Breaking News

ಬೆಂಗಳೂರು

ರಾಜ್ಯ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್ : ‘ಕೋವಿಡ್ ನಿರ್ವಹಣೆ’ಗಾಗಿ ‘1 ತಿಂಗಳ ವೇತನ’ ಕಡಿತ

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳಿಸುವಂತ ನಿರ್ಧಾರವನ್ನು ಕೂಡ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ …

Read More »

ಲಾಕ್‍ಡೌನ್ ಘೋಷಣೆ ಬೆನ್ನಲ್ಲೇ ಬಾರ್ ಮುಂದೆ ಫುಲ್ ಕ್ಯೂ

ಬೆಂಗಳೂರು: ರಾಜ್ಯದಲ್ಲಿ ನಾಳೆ ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಜನತಾ ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರು ಬಾರ್‍ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಗೆ ಮುಂದಾಗಿರುವ ಸನ್ನಿವೇಶ ನಗರದ ಬಹುತೇಕ ಮದ್ಯದಂಗಡಿಗಳ ಮುಂದೆ ಕಂಡು ಬರುತ್ತಿದೆ. ಸರ್ಕಾರ ಮದ್ಯದಂಗಡಿಗಳನ್ನು ಕೂಡ ಮುಚ್ಚಿದರೆ ‘ಎಣ್ಣೆ’ ಮುಂದಿನ ಹದಿನಾಲ್ಕು ದಿನ ಸಿಗಲಾರದು ಎಂಬ ನಿಟ್ಟಿನಲ್ಲಿ ಮದ್ಯಪ್ರಿಯರು ಮದ್ಯ ಖರೀದಿಗಾಗಿ ಮದ್ಯದಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಕೈಚೀಲದಲ್ಲಿ ಎಣ್ಣೆ ತುಂಬಿಕೊಂಡು …

Read More »

ಕೊರೊನಾ ಹೆಸರಿನಲ್ಲಿ 420 ಕೆಲಸ ಮಾಡಿದ ಅಪೋಲೊ ಆಸ್ಪತ್ರೆ ವಿರುದ್ಧ ಎಫ್‌ಐಆರ್ !

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಕೊರೋನಾ ಸೋಂಕಿಗಿಂತಲೂ ಅದರ ಭಯ ಜನರಲ್ಲಿ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡಿರುವ ಕೆಲವು ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಸುಲಿಗೆ ಮಾಡಲು ಆರಂಭಿಸಿವೆ. ಕೋವಿಡ್ 19 ಚಿಕಿತ್ಸೆ ಪಡೆದು ಮನೆಗೆ ತೆರಳಿದ ರೋಗಿಗಳ ಬಗ್ಗೆ ಸುಳ್ಳು ಮಾಹಿತಿ ಉಲ್ಲೇಖಿಸಿ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. …

Read More »

14 ದಿನಗಳ ಕಾಲ ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ: * ನಾಳೆಯಿಂದ 14 ದಿನಗಳ ಕಾಲ …

Read More »

ಲಾಕ್‌ಡೌನ್‌ ಇದ್ದರೂ ‘ಎಣ್ಣೆ ಪಾರ್ಸ್‌ಲ್‌’ ತೆಗೆದುಕೊಳ್ಳಲು ಅವಕಾಶ

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …

Read More »

ರೈಲು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಇಲ್ಲವೇ? ಹಿಂದೆ ಲಾಕ್‌ಡೌನ್‌ ವೇಳೆ ಇದ್ದ ನಿಯಮ ಈಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಾಡುತ್ತಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲವೇ? ಬೆಂಗಳೂರು ನಗರ ರೈಲ್ವೇ ನಿಲ್ದಾಣದ ಸ್ಥಿತಿ ನೋಡಿದರೆ ಹಾಗೆ ಅನ್ನಿಸದೇ ಇರದು. ಮಹಾರಾಷ್ಟ್ರ, ಕೇರಳ, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಿಂದ ರೈಲಿನಲ್ಲಿ ಬರುತ್ತಿರುವವರು ಕೊರೊನಾ ಪರೀಕ್ಷೆ, ಕೊರೊನಾ ನೆಗೆಟಿವ್‌ ಪ್ರಮಾಣಪತ್ರದ ಪರಿಶೀಲನೆ ಇಲ್ಲದೆ ರೈಲ್ವೇ ನಿಲ್ದಾಣದಿಂದ ಹೊರಬರುತ್ತಿದ್ದಾರೆ! ನೆರೆ ರಾಜ್ಯಗಳು, ದಿಲ್ಲಿ, ತ. ನಾಡು ಸೇರಿದಂತೆ 35-40 ರೈಲುಗಳು ಸಂಚರಿಸುತ್ತವೆ. ರಾಜ್ಯದ ನಾನಾ ಭಾಗಗಳಿಗೂ ಹತ್ತಾರು ರೈಲುಗಳು ಚಲಿಸುತ್ತವೆ. ಆದರೆ ಬರುವ …

Read More »

ವೀಕೆಂಡ್ ಕರ್ಫ್ಯೂ ಅಂತ್ಯ – ಬೆಂಗಳೂರು ತೊರೆಯುತ್ತಿರುವ ಜನ

ಬೆಂಗಳೂರು: 57 ಗಂಟೆಗಳ ವೀಕೆಂಡ್ ಕರ್ಫ್ಯೂ ಅಂತ್ಯವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾ ವಲಸೆ ಆರಂಭವಾಗಿದೆ. ನಗರದ ಎಲ್ಲ ಫ್ಲೈ ಓವರ್ ಗಳಿಗೆ ಹಾಕಲಾಗಿದೆ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಲಗೇಜು ಸಮೇತ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿರುವ ಜನರು ತವರಿನತ್ತ ಮುಖ ಮಾಡುತ್ತಿದ್ದಾರೆ. ಸಿಕ್ಕ ಬಸ್ ಗಳನ್ನು ಹತ್ತಿಕೊಂಡು ಮೊದಲು ಊರು ಸೇರಿಕೊಳ್ಳಬೇಕೆಂಬ ಅವಸರದಲ್ಲಿದ್ದಾರೆ. ಸರ್ಕಾರ ಬಿಎಂಟಿಸಿ ಬಸ್ ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನ ಕರೆದುಕೊಂಡು ಹೋಗುವಂತೆ …

Read More »

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಭೆ ಮುಂದಿನ 15 ದಿನ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ. ರಾಜ್ಯದ …

Read More »

ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ

ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …

Read More »

ಸಂಸದರನ್ನು ದಿಲ್ಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ: ಸಿದ್ದರಾಮಯ್ಯ

ಬೆಂಗಳೂರು, ಎ.25: ಔಷಧಿ,‌ ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದಿಲ್ಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ …

Read More »