Breaking News

ಬೆಂಗಳೂರು

ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಎಂ.ಸತೀಶ್‌ ರೆಡ್ಡಿ ಹಸ್ತಕ್ಷೇಪ

ಬೆಂಗಳೂರು: ‘ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ಮಾಡುವ ಬಿಬಿಎಂಪಿಯ ಕೋವಿಡ್‌ ವಾರ್‌ ರೂಂ ಸಿಬ್ಬಂದಿ ಹಾಸಿಗೆ ಮಾರಾಟ ದಂಧೆ ನಡೆಸುತ್ತಿದ್ದಾರೆ’ ಎಂದು ಧ್ವನಿ ಎತ್ತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್‌ ರೆಡ್ಡಿ ಅವರೇ ಈಗ ಹಾಸಿಗೆ ಹಂಚಿಕೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ. ಸತೀಶ್‌ ರೆಡ್ಡಿ ತಮ್ಮ ಬೆಂಬಲಿಗ ಬಾಬು ಎಂಬವರನ್ನು ಎಚ್‌ಎಸ್‌ಆರ್‌ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯ ದ ವಾರ್‌ ರೂಂಗೆ ಕಳುಹಿಸಿ ಅವರ ಮೂಲಕ ಹಾಸಿಗೆ …

Read More »

ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!

ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …

Read More »

ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

ಬೆಂಗಳೂರು, ಮೇ 07; ರಾಜ್ಯಕ್ಕೆ ಪ್ರತಿ ದಿನಕ್ಕೆ 1,200 ಮೆಟ್ರಿಕ್ ಟನ್‌ ಆಕ್ಸಿಜನ್ ಪೂರೈಕೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಕರ್ನಾಟಕ ರಾಜ್ಯದ ಆಕ್ಸಿಜನ್ ಪಾಲನ್ನು ಪ್ರತಿದಿನದ 965 ಮೆಟ್ರಿಕ್ ಟನ್‌ಗಳಿಂದ 1,200 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಿ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.   ಕೋವಿಡ್‌ …

Read More »

ಜನರ ಜೀವ ಉಳಿಸಲು ಲಾಕ್ ಡೌನ್ ಅನಿವಾರ್ಯ : ಸುಧಾಕರ್

ಬೆಂಗಳೂರು : ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡದಿದ್ರೆ ಸಾವು ನೋವು ಜಾಸ್ತಿಯಾಗುತ್ತದೆ ಎಂದು ಬೆಂಗಳೂರಿನಲ್ಲಿ ಶುಕ್ರವಾರ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಕೋವಿಡ್ ಚೈನ್ ಲಿಂಕ್ ಮುರಿಯಲೇ ಬೇಕು. ಲಾಕ್ ಡೌನ್ ಬೇಕೆಂದು ಆರೋಗ್ಯ ಇಲಾಖೆ ಬಲವಾಗಿ ಹೇಳುತ್ತೆ. ತಜ್ಞರು ಕೂಡ ಲಾಕ್ ಡೌನ್ ಮಾಡುವಂತೆ ಹೇಳಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ವಿಚಾರವಾಗಿ ಸಿಎಂ ಯಡಿಯೂರಪ್ಪ ಜೊತೆಯಲ್ಲೂ ಮಾತುಕತೆ ನಡೆಸಲಾಗುತ್ತದೆ. …

Read More »

ಇನ್ನೆರಡು ದಿನಗಳಲ್ಲಿ ಸಂಪೂರ್ಣ ಲಾಕ್ ಆಗಲಿದೆಯಾ ಕರುನಾಡು..?

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳುವ ಮೂಲಕ ಲಾಕ್ ಡೌನ್ ಹೇರುವ ಮುನ್ಸೂಚನೆ ಕೊಟ್ಟಿದ್ದಾರೆ. 12 ನೇ ತಾರೀಖಿನಂದು ಜಾರಿಯಲ್ಲಿರುವ ಕರ್ಫ್ಯೂ ಮುಕ್ತಾಯವಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರದ …

Read More »

ಖಾಸಗಿ ಆಸ್ಪತ್ರೆಗೆ ಒಬ್ಬ ಕೆಎಎಸ್ ಅಧಿಕಾರಿ ನೇಮಕ :ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿದಿನ ಕೋವಿಡ್ ವಾರ್ ರೋಂ ಮತ್ತು ಆಪ್ತಮಿತ್ರ ಪೋರ್ಟಲ್ ಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಕಟ್ಟು ನಿಟ್ಟಿನ‌ ಸೂಚನೆ ನೀಡಲಾಗಿದೆ ಎಂದು ಕೋವಿಡ್ ಚಿಕಿತ್ಸಾ ಹಾಸಿಗೆ ಉಸ್ತುವಾರಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. …

Read More »

ಒಂದು ಬೆಡ್‍ಗೆ 50 ಸಾವಿರ ಲಂಚ..!

ಬೆಂಗಳೂರು,ಮೇ.6- ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡವರು ಅಮಾಯಕರಿಂದ ಒಂದು ಬೆಡ್‍ಗೆ 40 ರಿಂದ 50 ಸಾವಿರ ಹಣ ಪೀಕುತ್ತಿದ್ದರೂ ಎಂಬ ಬೆಳಕಿಗೆ ಬಂದಿದೆ.ಒಂದು ಬೆಡ್‍ನಿಂದ ಸಿಗುತ್ತಿದ್ದ ಹಣದಲ್ಲಿ ಮಧ್ಯವರ್ತಿಗಳಿಗೆ ಶೇ.10 ರಷ್ಟು ಕಮಿಷನ್ ಸಿಗುತಿತ್ತು. ಉಳಿದ ಹಣವನ್ನು ವಾರ್ ರೂಮ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ವೈದ್ಯರು ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ದಂಧೆಯಲ್ಲಿ ಕೆಲ ವೈದ್ಯರೇ ಕಿಂಗ್‍ಪಿನ್‍ಗಳಾಗಿದ್ದುಅವರ ಸೂಚನೆಯಂತೆ ಕೆಲವು ವಾರ್ ರೂಮ್ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ವಾರ್ …

Read More »

ಬಿಜೆಪಿಯಲ್ಲಿ ಅಂತರ್ಯುದ್ಧ: ಬಿ.ಎಲ್‌. ಸಂತೋಷ್‌ ನಿಷ್ಠರ ಸಮರ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಸಮಯದಲ್ಲೇ ಬಿಜೆಪಿಯಲ್ಲಿ ಅಂತರ್ಯುದ್ಧ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಡಳಿತದ ವಿರುದ್ಧ ಸ್ವಪಕ್ಷೀಯರೇ ಕಿಡಿ ಕಾರಲಾರಂಭಿಸಿದ್ದಾರೆ. ಚಾಮರಾಜನಗರದ ದುರ್ಘಟನೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ‘ದುರಂತಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ತಪ್ಪಿತಸ್ಥರಾದರೆ ಆರೋಗ್ಯ ಸಚಿವರ ವಿರುದ್ಧವೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದ್ದರು. ಮತ್ತೊಂದೆಡೆ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ದುಡ್ಡಿಗಾಗಿ ಹಾಸಿಗೆ ಕಾಯ್ದಿರಿಸುವ ಹಗರಣವನ್ನು ಬಯಲಿಗೆಳೆದು …

Read More »

ಇದೊಂದು ದರಿದ್ರ ಸರ್ಕಾರ.. ಬಾಹುಬಲಿ ರೀತಿ ಯುವ ಸಂಸದ ಪ್ರಚಾರ ಪಡ್ಕೊಂಡ’ -HDK ಗುಡುಗು

ಬೆಂಗಳೂರು: ನಗರದಲ್ಲಿ ಇಂದು ಮಹಿಳೆಯೊಬ್ಬರು ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ಬೆಡ್​ ಸಿಕ್ಕರೂ ಆಕೆಯ ಗಂಡ ಆಯಂಬುಲೆನ್ಸ್​​ನಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್​ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇದಕ್ಕೆಲ್ಲಾ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು ಎಂದಿದ್ದಾರೆ. ನ್ಯೂಸ್​​ಫಸ್ಟ್​ ಜೊತೆ ಮಾತನಾಡಿದ ಹೆಚ್​ಡಿಕೆ, ಇದೊಂದು ದರಿದ್ರ ಸರ್ಕಾರ. ಯಾವುದೇ ಮುನ್ನೆಚ್ಚರಿಕೆ ವಹಿಸದ ದರಿದ್ರ ಸರ್ಕಾರ ಎಂದು ಹರಿಹಾಯ್ದರು. ಮೊನ್ನೆ ಎಲ್ಲಾ ಬೆಡ್ ಬ್ಲಾಕ್ ಬಗ್ಗೆ ಪ್ರದರ್ಶನ ಕೊಟ್ಟರು. …

Read More »

ನಾವು ಪಂಚರ್ ಹಾಕುವವರೇ.. ನಿಮ್ಮ ಗಾಡಿನೂ ಒಂದಿನ ಪಂಚರ್ ಆಗುತ್ತದೆ’

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದಾಖಲೆಗಳಿಲ್ಲದೇ ಮಾತನಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬೆಡ್ ಬ್ಲಾಕಿಂಗ್ ಹಗರಣದಲ್ಲಿ ನಿಮ್ಮದೇ ಶಾಸಕ ಸತೀಶ್ ರೆಡ್ಡಿ ಪಿಎ ಶಾಮೀಲಾಗಿದ್ದಾರೆ ಇದಕ್ಕೇನು ಉತ್ತರಿಸುತ್ತೀರಿ ತೇಜಸ್ವಿ ಸೂರ್ಯ? ತಪ್ಪುಗಳಾದಾಗ ನಿಮಗೆ ಕೇವಲ ಮುಸ್ಲಿಂಮರು ಮಾತ್ರ ಕಾಣುತ್ತಾರೆ. ನಿಮ್ಮಲ್ಲಿ ಅದೆಷ್ಟು ವಿಷ ಇಟ್ಟುಕೊಂಡಿದ್ದೀರಿ. ವಾರ್ ರೂಂ …

Read More »