ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ. …
Read More »ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಆರೋಪ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು;ಹೈಕೋರ್ಟ್
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ …
Read More »ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, …
Read More »ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.
ಬೆಂಗಳೂರು : ಪ್ರತಿ ವರ್ಷ ಕೊಡಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು …
Read More »ಬಸ್ ಪ್ರಯಾಣ ದರ ಹೆಚ್ಚಳ;ಹೊಸ ವರ್ಷದ ಮರು ದಿನವೇ ಶಾಕಿಂಗ್ ನ್ಯೂಸ್.
ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
Read More »“ಬಾಣಂತಿಯರ ಸಾವನ್ನು ಖಂಡಿಸಿ ಪ್ರತಿದಿನ 5 ಜಿಲ್ಲೆಗಳಲ್ಲಿ ನಾಳೆಯಿಂದ ಪ್ರತಿಭಟನೆ.
ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲವಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು. ಮಹಿಳಾ ಮತ್ತು ಮಕ್ಕಳ …
Read More »ನಿಮ್ಮ ಸಹಕಾರ ಹೆಚ್ಚು ಬೇಕು ; ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಸಿ.ಎಂ ಕರೆ;
ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …
Read More »4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!
ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು …
Read More »ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..!
ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..! ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡ್ನಾ ಪೊಲೀಸಪ್ಪ? ಒಂದೇ ಒಂದು ಹಗ್ ಮಾಡು ಯಾರಿಗು ಹೇಳುವುದಿಲ್ಲ ಅಂತಾ ಟೆಕ್ಕಿಗೆ ಹಿಂಸೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಅಮಾನತು..! ಬಾಪೂಜಿನಗರದ ಯುವತಿಯೊಬ್ಬಳು ಪಾಸ್ ಪೋರ್ಟ್ಗೆ ಅರ್ಜಿ ಸಲ್ಲಿಸಿದ್ಲು ಈ ವೇಳೆ ಪಾಸ್ ಪೋರ್ಟ್ ವೆರಿಫಿಕೇಷನ್ ಅಂತಾ ಎರಡು …
Read More »ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ …
Read More »
Laxmi News 24×7