Breaking News

ಬೆಂಗಳೂರು

ಬಸವಕಲ್ಯಾಣ ಉಪಚುನಾವಣೆ: ಹಣ ಹಂಚಲು ಬಂದವರಿಗೆ ಗ್ರಾಮಸ್ಥರಿಂದ ಚಪ್ಪಲಿ ಏಟು

ಬಸವಕಲ್ಯಾಣ : ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ಮತದಾರರಿಗೆ ಹಣ ಹಂಚಲು ಬಂದಾಗ ಗ್ರಾಮಸ್ಥರು ಚಪ್ಪಲಿಯಿಂದ ಹೊಡೆದಿದ್ದಾರೆ.’ರಾಜಕೀಯ ಪಕ್ಷಗಳೇ ಮತದಾರರನ್ನು ಭ್ರಷ್ಟರನ್ನಾಗಿ ಮಾಡುತ್ತಿವೆ. ನಮ್ಮಲ್ಲಿ ಹಣ ಇಲ್ಲವೆ? ನಿಮ್ಮ ಹಣ ನಮಗೆ ಏಕೆ ಕೊಡುತ್ತಿದ್ದೀರಿ’ ಎನ್ನುತ್ತ ವ್ಯಕ್ತಿಯ ಕೈಯಲ್ಲಿದ್ದ ನೋಟುಗಳನ್ನು ಕಿತ್ತುಕೊಂಡ ಗ್ರಾಮಸ್ಥರು ಅವುಗಳನ್ನು ಗಾಳಿಯಲ್ಲಿ ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ವೀಕ್ಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ ನಂತರ ಫ್ಲೈಯಿಂಗ್‌ ಸ್ಕ್ವಾಡ್‌, ಪೊಲೀಸರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು …

Read More »

ಬೆಂಗಳೂರಿಗರೇ 15 ದಿನಗಳ ಅಜ್ಞಾತವಾಸಕ್ಕೆ ಸಿದ್ಧರಾಗಿ..?!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಹೀಗೆ ಮುಂದುವರಿದ್ರೆ ಬೆಂಗಳೂರು ಕೊರೊನಾ ಕೂಪವಾಗುವುದರಲ್ಲಿ ಸಂಶಯವೇ ಇಲ್ಲ. ಈ ಮಧ್ಯೆ ತಜ್ಞರು ಕೂಡ ಕೊರೊನಾಗೆ ಬ್ರೇಕ್ ಹಾಕಲು ಬೆಂಗಳೂರಲ್ಲಿ ಕನಿಷ್ಠ 10 ದಿನ ಲಾಕ್ ಡೌನ್ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಡ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, 20 ರ ನಂತರ ಮತ್ತೊಮ್ಮೆ ಸಭೆ …

Read More »

ಪಟ್ಟಭದ್ರ ಹಿತಾಸಕ್ತಿಗಳಿಂದ ನೌಕರರ ಮಾತುಕತೆ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ; ಮುಷ್ಕರ ಅಂತ್ಯಗೊಳಿಸುವಂತೆ ಸವದಿ ಮನವಿ

ಬೆಂಗಳೂರು : ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕನ ಮೇಲೆ ಹಲ್ಲೆಯಿಂದಾಗಿ ಸಾವನ್ನಪ್ಪಿದ್ದಾರೆ. ಇದರಿಂದ ಮುಷ್ಕರ ನಿರತರು ತಾವೂ ಕೆಲಸ ಮಾಡುವುದಿಲ್ಲ, ಇತರ ನಿಷ್ಠಾವಂತರಿಗೂ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಘಟನೆಯನ್ನು ಖಂಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಷ್ಠಾವಂತ ಚಾಲಕರಾದ ಅವಟಿ ಎಂಬವರು ಜಮಖಂಡಿಯ ಸಮೀಪದಲ್ಲಿ ಕರ್ತವ್ಯಕ್ಕೆ ಹಾಜರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ …

Read More »

ಆನ್‍ಲೈನ್ ಮೂಲಕ ಮಾವು ಮಾರಾಟ

ಬೆಂಗಳೂರು, – ಮಾವು ಬೆಳೆಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಗ್ರಾಹಕರಿಗೆ ಬೆಳೆಗಾರರಿಂದ ನೇರವಾಗಿ ತಾಜ ಮತ್ತು ಸ್ವಾದಿಷ್ಟ ಮಾವಿನ ಹಣ್ಣುಗಳನ್ನು ಆನ್‍ಲೈನ್‍ನಲ್ಲಿ ಖರೀದಿಸುವ ವ್ಯವಸ್ಥೆ ಕಲ್ಪಿಸಿದೆ ಎಂದು ಮಾವು ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ರ 2ನೆ ಅಲೆ ಹೆಚ್ಚುತ್ತಿರುವುದರಿಂದ ಹಿಂದಿನಂತೆ ಕಾರ್ಸಿರಿ ಮ್ಯಾಂಗೋಸ್ ಎಂಬ ಆನ್‍ಲೈನ್ ಪೋರ್ಟಲ್ (https://karsirimangoes.karnataka.gov.in) …

Read More »

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರಂತೆ ರಾಜ್ಯದಲ್ಲಿ ನಡೆಸುವ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಮಿತಿಯನ್ನು ಹೇರಲಾಗಿದೆ. ಈ ಹೊಸ ಮಾರ್ಗಸೂಚಿಯು ಏಪ್ರಿಲ್ 30 ರ ವರೆಗೆ ಜಾರಿಯಲ್ಲಿರಲಿದೆ. ಮಾರ್ಗಸೂಚಿಗಳು : – ತೆರೆದ ಪ್ರದೇಶದಲ್ಲಿ ನಡೆಸುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಹಾಗೂ ಕಲ್ಯಾಣ …

Read More »

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಬೆಂಗಳೂರು : ಏಪ್ರಿಲ್ 18 ರಂದು ಸಿಎಂ ಯಡಿಯೂರಪ್ಪ ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ಏಪ್ರಿಲ್ 18 ಸಂಜೆ 4 ಗಂಟೆಗೆ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕೋವಿಡ್ ನಿಯಂತ್ರಣ ಸಂಬಂಧ ಎಲ್ಲಾ ಪಕ್ಷದ ಮುಖಂಡರ ಜೊತೆ ಸಲಹೆ ಪಡೆಯುವ ಉದ್ದೇಶದಿಂದ ಸಿಎಂ ಸಭೆ ಕರೆದಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ …

Read More »

ನೌಕರರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗ್ತಿದ್ದಾರೆ, ಮೊಂಡುತನ ಒಳ್ಳೆಯದಲ್ಲ- ಕೋಡಿಹಳ್ಳಿ

ಬೆಂಗಳೂರು: 6ನೇ ವೇತನ ಆರೋಗ ಶಿಫಾರಸುಗಳನ್ನು ಜಾರಿ ಮಾಡುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ 11ನೇ ದಿನದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್​​, ಈಗ ಇಲಾಖೆ ಅವರು ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿಲ್ಲ ಅಂತ ಹೇಳಿದರೆ ನಮ್ಮ ದೂರನ್ನ ಪರಿಗಣಿಸಿ ಸಂಬಳ ಕೊಡಿಸುವ ಕೆಲಸ ಮಾಡಬೇಕಿತ್ತು. ಆದರೆ ಕಾರ್ಮಿಕರ …

Read More »

ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ …

Read More »

ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೈಕ್ರೋ ಕಂಟೋನ್ಮೆಂಟ್ ಹೆಚ್ಚಳ ಮಾಡುತ್ತೇವೆ ಎಂದರು.   ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ …

Read More »

ಪೊಲೀಸರೇ ಈ ರೀತಿ ಮಾಡಿದರೆ ಕನ್ನಡ ಪರ ಸಂಘಟನೆಗಳು ಕನ್ನಡ ಉಳಿಸೋದು ಹೇಗೆ?’ ಕಪಾಳಮೋಕ್ಷ ಮಾಡಿದ ಪೊಲೀಸ್​ಗೆ ಕರವೇ ಪ್ರಶ್ನೆ

ಬೆಂಗಳೂರು: ಚೀಟಿಂಗ್‌ ಪ್ರಕರಣವೊಂದರ ಆರೋಪಿಗಳಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಪೊಲೀಸರ ವಶದಲ್ಲಿದ್ದ ವ್ಯಕ್ತಿಗಳನ್ನು ಮಾತನಾಡಿಸಿದ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಉಪಾಧ್ಯಕ್ಷ ಉಮೇಶ್​ಗೌಡಗೆ ನೆಲಮಂಗಲ ಟೌನ್ ಠಾಣೆಯ ಎಸ್​ಐ ಸುರೇಶ್‌ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷಮಾಡಿರುವುದನ್ನು ಖಂಡಿಸಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಎದುರು ಕರವೇ ಕಾರ್ಯಕರ್ತರು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್​ಐ ಸುರೇಶ್​ರನ್ನು ಅಮಾನತು​ ಮಾಡುವಂತೆ …

Read More »