Breaking News

ಬೆಂಗಳೂರು

ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ನೂತನ ಸೂತ್ರ ಸಿದ್ಧ: ಶೆಟ್ಟರ್‌

ಬೆಂಗಳೂರು : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಈಗಾಗಲೇ ನೂತನ ಸೂತ್ರವನ್ನು ರಚಿಸಿದ್ದು, ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಬೆಂಗಳೂರು ಚೇಂಬರ್‌ ಆಫ್‌ ಇಂಡಸ್ಟ್ರಿ ಅಂಡ್‌ ಕಾಮರ್ಸ್‌ ವತಿಯಿಂದ ಆಯೋಜಿಸಿದ್ದ ವೆಬಿನಾರ್‌ ನಲ್ಲಿ …

Read More »

ಕರ್ನಾಟಕಕ್ಕೆ ಆಕ್ಸಿಜನ್ ನೆರವು ನೀಡಿದ ಇಸ್ರೇಲ್

ಬೆಂಗಳೂರು: ಕೊರೊನಾದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಇಸ್ರೇಲ್ ದೇಶದಿಂದ ಇಂದು ರಾಜ್ಯಕ್ಕೆ 2 ಆಕ್ಸಿಜನ್ ಜನರೇಟರ್‌ಗಳನ್ನು ನೀಡುವ ಮೂಲಕವ ನೆರವು ನೀಡಿದೆ. ಇಂಡಿಯಾಕ್ಕೆ ಸಾಕಷ್ಟು ಬೆಂಬಲವನ್ನು ನೀಡಬಲ್ಲವು ಎಂದು ಹೆಮ್ಮೆಪಡುತ್ತವೆ. ಆಕ್ಸಿಜನ್ ಜನರೇಟರ್‌ಗಳನ್ನು ನಾವು ಕರ್ನಾಟಕಕ್ಕೆ ನೀಡುತ್ತೇವೆ. 100 ಕ್ಕಿಂತ ಹೆಚ್ಚು ರೋಗಿಗಳಿಗೆ ಸಾಕಾಗುಷ್ಟು ಆಕ್ಸಿಜನ್ ಉತ್ಪಾದಿಸುತ್ತೇವೆ ಎಂದು ಇಸ್ರೇಲ್ ರಾಯಭಾರಿ ಮಾಹಿತಿ ನೀಡಿದ್ದಾರೆ. ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಆಕ್ಸಿಜನ್ ಸಿಲಿಂಡರ್‌ಗಳನ್ನು ರಾಜ್ಯಕ್ಕೆ ಕಳುಹಸುತ್ತಿರುವುದಕ್ಕೆ ಧನ್ಯವಾದಗಳು. ಈ ಆಕ್ಸಿಜನ್ ಸಿಲಿಂಡರ್‌ಗಳಿಂದಾಗಿ ರಾಜ್ಯದಲ್ಲಿ …

Read More »

ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಹೈಕೋರ್ಟ್ ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಸರ್ಕಾರಕ್ಕೆ ಸೂಚನೆ ನೀಡಿದೆ. ಕೋವಿಡ್ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ …

Read More »

ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ:B.S.Y..

ಬೆಂಗಳೂರು: ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ. ವ್ಯಾಕ್ಸಿನ್ ಬರ್ತಾ ಇದ್ದಂತೆ ಎಲ್ಲರಿಗೂ ಕೊಡ್ತೇವೆ, ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಬಗ್ಗೆ ಸಮಸ್ಯೆ ಇಲ್ಲ. ಗೊಂದಲ ಬೇಡ, ಆತಂಕ ಬೇಡ ಎಂದು ಮನವಿ ಮಾಡಿಕೊಂಡರು. ವಾರ್ ರೂಂಗಳಿಗೆ ಭೇಟಿ ಕೊಡ್ತೀನಿ. ಕೊರೊನಾ ಸ್ವಲ್ಪ ಕಂಟ್ರೋಲ್ ಗೆ ಬರ್ತಿದೆ, ಜನ ಸಹಕಾರ ಕೊಟ್ಟರೆ ಅನುಕೂಲ. ದೇಶದಲ್ಲಿ ಕೊರೊನಾ ಹೆಚ್ಚಳ …

Read More »

ದುಡ್ಡು ಪ್ರಿಂಟ್ ಮಾಡ್ತೀವಾ ಎಂದ ಈಶ್ವರಪ್ಪಗೆ ಡಿಕೆಶಿ ಡಿಚ್ಚಿ

ಬೆಂಗಳೂರು : ದುಡಿಯುವ ವರ್ಗಕ್ಕೆ ಪರಿಹಾರ ನೀಡೋಕೆ ನಾವು ದುಡ್ಡು ಪ್ರಿಂಟ್ ಮಾಡ್ತಿಲ್ಲ ಎಂದ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಸಚಿವರು ನೋಟ್ ಎಣಿಸುವ ಯಂತ್ರವನ್ನು ಇರಿಸಿಕೊಂಡಿದ್ದಾರಲ್ಲಾ ಎಂದು ಟಾಂಗ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೂರನೇ ಅಲೆ ಎದುರಿಸಲು ಸಿದ್ಧರಾಗಿ ಎಂದು ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಿ, ನಮ್ಮದೇನು ತಕರಾರು ಇಲ್ಲ. …

Read More »

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ : ಸಿದ್ದರಾಮಯ್ಯ

ಬೆಂಗಳೂರು : ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ …

Read More »

ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ : ಸುಧಾಕರ್ ವಿರುದ್ದ ಗುಂಡುರಾವ್ ಕಿಡಿ

ಬೆಂಗಳೂರು: ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ ತಕ್ಷಣ ವಜಾಗೊಳಿಸಿ ಎಂದು ಸುಧಾಕರ್ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರ ಸ್ವ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಗೆ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಸಿಕೆ ಪಡೆದಿರೋದಾಗಿ ತಿಳಿದು ಬಂದಿವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು , ” ಸಚಿವ ಸುಧಾಕರ್ ಅವರೇ ಲಸಿಕೆ ವಿತರಣೆಯಲ್ಲೂ …

Read More »

ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ :ಕಟೀಲ್‌”

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್‌ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್‌ ಕುಮಾರ್‌ ಕಟೀಲ್‌” ಮುಕ್ತವಾಗಿ ಮಾತನಾಡಿದ್ದಾರೆ. ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ? ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ …

Read More »

ಬೆಂಗಳೂರಿಗೆ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಆಗಮನ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಕ್ಸಿಜನ್ ಅಭಾವ ಹೆಚ್ಚಾಗಿದ್ದು ಅನೇಕ ದೇಶಗಳು ಸಹಾಯಕ್ಕಾಗಿ ಮುಂದೆ ಬಂದಿವೆ. ಸದ್ಯ ಇಂದು ಇದೇ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಬಂದಿದೆ. ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್‌ಗಳು ತಲುಪಿವೆ. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್‌ಗಳು ಈಗ ವೈಟ್‌ಫೀಲ್ಡ್‌ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿವೆ. ಜಮ್ಶೆಡ್ಪುರದಿಂದ ನಿನ್ನೆ ಮುಂಜಾನೆ 3ಕ್ಕೆ ಹೊರಟಿದ್ದ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು 30 …

Read More »

ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು – ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಪ್ರಸಿದ್ಧ ಖಾಸಗಿ ಆಸ್ಪತ್ರೆಯೊಂದರ ಸ್ಟಾಪ್ ನರ್ಸ್ ಹಾಗೂ ಓರ್ವ ಅಂಬುಲೆನ್ಸ್ ಚಾಲಕ. ಇವರು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ವಾಯೆಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಅಧಿಕಾರಿ ಸಂದೀಪ್ ಪಾಟೀಲ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಸುಮಾರು 15 ದಿನಗಳಿಂದ ರೆಮ್ ಡಿಸಿವರ್ ಕಾಳಸಂತೆಕೋರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ.  …

Read More »