Breaking News

ಬೆಂಗಳೂರು

ರಂಜಾನ್‌ವರೆಗೆ ತೊಂದರೆ ಕೊಡಬೇಡಿ: ಜಮೀರ್ ಅಹ್ಮದ್ ಮನವಿ

ಬೆಂಗಳೂರು, ಏಪ್ರಿಲ್ 19: “ಸರಕಾರದ ಏನು ಮಾರ್ಗಸೂಚಿಯಿದೆಯೋ ಅದನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ, ದಯವಿಟ್ಟು ರಂಜಾನ್ ಹಬ್ಬದವರೆಗೆ ನಮಗೆ ತೊಂದರೆ ಕೊಡಬೇಡಿ ಎಂದು ಸಭೆಯಲ್ಲಿ ಮನವಿ ಮಾಡಿದ್ದೇನೆ”ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು. “ಜಾಮಿಯಾ ಮೈದಾನದಲ್ಲಿ ಇಪ್ಪತ್ತು ಸಾವಿರ ಜನ ನಮಾಜ್ ಮಾಡಬಹುದು. ಆದರೆ, ಸಾಮಾಜಿಕ ಅಂತರ ಕಾಯ್ದುಕೊಂಡು ಬರೀ ಐದು ಸಾವಿರ ಜನ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನೈಟ್ ಕರ್ಫ್ಯೂನಿಂದಾಗಿ ರಾತ್ರಿ 10.30ಗೆ ಮಾಡಬೇಕಾಗಿರುವ ನಮಾಜ್ …

Read More »

ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ರಾಜ್ಯಾಧ್ಯಂತ 12 ಗಂಟೆಯ ವೇಳೆ ಸಂಚಾರ ಆರಂಭಿಸಿದ ಸಾರಿಗೆ ಬಸ್ ಎಷ್ಟು ಗೊತ್ತಾ.?

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ, ನಿಧಾನ ಗತಿಯಲ್ಲಿ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆ ರಾಜ್ಯಾಧ್ಯಂತ 5,629 ಸಾರಿಗೆ ಬಸ್ ಸಂಚಾರ ಆರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾಧ್ಯಂತ KSRTC 2340 ಬಸ್, BMTC 1159 ಬಸ್, …

Read More »

ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಆಧಾರದಲ್ಲಿ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು,1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಶಿಕ್ಷಣ ಇಲಾಖೆ …

Read More »

ಬೆಂಗಳೂರಿಗೆ ಉಸ್ತುವಾರಿ ಸಚಿವರೇ ಇಲ್ಲದಂತಾಗಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬೆಂಗಳೂರಿಗೆ ಸೇರಿದ ಹಲವು ಸಚಿವರು ಇದ್ದರೂ ಬೆಂಗಳೂರು ಉಸ್ತುವಾರಿ ಯಾರು ಎನ್ನುವುದೇ ಈಗಿರುವ ಪ್ರಶ್ನೆ. ಮಹತ್ವವಾದ ಬೆಂಗಳೂರು ಉಸ್ತುವಾರಿ ಖಾತೆಯನ್ನು ಮುಖ್ಯಮಂತ್ರಿ ಹೊಂದಿದ್ದು, ಅವರಿಗೆ ಬೇರೆ ಹೊಣೆಯೇ ಹೆಚ್ಚಿರಬೇಕಾದರೆ ಮತ್ತು ಅವರಿಗೆ ಎರಡು ಬಾರಿ ಕೊವಿಡ್ ಬಂದು ಆಸ್ಪತ್ರೆ ಸೇರಿರಬೇಕಾದರೆ ಈ ಮಹಾಸಮರದ ವಿರುದ್ಧದ ನೇತೃತ್ವ ವಹಿಸಬೇಕಾದ ನಾಯಕರೇ ಇಲ್ಲವಾಗಿದ್ದಾರೆ ಎಂಬ ಅಂಶವನ್ನು ತಮ್ಮ ಸಲಹಾ ಪಟ್ಟಿಯಲ್ಲಿ ಸೇರಿಸುವ ಮೂಲಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಟಾಂಗ್ …

Read More »

ಕೊರೊನಾ ಸೋಂಕು ಮತ್ತು ಬಸ್ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು, ಏಪ್ರಿಲ್ 19: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ.19, 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ …

Read More »

2ನೇ ಅಲೆಯ ಸೋಂಕಿತರಲ್ಲಿ ಯುವಜನರೇ ಹೆಚ್ಚು! 63 ಯುವಕರು ಸಾವು ; ನಿರ್ಲಕ್ಷ್ಯವೇ ಕಾರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಸೋಂಕಿತರಲ್ಲಿ ಹೆಚ್ಚು ಕಡಿಮೆ ಅರ್ಧಕ್ಕರ್ಧದಷ್ಟು ಯುವಜನರೇ ಇದ್ದು, ಈ ಪೈಕಿ 63 ಮಂದಿ ಸಾವಿಗೀಡಾಗಿದ್ದಾರೆ. ಕೊರೊನಾ ವಯಸ್ಸಾದವರಲ್ಲಿ ಹೆಚ್ಚಾಗಿರುತ್ತದೆ ಹಾಗೂ ಬೇರೆ ಕಾಯಿಲೆಗಳು ಇದ್ದವರು ಮತ್ತು ವಯಸ್ಸಾದವರು ಮಾತ್ರ ಸಾವಿಗೀಡಾಗುತ್ತಾರೆ ಎಂಬ ಭಾವನೆ ಜನರಲ್ಲಿದೆ. ಅದಕ್ಕೆ ವಿರುದ್ಧವಾದ ವಿದ್ಯಮಾನ ಈಗ ಕಂಡು ಬರುತ್ತದೆ. ಎರಡನೇ ಅಲೆಗೆ ಹೆಚ್ಚು 20ರಿಂದ 40 ವರ್ಷದ ಯುವಜನರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅಲ್ಲದೆ, ಯಾವುದೇ ಆನಾರೋಗ್ಯ ಇಲ್ಲದಿದ್ದವರೂ ತೀವ್ರ …

Read More »

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

ಬೆಂಗಳೂರು : ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನಿಧನರಾಗಿದ್ದಾರೆ. ಇವರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸಾಧನೆಯನ್ನು ಹೊಗಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ …

Read More »

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ. ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ. ‘ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್‌ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, …

Read More »

ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ!

ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. 1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. …

Read More »