ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …
Read More »ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್ ಡಾಕ್ಟರ್ನಿಂದ ₹80 ಲಕ್ಷ ದೋಖಾ
ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …
Read More »ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ …
Read More »ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.
ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ …
Read More »19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …
Read More »CD ಕೇಸ್; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್, ಶ್ರವಣ್ಗೆ SIT ನೋಟಿಸ್
ಬೆಂಗಳೂರು: ಸಿ.ಡಿ ಕೇಸ್ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …
Read More »ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್
ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಿಂದಾಗಿ ಸರಿಯಾಗಿ ತರಗತಿಗಳೇ ನಡೆದಿಲ್ಲ. ಪಾಠವನ್ನೂ ಮಾಡಲಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುವುದಾದರೂ ಹೇಗೆ? ಎಲ್ಲಿಯೂ ನಡೆಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಸಚಿವರು ತಮ್ಮ ಸ್ವಪ್ರತಿಷ್ಠೆಗಾಗಿ ನಮ್ಮಲ್ಲಿ ನಡೆಸುತ್ತಿರುವುದಾದರೂ ಯಾಕೆ ಎಂದು ಪೋಷಕರು …
Read More »ಆರೋಪಿಗಳಾದ ನರೇಶ್, ಶ್ರವಣ್ ವಿಚಾರಣೆಯಿಂದ ಮಹತ್ವದ ಸತ್ಯ ಬಯಲು!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಮಾಡಿದ ಸಿಟಿ ಪ್ರಕರಣ ಸಂಬಂಧ ಇಂದು ಮಹತ್ವದ ವಿಚಾರಣೆ ನಡೆಯಿತು. ತಿಂಗಳಾನುಗಟ್ಟಲೇ ತಲೆಮರೆಸಿಕೊಂಡು, ಕೋರ್ಟ್ನಿಂದ ಜಾಮೀನು ಪಡೆದಿರುವ ಆರೋಪಿಗಳಾದ ನರೇಶ್ಗೌಡ ಹಾಗೂ ಶ್ರವಣ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿ ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸಿದರು. ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಷರತ್ತುಗಳನ್ನು ಪೂರೈಕೆ ಮಾಡಿರುವ ಬಗ್ಗೆ ಪರಿಶೀಲನೆ ಬಳಿಕ …
Read More »ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ
ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ್ ಅಗ್ನಿ ಸ್ಪರ್ಶ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ …
Read More »ಪ್ರಧಾನಿ ಮೋದಿ, ಸಿಎಂ ಬಿ.ಎಸ್.ವೈ. ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ಜನರ ಜೀವ ಹಿಂಡುವ ಇಂಥ ಸರ್ಕಾರ ಹಿಂದೆಂದೂ ನೋಡಿಲ್ಲ ಎಂದು ವಾಗ್ದಾಳಿ
ಬೆಂಗಳೂರು: ಪ್ರಧಾನಿ ಮೋದಿ ತಿಗಣೆ ತರ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಒಂದೆಡೆ ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಇನ್ನೊಂದೆಡೆ ತೈಲ ಬೆಲೆಯಿಂದ ಹಿಡಿದು ಅಗತ್ಯ ವಸ್ತುಗಳವರೆಗೂ ಎಲ್ಲದರ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಜನಸಾಮಾನ್ಯರು ಬದುಕು ನಡೆಸುವುದಾದರೂ ಹೇಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ, ಮೋದಿ ಎಂದು ಹುಡುಗರು ಘೋಷಣೆಗಳನ್ನು ಕೂಗುತ್ತಿದ್ದರು. ಕೊರೊನಾ ಓಡಿಸಲೆಂದು ಪ್ರಧಾನಿ ಮೋದಿ ಹೇಳಿದಂತೆ ಗಂಟೆ, …
Read More »