Breaking News

ಬೆಂಗಳೂರು

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ. ‘ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್‌ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, …

Read More »

ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ!

ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. 1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. …

Read More »

‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್

ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟಿರುವ “ಮಠ” ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇಂದು ಫೇಸ್‌ಬುಕ್ ಲೈವ್ ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ‘ಒಂದು ವೇಳೆ ನಾನು ಕೋವಿಡ್‍ದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಪ್ರಾಮಾಣಿಕ, ಹಾಗಂತ ಬಿಜೆಪಿಯವರೆಲ್ಲ ಪ್ರಾಮಾಣಿಕರಲ್ಲ. ಒಂದು ವರ್ಷ ಟೈಮ್ …

Read More »

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಚಿವ ಅಶೋಕ್‌, ಸುಧಾಕರ್‌ ನಡುವೆ ಶೀತಲ ಸಮರ

ಬೆಂಗಳೂರು: ಕೊರೊನಾ ನಿಯಂತ್ರಣದ ವಿಷಯದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್‌ ಹಾಗೂ ಕಂದಾಯ ಸಚಿವ ಆರ್‌. ಅಶೋಕ್‌ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ನಿರ್ವಹಣೆ ವಿಚಾರದಲ್ಲಿ ಶನಿವಾರ ಸಚಿವ ಆರ್‌. ಅಶೋಕ್‌, ಬಸವರಾಜ ಬೊಮ್ಮಾಯಿ ಜೊತೆ ಸೇರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದಕ್ಕೆ ಸಚಿವ ಡಾ. ಸುಧಾಕರ್‌ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ ಭಾನುವಾರ …

Read More »

ಸಾರಿಗೆ ನೌಕರರ ಮುಷ್ಕರ : ನಿಗಮ-ನೌಕರರ ರಾತ್ರಿ ಕಾರ್ಯಾಚರಣೆ!

ಬೆಂಗಳೂರು : ಹನ್ನೊಂದು ದಿನಗಳಿಂದ ಸಾರಿಗೆ ನೌಕರರು ಕರ್ತವ್ಯದತ್ತ ಮುಖ ಮಾಡುತ್ತಿಲ್ಲ. ಆದರೆ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಕೆಲವು ನೌಕರರು ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ! ಒಂದೆಡೆ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ವಿವಿಧ ಡಿಪೋಗಳಲ್ಲಿ ಅಧಿಕಾರಿಗಳು ಬೆಳಗಿನ ಜಾವ 4ರ ವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತೂಂದೆಡೆ ನೌಕರರು ರಾತ್ರಿಯಾಗುತ್ತಿದ್ದಂತೆಯೇ ಸಹೋದ್ಯೋಗಿಗಳ ಮನವೊಲಿಕೆಗೆ ಇಳಿಯುತ್ತಿದ್ದಾರೆ. ಅಧಿಕಾರಿಗಳು ನಿತ್ಯ ಸಂಜೆ ಹೊರಡಿಸುವ ಅಮಾನತು, ವಜಾ, ವರ್ಗಾವಣೆ ಪಟ್ಟಿಗಾಗಿ ರಾತ್ರಿಯಿಡೀ ಕೆಲಸ ಮಾಡುತ್ತಿದ್ದಾರೆ. …

Read More »

ಪಬ್ ಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಸಿಲಿಕಾನ್ ಸಿಟಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ವೇಗದಲ್ಲಿ ಕೊರೊನಾ ಹರಡುತ್ತಿದ್ದು, ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಪಬ್, ಬಾರ್‍ಗಳಲ್ಲಿ ಇದ್ಯಾವುದೂ ಪಾಲನೆಯಾಗುತ್ತಿಲ್ಲ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ನಗರದ ಪಬ್, ಬಾರ್ ಗಳಲ್ಲಿ ಕಿಮ್ಮತ್ತು ಇಲ್ಲದಂತಾಗಿದ್ದು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿ …

Read More »

ಕೊರೋನ ಸಂಕಷ್ಟ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಎ. 18: ಒಂದೂವರೆ ವರ್ಷದಿಂದಲೂ ಎದುರಾಗಿರುವ ಕೊರೋನ ಸಂಕಷ್ಟವನ್ನು ನಿಭಾಯಿಸಲಾಗದಿದ್ದ ಮೇಲೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ. ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಮುಗಿಯುವವರೆಗೂ ರಾಜ್ಯದ ಎಲ್ಲ ಜನರಿಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಕೋವಿಡ್ ಆರಂಭದಿಂದ ಈವರೆಗೂ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ. ಗಂಟೆ ಹೊಡಿಯಿರಿ, …

Read More »

‘ದೇಶದಲ್ಲೇ ಅತಿಹೆಚ್ಚು ಆಸ್ಪತ್ರೆ ನಮ್ಮಲ್ಲಿವೆ, ಆದರೂ ಸರ್ಕಾರ ಕೈಚೆಲ್ಲಿ ಕೂತಿದೆ’

ಬೆಂಗಳೂರು: ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಆಸ್ಪತ್ರೆಗಳಿವೆ. ದೇಶದಲ್ಲೇ ತಜ್ಞವೈದ್ಯರು ನಮ್ಮಲ್ಲಿದ್ದಾರೆ ಹಾಗಿದ್ದರೂ ಇದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದ ಸರ್ಕಾರ ಕೈಚೆಲ್ಲಿ ಕೂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಡಿಕೆಎಸ್​ ಸರ್ಕಾರಕ್ಕೆ ಯಾವುದೇ ಸರಿಯಾದ ಯೋಜನೆ ಇಲ್ಲ. ಹೋಟೆಲ್​ಗಳನ್ನ ವಶಕ್ಕೆ ಪಡೆದು 10 ಸಾವಿರ ಬೆಡ್​ಗಳನ್ನ ಮಾಡಿದ್ರು. ಆದರೂ ರಾಜ್ಯಲ್ಲಿ ಬೆಡ್​ ಇಲ್ಲ. ರೆಮ್ಡೆಸಿವಿರ್ ಇಂಜೆಕ್ಷನ್​ ಸಿಗ್ತಿಲ್ಲ. ಆಸ್ಪತ್ರೆಗಳಲ್ಲಿ‌ ಹಾಸಿಗೆಗಳು ಸಿಗ್ತಿಲ್ಲ ಅಧಿಕಾರಿಗಳು ಏನು …

Read More »

ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ …

Read More »

ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ. ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. …

Read More »