವೆಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ಧರಾಮಯ್ಯನವರು ನಮಗೆ ಬೇಕೆ ಬೇಕು. ಒಂದು ವೇಳೆ ಅವರು ರಾಜಕೀಯ ನಿವೃತ್ತಿಯಾದರೂ …
Read More »ಜಿಮ್ ಬಂಪರ್ ;ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ ಶೇ 75ರಷ್ಟು ಹೂಡಿಕೆ ; ಉತ್ತರ ಕರ್ನಾಟಕಕ್ಕೆ ಹರಿದ ಶೇ.45ರಷ್ಟು ಬಂಡವಾಳ
ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ …
Read More »ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ಈಶ್ವರ ಬಿ ಖಂಡ್ರೆ ನಡೆಸಲು ಸೂಚನೆ
ಬೆಂಗಳೂರು : ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷ ಸುರಿದ ಉತ್ತಮ ಮಳೆಯ ನಡುವೆಯೂ ಈ ಬಾರಿ ಬಿಸಿಲು ಹೆಚ್ಚಳವಾಗಿದ್ದು, ಕಾಡ್ಗಿಚ್ಚಿನ ಅಪಾಯ ಎದುರಿಸಲು ಸರ್ವಸನ್ನದ್ಧರಾಗಿರುವಂತೆ ಸೂಚನೆ ನೀಡಿದರು. …
Read More »ಟ್ಯಾಂಕರ್ ನಲ್ಲಿ ನೆರೆ ರಾಜ್ಯದ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು : ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತದಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿದೆ ಎಂಬ ಮಾಧ್ಯಮ ವರದಿಗೆ ಸ್ಪಂದಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, …
Read More »ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ ಏರುಘಟ್ಟದ ನಡಿಗೆ ಬಿಡುಗಡೆ ; ಈಶ್ವರ ಖಂಡ್ರೆ
ಬೆಂಗಳೂರು : ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪರಿಷತ್ತಿನಲ್ಲಿಂದು ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ A Walk up the Hill ನ ಕನ್ನಡ ಕೃತಿ ‘ಏರುಘಟ್ಟದ ನಡಿಗೆ’ ಬಿಡುಗಡೆ ಮಾಡಿ ಮಾತನಾಡಿದ ಅವರು, …
Read More »ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ಪಿಲ್ಲರ್ಗಳ ಮೇಲೆ ಚನ್ನಪಟ್ಟಣ ಕಲೆ ಬಿಂಬಿಸುವ ದೈನಂದಿನ ಸೆಲೆಬ್ರಿಟೀಸ್ಗಳ ಚಿತ್ರಣ.
ಬೆಂಗಳೂರು: ನಗರದ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಬಯೋಕಾನ್ ಫೌಂಡೇಷನ್ನ ಸಿಎಸ್ಆರ್ ಅಡಿಯಲ್ಲಿ ಚಿತ್ರಿಸಲಾಗಿದೆ. ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ. “ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್ಗಳ ಸಂಭ್ರಮಾಚರಣೆ” ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಲಾಗಿದೆ. ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್, ಟೈಲರ್ಗಳು, ಪ್ಲಂಬರ್ಸ್, …
Read More »ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್ ; ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ …
Read More »
Laxmi News 24×7