Breaking News

ಬೆಂಗಳೂರು

ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ. ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ …

Read More »

ರವೀಂದ್ರ ಕಲಾಕ್ಷೇತ್ರಕ್ಕೆ ಬಂದ ವಿಜಯ್​ ಪಾರ್ಥಿವ ಶರೀರ, ಸ್ನೇಹಿತನ ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಗ್ಗೆ 8ಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ವಿಜಯ್​ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದು ಬೆಳಗ್ಗೆ 10.30ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದ್ದು, ನಂತರ ಹುಟ್ಟೂರು ಚಿಕ್ಕಮಗಳೂರಿನ ಕಡೂರು …

Read More »

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ನಟ ಸಂಚಾರಿ ವಿಜಯ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಅಂದಹಾಗೆ, ಸ್ಯಾಂಡಲ್​ವುಡ್​ನಲ್ಲಿ ಈ ಮೊದಲು ಕೂಡ ಸಾಕಷ್ಟು ಕಲಾವಿದರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ. ಸೌಂದರ್ಯಾ: ಅದು 2004ರ ಏಪ್ರಿಲ್ 17. ನಟಿ ಸೌಂದರ್ಯಾ ಬೆಂಗಳೂರಿನಿಂದ ಕರೀಮ್ ನಗರಕ್ಕೆ ತೆರಳಿ, ಬಿಜೆಪಿ ಪರ ಪ್ರಚಾರ ಮಾಡುವವರಿದ್ದರು. ಅಗ್ನಿ ಏರೋಸ್ಪೋರ್ಟ್ಸ್ ಒಡೆತನದ ನಾಲ್ಕು ಆಸನಗಳ ಮಿನಿ ವಿಮಾನ ಸೆಸ್ಸಾನಾ 180ಯನ್ನು ಬೆಳಗ್ಗೆ …

Read More »

ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ …

Read More »

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ.   ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – …

Read More »

ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ ನೌಕರರಂತೆ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ವರ್ಷಕ್ಕೆ 30 ದಿನ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಿನಗೂಲಿ ನೌಕರರ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ಗಳಿಕೆ ರಜೆಯನ್ನು ಸರ್ಕಾರ …

Read More »

ಅಣ್ಣನ ಸಾವಿಗೆ ಆತನೇ ಕಾರಣ: ದೂರು ದಾಖಲಿಸಿದ ನಟ ಸಂಚಾರಿ ವಿಜಯ್ ಸಹೋದರ!

ಬೆಂಗಳೂರು: ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್​​ ಅವರ ಮೆದುಳು ನಿಷ್ಕ್ರಿಯವಾಗಿರುದರಿಂದ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿದೆ. ಕಿಡ್ನಿ, ಲಿವರ್​​, ಕಣ್ಣು ಸೇರಿ ಕೆಲ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಪಡೆದುಕೊಂಡು ನಾಳೆ ವಿಜಯ್​ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಲಿದ್ದಾರೆ. ಆ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಾವನ್ನು ಅಪೋಲೋ ಆಸ್ಪತ್ರೆ ದೃಢಪಡಿಸಿದೆ. ಸಂಚಾರಿ ವಿಜಯ್​ ತಂದೆ-ತಾಯಿ ತೀರಿಕೊಂಡಿದ್ದಾರೆ, ಮದುವೆ ಸಹ ಇನ್ನೂ ಆಗಿರಲಿಲ್ಲ. ಒಬ್ಬ ತಮ್ಮ ಇದ್ದು …

Read More »

ಲಾಕ್‌ಡೌನ್ ಸಡಿಲಿಕೆ; ಹೆಚ್ಚಿದ ಜನಸಂದಣಿ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ ಭಾಗಶಃ ಸಡಿಲಿಕೆ ಮಾಡಲಾಗಿದ್ದು, ನಗರದಲ್ಲಿ ಸೋಮವಾರ ಬಹುತೇಕ ಕಡೆ ಜನ ಸಂದಣಿ ಹೆಚ್ಚಾಗಿತ್ತು. ನಗರದ ಮೆಜೆಸ್ಟಿಕ್, ಯಶವಂತಪುರ, ಪೀಣ್ಯ, ಚಾಮರಾಜಪೇಟೆ, ಸ್ಯಾಟ್‌ಲೈಟ್ ನಿಲ್ದಾಣ ಹಾಗೂ ಇತರೆ ಪ್ರದೇಶಗಳಲ್ಲಿ ಜನರು ಗುಂಪು ಸೇರಿ ಓಡಾಡಿದ್ದು ಕಂಡುಬಂತು. ಲಾಕ್‌ಡೌನ್‌ನಿಂದಾಗಿ ನಗರ ತೊರೆದು ತಮ್ಮೂರಿಗೆ ಹೋಗಿದ್ದ ಸಾವಿರಾರು ಮಂದಿ ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಸೋಮವಾರ ವಾಪಸು ಬಂದರು. ನಗರದ ಕ್ರಾಂತಿವೀರ …

Read More »

ಬೆಂಗಳೂರಿಗೆ ಬರುವವರಿಗೆ ಗಡಿಯಲ್ಲೇ ಕೋವಿಡ್ ಪರೀಕ್ಷೆ

ಬೆಂಗಳೂರು, ಜೂನ್ 15: ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ನಗರದ ಗಡಿಯಲ್ಲಿ ರ್‍ಯಾಂಡಮ್ ಪರೀಕ್ಷಾ ತಂಡಗಳನ್ನು ನಿಯೋಜಿಸಲು ಮುಂದಾಗಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಖಾನೆ, ಗಾರ್ಮೆಂಟ್ಸ್, ಕಚೇರಿಗಳು ಕೂಡ ಮುಚ್ಚಿದ್ದವು, ಇದರಿಂದಾಗಿ ಕೆಲಸವಿಲ್ಲದೆ ತಮ್ಮ ಊರುಗಳಿಗೆ ಹೋಗಿದ್ದ ಕಾರ್ಮಿಕರು, ಉದ್ಯೋಗಿಗಳು ಲಾಕ್‌ಡೌನ್ ತೆರವಿನಿಂದಾಗಿ ಪುನಃ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳು ಸೇರಿ ವಿವಿಧ ಜಿಲ್ಲೆಗಳ ಕಡೆಗಳಿಂದ ಕಟ್ಟಡ ಕಾರ್ಮಿಕರು, ಕಾರು, ಆಟೋ …

Read More »

ಕರ್ನಾಟಕ ಬಿಜೆಪಿ ಗೊಂದಲ; ಗುರುವಾರ ಶಾಸಕರ ನಿಯೋಗದಿಂದ ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ

ಬೆಂಗಳೂರು: ಇನ್ನೂ ಮುಗಿದಿಲ್ಲ ಕರ್ನಾಟಕ ಬಿಜೆಪಿ ಗೊಂದಲ. ಮೂಮದೆರಡು ವರ್ಷ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಸುವುದಿಲ್ಲ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಅವರೇ ಕಳೆದ ವಾರ ಸ್ಪಷ್ಟಪಡಿಸಿದ್ದರೂ ಇನ್ನೂ ಬಗೆಹರಿದಿಲ್ಲ ರಾಜ್ಯ ಬಿಜೆಪಿ ನಾಯಕತ್ವದ ಬಗೆಗಿನ ಅಸ್ಪಷ್ಟತೆ. ಈ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್​ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್​ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿಯೂ ಆಗಿದೆ. ಆದರೂ ರಾಜ್ಯ …

Read More »