Breaking News
Home / ಜಿಲ್ಲೆ / ಬೆಂಗಳೂರು (page 17)

ಬೆಂಗಳೂರು

ಹೆಂಡತಿ ತಂಗಿ ಮೇಲೆ ಕಣ್ಣಿಟ್ಟವನ ಕೈ ಕತ್ತರಿಸಿದ್ದ ಭಾವ, ಮೂವರು ಅಂದರ್‌.!

ಬೆಂಗಳೂರು: ಹೆಂಡತಿ ತಂಗಿ ಮೇಲೆ ಕಣ್ಣು ಹಾಕಿದ್ದ ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ಯುವತಿಯ ಭಾವ ಸೇರಿ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ ಖಾನ್, ಮಹಮ್ಮದ್ ಸಲೀಂ, ಅಬೂಬಕ್ಕರ್ ಸಿದ್ಧಿಕಿ ಕಂಬಿ ಈಗ ಮುದ್ದೆ ಮುರಿಯುತ್ತಿರುವವರು.   ತಂಟೆ ತಕರಾರು ಮಾಡಿಕೊಂಡು ಓಡಾಡಿಕೊಂಡಿದ್ದ ಶೋಯೆಬ್‌ ಎಂಬಾತ ಬಂಧಿತ ಮುಬಾರಕ್ ಹೆಂಡತಿಯ ತಂಗಿ ಹಿಂದೆ ಬಿದ್ದು ಪ್ರೀತ್ಸೆ ಪ್ರೀತ್ಸೆ ಅಂತಾ ಕಾಟ ಕೊಡುತ್ತಿದ್ದನಂತೆ. ಹೀಗಾಗಿ ಶೋಯೊಬ್‌ಗೆ ಮುಬಾರಕ್ ಹಲವು …

Read More »

ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …

Read More »

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್‌’ ತಲುಪಿಲ್ಲ. ಟ್ಯಾಬ್‌ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ …

Read More »

ಪಂಜಾಬ್ ನಲ್ಲಿ ಹಾವೇರಿ ಮೂಲದ ಯೋಧ ಹುತಾತ್ಮ : ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಪಂಜಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ಯೋಧ ಶಿವರಾಜ್ ಎಂಬುವವರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ಯೋಧ ಶಿವರಾಜ್ ಹುತಾತ್ಮರಾಗಿದ್ದಾರೆ.   ಈ ಹಿನ್ನೆಲೆ ಮೃತಪಟ್ಟ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ …

Read More »

A.I.C.C. ಅಧ್ಯಕ್ಷಗಾದಿ ಅಲಂಕರಿಸುತ್ತಾರಾ ಎರಡನೇ ಕನ್ನಡಿಗ, ದಲಿತ ನಾಯಕ ಖರ್ಗೆ !

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕೊನೆಗೂ ಗಾಂಧಿ ಕುಟುಂಬದ ಪ್ರಾಬಲ್ಯ ತಾತ್ಕಾಲಿಕವಾಗಿ ಅಂತ್ಯಕಾಣುವ ಸಾಧ್ಯತೆ ಗೋಚರಿಸುತ್ತಿದ್ದು, ಪಕ್ಷದ ಅಧ್ಯಕ್ಷಗಾದಿಗೆ ಸ್ಪರ್ಧಿಸಿದವರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸರ್ವೋಚ್ಛ ಸ್ಥಾನಕ್ಕೆ ಏರುವ ಸಾಧ್ಯತೆ ಹೆಚ್ಚಾಗಿ ಗೋಚರಿಸುತ್ತಿದೆ. ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಜತೆ ರಾಷ್ಟ್ರೀಯ ನಾಯಕ ಶಶಿ ತರೂರ್ ಸಹ ಪ್ರಬಲ ಸ್ಪರ್ಧಿ. ಖರ್ಗೆ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಕಡೆಯ ಕ್ಷಣದಲ್ಲಿ ಸ್ಪರ್ಧಾ …

Read More »

ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ

ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ …

Read More »

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಖರ್ಗೆ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ!

ಬೆಂಗಳೂರು: ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಸಮೀಪಿಸುತ್ತಿದ್ದು, ಸಂಸದ ಶಶಿ ತರೂರ್ ಮತ್ತು ಮಾಜಿ ಸಚಿವ ಕೆ.ಎನ್​.ತ್ರಿಪಾಠಿ, ಗಾಂಧಿ ಪರಿವಾರದ ನಿಷ್ಠ ಮತ್ತು ಪಕ್ಷದ ಶಿಸ್ತಿನ ಸಿಪಾಯಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ. ನಿನ್ನೆಯಷ್ಟೇ ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದು, ಮುಂದಿನ ಕಾಂಗ್ರೆಸ್​ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವಾಗಲೇ ಖರ್ಗೆ ಕುರಿತಾದ ಅಚ್ಚರಿಯ ಭವಿಷ್ಯವೊಂದು ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಭವಿಷ್ಯದ ಕುರಿತು ಭಾರೀ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ …

Read More »

ಮಹದಾಯಿ ಯೋಜನೆ’ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ದಸರಾ ಬಳಿಕ ಕಾಮಗಾರಿ

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.     ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು …

Read More »

ಅ.3ರಿಂದ ರಾಜ್ಯ ಹೈಕೋರ್ಟ್ ಗೆ 5 ದಿನಗಳ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಅ.3ರಿಂದ 7ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಅ.1 ಮತ್ತು 2 ಶನಿವಾರ ಹಾಗೂ ಭಾನುವಾರ ಅದೇ ರೀತಿ ಅ.8 ಮತ್ತು 9 ಕ್ರಮವಾಗಿ ಶನಿವಾರ ಹಾಗೂ ಭಾನುವಾರ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ರಜೆ ಇರಲಿದೆ.   ತುರ್ತು ಪ್ರಕರಣಗಳ ವಿಚಾರಣೆಗೆ ಅ.6ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ವಿಶೇಷ ಪೀಠಗಳ ಕಲಾಪ …

Read More »

ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ಮಾಡಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರಾಜ್ಯದ 9 ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್‌ ಕೊಟ್ಟಿದ್ದಾರೆ.   ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಮುಂಜಾನೆ 4.30ಕ್ಕೆ ಏಕಕಾಲದಲ್ಲಿ ನೂರಾರು ಲೋಕಾಯಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪೈಕಿ 7 ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಂಗ್ರಹಿಸಿಟ್ಟಿದ್ದ ಕಂತೆ-ಕಂತೆ ನೋಟುಗಳನ್ನು ಕಂಡು ಲೋಕಾ ಪೊಲೀಸರೇ ದಂಗಾಗಿದ್ದಾರೆ. ಇನ್ನು …

Read More »