Breaking News

ಬೆಂಗಳೂರು

ಮೇದಾರ ಸಮಾಜದ ಮಗಳ ವಾಕ್ಚಾತುರ್ಯ ಮೆಚ್ಚಿ ಶಹಬಾಶ್.. ತಂಗಿ ಎಂದ ಕರುನಾಡು..!!

ಮಾತುಗಳಲ್ಲಿ ತೊದಲಿಕೆ ಇರಲಿಲ್ಲ,ಮಾಧ್ಯಮ ಮುಂದೆ ತನ್ನ ಕಷ್ಟ ಹೇಳಿಕೊಳ್ಳಲು ಹಿಂಜರಿಕೆ ತೊರಲಿಲ್ಲ, ಬಡತನ ಕಲಿಸಿದ್ದ ಪಾಠದ ಪದಗಳು ಜಲಪಾತದಲ್ಲಿ ಹರಿಯುವ ನೀರಿನಂತೆ ಮಾತಿನ ಮೂಲಕ ಹರಿಯ ತೊಡಗಿದ್ದವು,ಮನದಲ್ಲಿ ತುಂಬಿದ್ದ ನೋವುಗಳು ಸಾಲು ಸಾಲಾಗಿ ಪದಗಳ ಮೂಲಕ ಹೊರಹೊಮ್ಮುತ್ತಿದ್ದವು,ಸಂಕಷ್ಟದ ಸಮಯದಲ್ಲಿ ಎದುರಿಸಿದ ಸವಾಲುಗಳು ಆ ದಿಟ್ಟ ನೊಟದ ಮೂಲಕ ಎದ್ದು ಕಾಣುತ್ತಿದ್ದವು.ನಾಲ್ಕೇ… ನಾಲ್ಕು… ಸಾಲಿನಲ್ಲಿ ಉದುರಿದ ಆ ಪದಗಳು ಕರುನಾಡಿನಲ್ಲಿ ಮನೆ ಮಾತಾಯಿತು.ಲಕ್ಷಾಂತರ ಜನರು ಭಲೇ… ಸಹೋದರಿ ನಿನ್ನ ಈ ದಿಟ್ಟ …

Read More »

ಅನ್​ಲಾಕ್ 2.O: ಮುಂಬೈ & ಪುಣೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ KSRTC ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಅನ್​ಲಾಕ್ 2.O​ ಘೋಷಣೆ ಹಿನ್ನೆಲೆ ಅಂತರ್​ ರಾಜ್ಯ ಬಸ್​ ಸಂಚಾರಕ್ಕೆ ಕೆಎಸ್​ಆರ್​ಟಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲೆಗಳಿಂದ ಬಸ್​ಗಳು ಸಂಚರಿಸಲಿದ್ದು ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ್, ಪಂಡರಾಪುರ, ತುಳಜಾಪುರಕ್ಕೆ ಸೇವೆ ನೀಡಲಿವೆ. ಇನ್ನು ಈ ಬಸ್​ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದಷ್ಟು ಪ್ರಯಾಣಿಕರಿಗೆ ಅವಕಾಶವಿರಲಿದೆ. ಎರಡು ಅವಧಿಗಳಲ್ಲಿ ಅಂತರ್​ರಾಜ್ಯ ಕೆಎಸ್​​ಆರ್​ಟಿಸಿ ಬಸ್ ಸಂಚಾರ ನಡೆಸಲಿವೆ. ಮುಂಗಡವಾಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳಲು …

Read More »

ಮಾಜಿ ಕರ್ಪೊರೇಟರ್​​ ರೇಖಾ ಕದಿರೇಶ್​ ಕೊಲೆ -ಜಮೀರ್ ಆಪ್ತನತ್ತ ಬೆಟ್ಟು ಮಾಡಿದ ಎನ್​​​​​.ಆರ್​.ರಮೇಶ್

ಬೆಂಗಳೂರು: ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಚಾಮರಾಜಪೇಟೆ ಶಾಸಕ ಜಮೀರ್ ಆಪ್ತ ಎಂದೇ ಗುರುತಿಸಿಕೊಂಡಿರುವ ಅತೂಶ್ ಎಂಬಾನತ್ತ ಬೆಟ್ಟು ಮಾಡಿ ಅರೋಪ ಮಾಡಿದ್ದಾರೆ. ಕೊಲೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್​​.ಆರ್​.ರಮೇಶ್​ ಅವರು, ರೇಖಾ ಕಳೆದ ಎರಡು ವರ್ಷದ ಹಿಂದೆ ಪತಿ ಕಳೆದು ಕೊಂಡಿದ್ದರು. ಅದು ಆದಾ ನಂತರ ಸಹ ರೇಖಾ ಸಾರ್ವಜನಿಕವಾಗಿ ಬಹಳ ಕೆಲಸ …

Read More »

ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್​ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ …

Read More »

ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ …

Read More »

ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ.

ಬೆಂಗಳೂರು, ಜೂನ್.24: ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ. ಭೂಗತ ಪಾತಕಿ ರಶೀದ್ ಮಲ್ಬಾರಿಯ ಸಹಚರನ ಹತ್ಯೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಗೋವಿಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮದ್ ಸಲೀಂ ಗುಂಡೇಟು ತಿಂದ ಆರೊಪಿ. ಭೂಗತ ಪಾತಕಿ ರಶೀದ್ ಮಲ್ಬಾರಿ ಸಹಚರ ಕಲೀಂ ಆಲಿ ಮಹಿಳೆ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ತಿಳಿದ ಮಮಹದ್ ಸಲೀಂ ಕೆಲ ದಿನಗಳ …

Read More »

: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ :B.S.Y.

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನೂ ಇದೇ ರೀತಿ ಬರ್ಬರವಾಗಿ ಹತ್ಯೆ …

Read More »

1 ರೂಪಾಯಿ ನಾಣ್ಯ ಮಾರಾಟಕ್ಕಿಟ್ಟು ₹1 ಲಕ್ಷ ಕಳೆದುಕೊಂಡ ಶಿಕ್ಷಕಿ

ಬೆಂಗಳೂರು: 1 ರೂಪಾಯಿ ನಾಣ್ಯವನ್ನು ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಶಿಕ್ಷಕಿಯೊಬ್ಬರು 1 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್​ನ 38 ವರ್ಷದ ಶಿಕ್ಷಕಿ ವಂಚನೆಗೊಳಗಾಗಿದ್ದಾರೆ. ಒಂದು ಕೋಟಿ ರೂಪಾಯಿ ಕೊಡುತ್ತೇನೆಂದು ನಂಬಿಸಿದ್ದ ವಂಚಕ, 1 ಲಕ್ಷ ರೂಪಾಯಿಯನ್ನು ತನ್ನ ಖಾತೆಗೆ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು..? ಜೂ.15 ರಂದು ಓಎಲ್‌ಎಕ್ಸ್ ನಲ್ಲಿ ಶಿಕ್ಷಕಿ ಓಎಲ್​​​​​ಎಕ್ಸ್​​​ನಲ್ಲಿ 1947ರ …

Read More »

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ತಗ್ಗುತ್ತಾ ಬಂದಿದೆಯಾದರೂ ಖಾಸಗಿ ಆಸ್ಪತ್ರೆಗಳ ಧನ ದಾಹ ತಗ್ಗಿಲ್ಲ. ಸರ್ಕಾರವೂ ಹಣಕ್ಕಾಗಿ ಪೀಡಿಸುವ ಅಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರೂ ಇವು ಡೋಂಟ್​ ಕೇರ್​ ಅನ್ನುತ್ತಿವೆ. ಬೆಂಗಳೂರಿನ ಹ್ಯಾಮಿಲ್ಟನ್ ಆಸ್ಪತ್ರೆಯ ಹಣದ ದಾಹ ಇತ್ತೀಚಿನ ಪ್ರಕರಣವಾಗಿದೆ. ಬಾಕಿ ಬಿಲ್ ನೀಡದ ಹಿನ್ನೆಲೆ ಮೃತದೇಹ ನೀಡಲು ಆಸ್ಪತ್ರೆ ನಿರಾಕರಿಸಿದೆ ಎಂದು ದೂರಲಾಗಿದೆ. ಹ್ಯಾಮಿಲ್ಟನ್ ಆಸ್ಪತ್ರೆಯ ಆಡಳಿತ ಮಂಡಳಿ ಈ ಅಮಾನವೀಯ ನಡೆಗೆ ಸಾಕ್ಷಿಯಾಗಿದೆ. ರಾಜ್ಯ …

Read More »

ಕಾಂಗ್ರೆಸ್‍ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …

Read More »