Breaking News

ಬೆಂಗಳೂರು

1 ರೂಪಾಯಿ ನಾಣ್ಯ ಮಾರಾಟಕ್ಕಿಟ್ಟು ₹1 ಲಕ್ಷ ಕಳೆದುಕೊಂಡ ಶಿಕ್ಷಕಿ

ಬೆಂಗಳೂರು: 1 ರೂಪಾಯಿ ನಾಣ್ಯವನ್ನು ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಶಿಕ್ಷಕಿಯೊಬ್ಬರು 1 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್​ನ 38 ವರ್ಷದ ಶಿಕ್ಷಕಿ ವಂಚನೆಗೊಳಗಾಗಿದ್ದಾರೆ. ಒಂದು ಕೋಟಿ ರೂಪಾಯಿ ಕೊಡುತ್ತೇನೆಂದು ನಂಬಿಸಿದ್ದ ವಂಚಕ, 1 ಲಕ್ಷ ರೂಪಾಯಿಯನ್ನು ತನ್ನ ಖಾತೆಗೆ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು..? ಜೂ.15 ರಂದು ಓಎಲ್‌ಎಕ್ಸ್ ನಲ್ಲಿ ಶಿಕ್ಷಕಿ ಓಎಲ್​​​​​ಎಕ್ಸ್​​​ನಲ್ಲಿ 1947ರ …

Read More »

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ತಗ್ಗುತ್ತಾ ಬಂದಿದೆಯಾದರೂ ಖಾಸಗಿ ಆಸ್ಪತ್ರೆಗಳ ಧನ ದಾಹ ತಗ್ಗಿಲ್ಲ. ಸರ್ಕಾರವೂ ಹಣಕ್ಕಾಗಿ ಪೀಡಿಸುವ ಅಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರೂ ಇವು ಡೋಂಟ್​ ಕೇರ್​ ಅನ್ನುತ್ತಿವೆ. ಬೆಂಗಳೂರಿನ ಹ್ಯಾಮಿಲ್ಟನ್ ಆಸ್ಪತ್ರೆಯ ಹಣದ ದಾಹ ಇತ್ತೀಚಿನ ಪ್ರಕರಣವಾಗಿದೆ. ಬಾಕಿ ಬಿಲ್ ನೀಡದ ಹಿನ್ನೆಲೆ ಮೃತದೇಹ ನೀಡಲು ಆಸ್ಪತ್ರೆ ನಿರಾಕರಿಸಿದೆ ಎಂದು ದೂರಲಾಗಿದೆ. ಹ್ಯಾಮಿಲ್ಟನ್ ಆಸ್ಪತ್ರೆಯ ಆಡಳಿತ ಮಂಡಳಿ ಈ ಅಮಾನವೀಯ ನಡೆಗೆ ಸಾಕ್ಷಿಯಾಗಿದೆ. ರಾಜ್ಯ …

Read More »

ಕಾಂಗ್ರೆಸ್‍ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …

Read More »

ಪತ್ನಿ ಮಾತು ಕೇಳಿ ಮಕ್ಕಳಿಗೆ ಮೈತುಂಬಾ ಬರೆ! ಸುಟ್ಟುಹೋದ ಶರೀರ- ನೋಡಲಾಗುತ್ತಿಲ್ಲ ಕಂದಮ್ಮಗಳ ಕಣ್ಣೀರು

ಬೆಂಗಳೂರು: ಎರಡನೇ ಪತ್ನಿ ಜತೆ ಸೇರಿಕೊಂಡು ತನ್ನ ಮೂವರು ಮಕ್ಕಳ ಮೇಲೆ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದು, ಈ ಸಂಬಂಧ ದಂಪತಿಯನ್ನು ಬಂಧಿಸಲಾಗಿದೆ. ರಾಗಿಗುಡ್ಡ ನಿವಾಸಿ ತಮಿಳು ಸೆಲ್ವನ್‌ (45) ಮತ್ತು ಆತನ 2ನೇ ಪತ್ನಿ ಸತ್ಯಾ (35)ಬಂಧಿತರು. ಗಾಯಗೊಂಡಿರುವ ಸೌಮ್ಯಾ(3), ರಾಘವನ್‌ (4) ಹಾಗೂ ನಿತೇಶ್‌(6) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರೂಸರ್‌ ವಾಹನ ಚಾಲಕನಾಗಿ ರುವ ತಮಿಳುನಾಡು …

Read More »

ಗಾಳಿಪಟದ ದಾರ ಕುತ್ತಿಗೆಗೆ ಉರುಳು: ತಪ್ಪಿಸಿಕೊಳ್ಳಲು ಹೋದ ಬೈಕ್‌ ಸವಾರನ ಬೆರಳುಗಳು ಕಟ್‌!

ಬೆಂಗಳೂರು: ಆಡುಗೋಡಿ ಸಂಚಾರ ಠಾಣೆ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಸವಾರರೊಬ್ಬರ ಕತ್ತಿಗೆ ಗಾಳಿಪಟದ ದಾರ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ದಾರವನ್ನು ಬಿಡಿಸಲು ಹೋಗಿ 2 ಬೆರಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು. ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. …

Read More »

ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ! : ಲಕ್ಷ್ಮಣ ಸವದಿ

ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ …

Read More »

ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಕಿತ್ತಾಟವಾಡಿ ಜನರ ನಡುವೆ ನಗೆಪಾಟಲಿಗೀಡಾಗುವ ನಾಯಕರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಹಾಗೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿ ಬಂದ ನಂತ್ರ ಹೈಕಮಾಂಡ್ ಸಿದ್ದರಾಮಯ್ಯ(Siddaramaiah) ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, …

Read More »

ಬಿಗ್​ಬಾಸ್​ ಮನೆ ಒಳಗೆ ಬರ್ತಿದ್ದಂತೆ ಫೈಟ್ ಶುರು ಮಾಡಿದ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್!

ಬೆಂಗಳೂರು: ಕರೊನಾ ಕಾರಣದಿಂದಾಗಿ ಮಧ್ಯಂತರದಲ್ಲೇ ನಿಲ್ಲಿಸಲಾಗಿದ್ದ ಬಿಗ್​ಬಾಸ್ ಇದೀಗ ಮತ್ತೊಮ್ಮೆ ಸೆಕೆಂಡ್​ ಇನ್ನಿಂಗ್ಸ್ ಮೂಲಕ ವೀಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈಗಾಗಲೇ ಎಲ್ಲ ಸ್ಪರ್ಧಾಳುಗಳು ಮನೆ ತಲುಪಿದ್ದು ಕಲರ್ಸ್​ ಕನ್ನಡ ವಾಹಿನಿ ಅದರ ವಿಟಿಯನ್ನೂ ತೋರಿಸಿದೆ. ಆದರೆ ಒಂದು ವಿಟಿಯಲ್ಲಿ ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಬಿಗ್​ಬಾಸ್ ನೋಡಿದಾಗ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್ ಸ್ನೇಹಿತರಂತೆಯೇ ಕಾಣಿಸಿಕೊಂಡಿದ್ದಾರೆ. …

Read More »

ಮರ ಸ್ಥಳಾಂತರದ ವಿವರ ನೀಡಲು ಸೂಚನೆ

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್‌ ನಿರ್ದೇಶನ ನೀಡಿದೆ. ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು. ‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »