Breaking News

ಬೆಂಗಳೂರು

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಷರತ್ತು ವಿಧಿಸಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಬಕಾರಿ ಇಲಾಖೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟ ಮಾಡಬಹುದಾಗಿದೆ. ಸೀಲ್ಡ್ ಬಾಟಲ್ ಗಳಲ್ಲಿ ಪಾರ್ಸೆಲ್ ನೀಡಬೇಕು. ಎಂಆರ್ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಗರಿಷ್ಠ ಎರಡು ಲೀಟರ್ ಬಿಯರ್ ಮಾತ್ರ ಖರೀದಿಸಬೇಕು. ಮದ್ಯ ಖರೀದಿ ವೇಳೆ ನೂಕಾಟ ಮಾಡುವಂತಿಲ್ಲ. ಮದ್ಯದಂಗಡಿಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸೂಪರ್ ಮಾರ್ಕೇಟ್ …

Read More »

ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? :ಎಂಟಿಬಿ ನಾಗರಾಜ್ ಪ್ರಶ್ನೆ

ನಿನ್ನೆ ನಡೆದ ಸಂಪುಟ ಸಭೆಯಯಲ್ಲಿ ಸಚಿವ ಎಂಟಿಬಿ ನಾಗರಾಜ್​ ಆರೋಗ್ಯ ಸಚಿವ ಸುಧಾಕರ್ ಕಾರ್ಯ ವೈಫಲ್ಯತೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಬೆಡ್ ಕೊಡಿಸಿ,ಆಸ್ಪತ್ರೆ ಸಿಗ್ತಿಲ್ಲ ಅಂತ ನನ್ನ ಕ್ಷೇತ್ರದಲ್ಲಿ ದಿನವೂ ಹಲವು ಕರೆಗಳು ಬರ್ತಿವೆ. ನಮ್ಮ ಸಂಬಂಧಿಕರಿಗೆ ಹಾಸಿಗೆ ಸಿಗದೇ ಪರದಾಡಿದ್ರು. ನಾನೇ ಖುದ್ದು ಆರೋಗ್ಯ ಸಚಿವರಿಗೆ ಮೂರು ಭಾರಿ ಕರೆ ಮಾಡಿದೆ. ಒಂದೇ ಒಂದು ಬೆಡ್ ಅಡ್ಜಸ್ಟ್ ಮಾಡೋಕೆ ಆಗಲಿಲ್ಲ. ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? …

Read More »

ಹೆಚ್ಚುವರಿ ಬಸ್​ ಬಿಟ್ಟ ಹಿನ್ನೆಲೆ: ಮೆಜೆಸ್ಟಿಕ್ ಬಳಿ ಭಾರೀ ಟ್ರಾಫಿಕ್ ಜಾಮ್

ಬೆಂಗಳೂರು: ನಿನ್ನೆ ಸಿಎಂ ಕ್ಲೋಸ್​​​ಡೌನ್​ ಅನೌನ್ಸ್​ ಮಾಡ್ತಿದ್ದಂತೆ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ ಕೆಲವರು ಊರು ಬಿಡೋದಕ್ಕೆ ಶುರುಮಾಡಿದ್ದಾರೆ. ಇಂದು ರಾತ್ರಿಯಿಂದ ರಾಜ್ಯದಲ್ಲಿ ಕ್ಲೋಸ್​ಡೌನ್ ಜಾರಿಯಾಗಲಿದೆ. ಹೀಗಾಗಿ ಜನರು ಕುಟುಂಬಸಮೇತ, ಗಂಟು ಮೂಟೆ ಕಟ್ಟಿಕೊಂಡು ತಮ್ಮೂರಿನತ್ತ ತೆರಳುತ್ತಿದ್ದಾರೆ. ಹೀಗಾಗಿ ಮೂರು ಸಾರಿಗೆ ನಿಗಮಗಳಿಂದ 12 ಸಾವಿರಕ್ಕೂ ಅಧಿಕ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್​​ಆರ್​ಟಿಸಿ ಬಸ್​ಗಳನ್ನ ಬಿಟ್ಟ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಗ್ಗೆ 5.30ರಿಂದ, ಮೆಜೆಸ್ಟಿಕ್ ಕೆಎಸ್​​ಆರ್​​ಟಿಸಿ ನಿಲ್ದಾಣದಿಂದ …

Read More »

14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ

ಕೊರೊನಾ ಎರಡನೇ ತಡೆಯಲು ರಾಜ್ಯ ಸರ್ಕಾರವು 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ, ಬಹುಪಾಲು ವ್ಯಾಪಾರ ವಹಿವಾಟುಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಾದ್ಯಂತ ಚಿತ್ರಮಂದಿರಗಳನ್ನು ಈಗಾಗಲೇ ಬಂದ್ ಮಾಡಿರುವ ರಾಜ್ಯ ಸರ್ಕಾರ ಇದೀಗ ಚಿತ್ರೀಕರಣವನ್ನು ಸಹ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿರುವ ರಾಜ್ಯ ಸರ್ಕಾರ ಚಿತ್ರೀಕರಣದ ಮೇಲೆಯೂ ನಿರ್ಬಂಧ ಹೇರಿದೆ. ಸಿನಿಮಾ, ಧಾರಾವಾಹಿ, …

Read More »

ಬೆಂಗಳೂರಿನಲ್ಲಿ ‘ಆಸ್ಪತ್ರೆ’ಯಲ್ಲಿ ಸತ್ತ ಸೋಂಕಿತರಿಗೆ ಮಾತ್ರವೇ ‘ಅಂತ್ಯ ಸಂಸ್ಕಾರ’ಕ್ಕೆ ಅವಕಾಶ.?

ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರು ಗತಿಯಲ್ಲಿ ಸಾಗುತ್ತಿದೆ. ಸೋಂಕಿನ ಪ್ರಕರಣಗಳ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆಗೆ ಬೆಡ್ ಸಿಗೋದು ಒಂದು ಸಮಸ್ಯೆ ಆದ್ರೇ.. ಸಾವನ್ನಪ್ಪಿದವರ ಅಂತ್ಯ ಸಂಸ್ಕಾರಕ್ಕೆ ಚಿತಾಗಾರದ ಮುಂದೆ ಸಾಲು ಗಟ್ಟಿರೋ ಅಂಬುಲೆನ್ಸ್ ಕೂಡ ಕಂಡು ಬರ್ತಾ ಇದೆ. ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸತ್ತವರಿಗೆ ಮಾತ್ರವೇ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ, ಮನೆಯಲ್ಲಿ ಸತ್ತವರಿಗೆ ಇಲ್ಲ ಎಂಬುದಾಗಿ ಬಿಬಿಎಂಪಿ …

Read More »

ವಿಶೇಷ ಪ್ಯಾಕೇಜ್ ಇಲ್ಲದೇ ಲಾಕ್‍ಡೌನ್ – ಸರ್ಕಾರದ ನಿಲುವೇನು? ಕೆಲವು ದುಡಿಯುವ ವರ್ಗಗಳಿಗೆ ದೊಡ್ಡ ಪ್ರಮಾಣದಲ್ಲಿಯೇ ಆರ್ಥಿಕ ಹೊಡೆತ ಬೀಳಲಿದೆ

ಬೆಂಗಳೂರು: ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡದೇ ರಾಜ್ಯದಲ್ಲಿ ಸರ್ಕಾರ 16 ದಿನ ಲಾಕ್‍ಡೌನ್ ಮಾಡಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಲಾಕ್‍ಡೌನ್ ಅನಿವಾರ್ಯವಾಗಿತ್ತು. ಆದ್ರೆ ಆರ್ಥಿಕ ಹೊಡೆತಕ್ಕೆ ಸಿಲುಕುವ ವಲಯಗಳಿಗೆ ಸರ್ಕಾರ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. 16 ದಿನದ ಜನತಾ ಲಾಕ್‍ಡೌನ್ ನಲ್ಲಿ ಕೆಲವು ದುಡಿಯುವ ವರ್ಗಗಳಿಗೆ ದೊಡ್ಡ ಪ್ರಮಾಣದಲ್ಲಿಯೇ ಆರ್ಥಿಕ ಹೊಡೆತ ಬೀಳಲಿದೆ. ಕಳೆದ ವರ್ಷದ ಲಾಕ್‍ಡೌನ್ ನಿಂದ ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೊಂದು ಲಾಕ್‍ಡೌನ್ ಘೋಷಣೆಯಾಗಿದೆ. ಗಾರ್ಮೆಂಟ್ಸ್ ಉದ್ಯೋಗಿಗಳು, …

Read More »

ಜಿಂದಾಲ್‍ಗೆ 3,667 ಎಕರೆ ಭೂಮಿ ಮಾರಾಟ ,ಕದ್ದು ಮುಚ್ಚಿ ಮಾರೋದು ಬಿಜೆಪಿಯ ಸಂಸ್ಕೃತಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜಿಂದಾಲ್ ಕಂಪನಿಗೆ ಸರ್ಕಾರ 3,667 ಎಕರೆ ಭೂಮಿ ಮಾರಾಟಕ್ಕೆ ಬಿಎಸ್‍ವೈ ಸರ್ಕಾರಕ್ಕೆ ಮುಂದಾಗಿರುವ ನಡೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಈ ನಿರ್ಧಾರವನ್ನ ವಿರೋಧಿಸಿದ್ದ ಬಿಜೆಪಿ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಅವರ ಮುಂದೆ ಸಾಲು ಸಾಲು ಪ್ರಶ್ನೆಗಳನ್ನಿರಿಸಿದ್ದಾರೆ. ‘ಬಿಎಸ್‍ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ…’ ಜಿಂದಾಲ್‍ಗೆ 3,677 ಎಕರೆ ಭೂಮಿ ಮಾರಾಟ …

Read More »

14 ದಿನ ಕರ್ನಾಟಕ ಲಾಕ್‌ಡೌನ್: ಬಸ್‌, ಕಾರು, ಆಟೊ ಸಂಚಾರವೂ ಇಲ್ಲ

ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಮನೆ ಬಿಟ್ಟು ಹೊರಬರುವುದನ್ನು ತಡೆಯಲು ಮಂಗಳವಾರ (ಏ.27) ರಾತ್ರಿಯಿಂದಲೇ 14 ದಿನಗಳ ಕಾಲ (ಮೇ 12ರವರೆಗೆ) ರಾಜ್ಯಾದ್ಯಂತ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ. ಕೊರೊನಾ ಸೋಂಕಿನ ಸರಪಳಿ ತುಂಡರಿಸಿ, ಕೋವಿಡ್‌ ಪ್ರಕರಣಗಳನ್ನು ತಗ್ಗಿಸಲು ಸಾಧ್ಯ ಎಂಬುದಾಗಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ …

Read More »

ಖಾಸಗಿ ಬಸ್ಸುಗಳಿಂದ‌ ಸುಲಿಗೆ ಆರಂಭ: ದರ ಮೂರು ಪಟ್ಟು ಹೆಚ್ಚಳ!

ಬೆಂಗಳೂರು: ಕರ್ಫ್ಯೂ ಜಾರಿಯಾಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ ಕಂಪನಿಗಳು, ಏಕಾಏಕಿ ಪ್ರಯಾಣ ದರವನ್ನೂ ಮೂರು ಪಟ್ಟು ಏರಿಕೆ ಮಾಡಿವೆ. ಸೋಮವಾರ ಮಧ್ಯಾಹ್ನದವರೆಗೆ ಸಾಮಾನ್ಯ ಪ್ರಯಾಣ ದರವೇ ಇತ್ತು. ಆದರೆ, ಕರ್ಫ್ಯೂ ಘೋಷಣೆಯಾಗುತ್ತಿದ್ದಂತೆ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದೆ. ಆನ್‌ಲೈನ್‌ ಮೂಲಕ ಸೀಟುಗಳ ಬುಕ್ಕಿಂಗ್ ಆರಂಭವಾಗಿದೆ. ಊರಿಗೆ ಹೋಗಲು ಸಿದ್ಧವಾಗಿರುವವರು ಅನಿವಾರ್ಯವಾಗಿಯೇ ದುಬಾರಿ ದರವನ್ನೇ ಕೊಟ್ಟು ಸೀಟು ಕಾಯ್ದಿರಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಮಂಗಳೂರು ಸೇರಿದಂತೆ ಹಲವು ನಗರಗಳಿಗೆ …

Read More »

ಸರ್ಕಾರದ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಆರ್ಥಿಕ ಪ್ಯಾಕೇಜ್ ನೀಡುವಂತೆ ಡಿಕೆಶಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ 15 ದಿನಗಳ ಕಠಿಣ ಕರ್ಫ್ಯೂ ಮಾಡುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಸಿದ್ದು, ‘ಜನರ ಆರೋಗ್ಯ ಕಾಪಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡರೂ ನಮ್ಮ ಅಭ್ಯಂತರ ಇಲ್ಲ. ಆದರೆ, ಈ ಕಠಿಣ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಸರ್ಕಾರದ ದಿಢೀರ್ ತೀರ್ಮಾನಗಳಿಂದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಿ, …

Read More »