Breaking News

ಬೆಂಗಳೂರು

ಕಳ್ಳತನ ಮಾಡುವಾಗ ಮೊಬೈಲ್ ಬಳಸದ ಚಾಣಾಕ್ಷ

ಬೆಂಗಳೂರು: ಈತನ ಲವ್ವು ತನ್ನ ಲೈಫನ್ನೆ ಬದಲಿಸಿತ್ತು. ಪ್ರೀತಿಸೋದಳನ್ನ ರಾಯಲಾಗಿ ನೋಡಿಕೊಳ್ಳಬೇಕೆಂಬ ಆಸೆ ಮತ್ತು ನೆಪವೇ ಈತ ಅಫೆನ್ಸ್​ಗಳ ಮೇಲೆ ಅಫೆನ್ಸ್ ಮಾಡೋದಕ್ಕೆ ಕಾರಣವಾಯ್ತು. ಒಂದು ಬಾರಿ ಕಳ್ಳ ಎನಿಸಿಕೊಂಡವನು ಅದೇ ಚಟವಾಗಿದ್ದರಿಂದ ತನ್ನೀಡಿ ಜೀವನವನ್ನೇ ಕಳ್ಳತನಕ್ಕೆ ಮುಡಿಪಿಟ್ಟಿದ್ದ ಅಂತಹ ಕಳ್ಳನನ್ನ ಸಿಸಿಬಿ ಹೆಡೆಮುರಿ ಕಟ್ಟಿದೆ. ಬರೋಬ್ಬರಿ 80 ಲಕ್ಷ ಮೌಲ್ಯದ ಒಂದೂವರೆ ಕೆ.ಜಿ ಚಿನ್ನವನ್ನ ಈ ಕುಖ್ಯಾತ ಅಂತರ್ ರಾಜ್ಯ ಕಳ್ಳನಿಂದ ಸಿಸಿಬಿ ಅಧಿಕಾರಿಗಳು ರಿಕವರಿ ಮಾಡಿಕೊಂಡಿದ್ದಾರೆ. 2014 …

Read More »

ಬೆಸ್ಕಾಂನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

  ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಬೆಸ್ಕಾ) ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಕಂಪನಿ ಸೆಕ್ರೆಟರಿ ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 40 ವರ್ಷ. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜನರಲ್‌ ಮ್ಯಾನೇಜರ್‌, ಬೆಸ್ಕಾಂ ಕಾರ್ಪೊರೇಟ್ ಆಫೀಸ್‌, ಕೆಆರ್‌ ಸರ್ಕಲ್‌, ಬೆಂಗಳೂರು …

Read More »

ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ವಿಜಯೇಂದ್ರ ಕಣ್ಣು?

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ರಾಜಕೀಯ ಬದುಕಿಗೆ ಕ್ಷೇತ್ರದ ಸಮಸ್ಯೆ ಎದುರಾಗಿದೆ. ಅವರ ಮುಂದಿನ ರಾಜಕೀಯ ಜೀವನ ಯಾವ ಕ್ಷೇತ್ರದಿಂದ ಆರಂಭವಾಗಲಿದೆ ಎಂಬ ಗೊಂದಲ ಮೊದಲಿನಿಂದಲೂ ಇದೆ. ಇದೀಗ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಕಣ್ಣು ಹಾಕಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಪಕ್ಕಾ ಲಿಂಗಾಯತ ಕ್ಷೇತ್ರವಾಗಿರುವ ಹಾನಗಲ್ …

Read More »

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ …

Read More »

ಧಿಡೀರ್ ದೆಹಲಿಗೆ ಹಾರಿದ್ದಾರೆ ರಮೇಶ್ ಜಾರಕಿಹೊಳಿ ಅವ್ರಿಗೆ ರಾತ್ರಿ ಕರೆ ಮಾಡಿ ದ್ದಾದರು ಯಾರು…

ರಮೇಶ್ ಜಾರಕಿಹೊಳಿ ಒಂದು ಸರಕಾರವನ್ನು ಬೀಳಿಸಿ ಮತ್ತೊಂದು ಸರಕಾರ ರಚಿಸಲು ಪ್ರಮುಖ ಕಾರಣ ರಾದ ರಮೇಶ್ ಜಾರಕಿಹೊಳಿ ಪ್ರತಿದಿನ ಒಂದು ಹೊಸ ವಿಷಯ ದೊಂದಿಗೆ ಚರ್ಚೆ ಯಲ್ಲಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಮಧ್ಯಾಹ್ನ ಸಡನ್ ಆಗಿ ದೆಹಲಿಗೆ ಹಾರಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ಸಾಹುಕಾರರು ಮಧ್ಯಾಹ್ನ ಮುಖ್ಯ ಮಂತ್ರಿಗಳನ್ನಾ ಭೇಟಿ ಮಾಡಿ ದೆಹಲಿಗೆ ಹಾರಿದ್ದಾರೆ. ಹೌದು ನಿನ್ನೆ …

Read More »

ಸದ್ಯಕ್ಕೆ ಶಾಲೆ ಆರಂಭ ಇಲ್ಲ : ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜೂ.28- ಕೋವಿಡ್-19 ನಿಂದಾಗಿ ತೂಗುಯ್ಯಾಲೆಯಲ್ಲಿದ್ದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎನಿಸಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಜುಲೈ 19 (ಸೋಮವಾರ) ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 (ಸೋಮವಾರ)ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೊದಲ ಪತ್ರಿಕೆ (ಗಣಿತ, ಸಮಾಜ ವಿಜ್ಞಾನ …

Read More »

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ

ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ …

Read More »

ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ಬೇಡ : ವಾಟಾಳ್

ಬೆಂಗಳೂರು, ಜೂ.28- ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಚಾಲುಕ್ಯ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಮತ್ತೊಂದು ಬಸವಣ್ಣನವರ ಪ್ರತಿಮೆ ಪ್ರತಿಷ್ಠಾಪಿಸುವುದು ಯಾವುದೇ ಕಾರಣಕ್ಕೂ ಬೇಡ. ವಿಧಾನಸೌಧದ ಬಳಿಯೇ ಈಗಾಗಲೇ ವಿಶ್ವ ಪ್ರಸಿದ್ಧ ಅಶ್ವಾರೂಢ ಕಂಚಿನ ಪ್ರತಿಮೆ ಇದೆ. …

Read More »

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು’ ಎಂದರು. ‘ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದೆ. ಅಂದೇ ವರ್ಗಾವಣೆ ಪ್ರಕ್ರಿಯೆ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »