ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ತಹಶಿಲ್ದಾರ್ ಕಚೇರಿ ಮುಂದೆ ಚಳವಳಿ ನಡೆಸುತ್ತೇವೆ, ಚಳವಳಿ ಯಶಸ್ವಿಯಾಗಲಿದೆ ಎಂಬ ನಂಬಿಕೆಯಿದೆ. ನಾಳೆ ಅಪರಾಹ್ನ 3 …
Read More »ಇಂದಿರಾನಗರದ ಗೂಂಡಾ ನಾನೇ’ ಎಂದು ದ್ರಾವಿಡ್ಗೆ ಸೆಡ್ಡು ಹೊಡೆದ ಖ್ಯಾತ ನಟಿ
ಸಿಲಿಕಾನ್ ಸಿಟಿ ಟ್ರಾಫಿಕ್ನಲ್ಲಿ ಸಿಲುಕಿಕೊಂಡ ಕ್ರಿಕೆಟಿಗ ರಾಹುಲ್ ದ್ರಾವಿಡ್ ”ನಾನು ಇಂದಿರಾನಗರದ ಗೂಂಡಾ” ಎಂದು ಕಿರುಚಾಡಿ ಅಕ್ಕಪಕ್ಕದ ಕಾರುಗಳ ಗಾಜು ಪುಡಿ ಪುಡಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದ್ಹಾಗೆ, ಇದು ಜಾಹೀರಾತು. ಕ್ರಿಕೆಟ್ ಜಗತ್ತಿನ ಜಂಟಲ್ಮ್ಯಾನ್ ಎಂದೇ ಗುರುತಿಸಿಕೊಂಡಿರುವ ರಾಹುಲ್ ದ್ರಾವಿಡ್ ಅವರನ್ನು ಹಿಂದೆಂದೂ ಈ ರೀತಿ ನೋಡಿರಲು ಸಾಧ್ಯವಿಲ್ಲ. ಆದರೆ, ಜಾಹೀರಾತಿಗಾಗಿ ತಮ್ಮ ಉಗ್ರರೂಪ ತೋರಿಸಿದ್ದಾರೆ. ಇದೀಗ, ‘ನಾನು ಇಂದಿರಾನಗರದ ಗೂಂಡಾ’ ಎಂಬ ಡೈಲಾಗ್ …
Read More »ಬೆಂಗಳೂರಲ್ಲಿ ನಕಲಿ ಕೋವಿಡ್ ಟೆಸ್ಟ್; ಇಬ್ಬರ ವಿರುದ್ಧ ಎಫ್ಐಆರ್
ಬೆಂಗಳೂರು, ಏಪ್ರಿಲ್ 11; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಶನಿವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರ ನಡುವೆಯೇ ಆರೋಗ್ಯ ಇಲಾಖೆ ಸಿಬ್ಭಂದಿಗಳ ನಿರ್ಲಕ್ಷ್ಯವೂ ಬೆಳಕಿಗೆ ಬಂದಿದೆ. ಕೋಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ನಾಗರಾಜ್ ಮತ್ತು ಹಿರೇಮಠ ಸರ್ಕಾರಕ್ಕೆ ಲೆಕ್ಕ ತೋರಿಸಲು ನಕಲಿ ಕೋವಿಡ್ ಟೆಸ್ಟ್ ಮಾಡುತ್ತಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಾಗರಾಜ್ ಮತ್ತು ಹಿರೇಮಠ ವಿರುದ್ಧ ಎಫ್ಐಆರ್ ದಾಖಲಾಗಿದ್ದು, …
Read More »ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಏಪ್ರಿಲ್ 10: ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಆಸ್ಪತ್ರೆಯಿಂದ ಇಂದು 3350 ಮಂದಿ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 980519 ಮಂದಿ ಡಿಸ್ಚಾರ್ಜ್ ಆಗಿರುವುದುಆಗಿ ತಿಳಿಸಿದ್ದಾರೆ. ಒಂದೇ ದಿನ 36 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 12,849 ಮಂದಿ ಮೃತಪಟ್ಟಿದ್ದಾರೆ. 61653 ಸಕ್ರಿಯ ಪ್ರಕರಣಗಳಿವೆ, ಒಟ್ಟು 1055040 ಪ್ರಕರಣಗಳಿವೆ. 405 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಾಗಲಕೋಟೆ 44, ಬಳ್ಳಾರಿ 62, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ …
Read More »ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ …
Read More »ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು
ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು …
Read More »ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?
ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ …
Read More »ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್
ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಟೀಸರ್ ಅನ್ನು ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ …
Read More »ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು, ಏಪ್ರಿಲ್ 10: ಯಲಚೇನಹಳ್ಳಿ ನಮ್ಮ ಮೆಟ್ರೋ ನಿಲ್ದಾಣದ ಕೇಬಲ್ ನಾಳ(ಡಕ್ಟ್)ದಲ್ಲಿ 65 ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾರುತಿನಗರ ರಿಯಲ್ ಎಸ್ಟೇಟ್ ಬ್ರೋಕರ್ ಆಗಿರುವ ನಾಗರಾಜ್ ಅವರು ಏಪ್ರಿಲ್ 4 ರಂದು ಕೇಬಲ್ ನಾಳದೊಳಗೆ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದರೂ ಈ ಘಟನೆ ಏಪ್ರಿಲ್ 9 ರಂದು ಬೆಳಕಿಗೆ ಬಂದಿದೆ. ಹೌಸ್ಕೀಪಿಂಗ್ ಸಿಬ್ಬಂದಿ ಶುಚಿಗೊಳಿಸುತ್ತಿರುವಾಗ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ್ದಾರೆ ಬಳಿಕ ಬಂದು ಬಾಗಿಲು ತೆರೆದಾಗ …
Read More »118 ಬಿಎಂಟಿಸಿ ನೌಕರರು ವಜಾ – ಸೀನಿಯರ್ ನೌಕರರಿಗೆ ನಿವೃತ್ತಿ ಎಚ್ಚರಿಕೆ: ಮುಷ್ಕರ ನಿರತರಿಗೆ ಬಿಎಂಟಿಸಿ ಬಿಗ್ ಶಾಕ್
ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ. ಮುಷ್ಕರದಲ್ಲಿ ಭಾಗವಹಿಸಿರುವ 118 ಸಾರಿಗೆ ಸಿಬ್ಬಂದಿಗಳನ್ನು ಬಿಎಂಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಸೀನಿಯರ್ ನೌಕರರಿಗೆ ನಿವೃತ್ತಿ ನಿಡುವ ಎಚ್ಚರಿಕೆಯನ್ನು ನೀಡಿದೆ. 55 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿ ವೈದ್ಯಕೀಯ ಹಾಗೂ ದೇಹದಾರ್ಡ್ಯತೆ ಪ್ರಮಾಣ ಪತ್ರವನ್ನು ಏಪ್ರಿಲ್ …
Read More »
Laxmi News 24×7