Breaking News

ಬೆಂಗಳೂರು

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ …

Read More »

ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್‌ ನಿಲುವೇನು?: ಬಿಜೆಪಿ

ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ. ‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ …

Read More »

ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ

ಬೆಂಗಳೂರು: ಶನಿವಾರದಿಂದ (ಏ. 10) ಇದೇ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಗೆ ಬರಲಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ- ಮಣಿಪಾಲ, ಬೀದರ್‌, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ. …

Read More »

ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್

ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ. ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ. ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ …

Read More »

ಸಚಿವಾಲಯದ ಅಧಿಕಾರಿ, ನೌಕರ’ರಿಗೆ ಬಹುಮುಖ್ಯ ಮಾಹಿತಿ : ಏ.12ರಂದು ’45 ವರ್ಷ’ ಮೇಲ್ಪಟ್ಟವರಿಗೆ ‘ಬ್ಯಾಂಕ್ವೆಟ್ ಹಾಲ್’ನಲ್ಲಿ’ಕೊರೋನಾ ಲಸಿಕೆ’

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) …

Read More »

ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …

Read More »

ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?

ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …

Read More »

ಅನ್ಯಾಯದ ಬ್ರಹ್ಮಾಸ್ತ್ರ ಬೇಡ: ಮಾತುಕತೆಗೆ ಮುಂದಾಗಿ -ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …

Read More »