Breaking News

ಬೆಂಗಳೂರು

ಭ್ರಷ್ಟಾಚಾರ ಆರೋಪ: ಸರ್ಕಾರ ವಜಾಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ನೇರ ಆರೋಪ ಮಾಡಿರುವುದರಿಂದ ರಾಜ್ಯಪಾಲರು ತಕ್ಷಣ ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಯನ್ನು ವಜಾಗೊಳಿಸಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಶಿಫಾರಸು ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯದ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಬಿಜೆಪಿ ಸರ್ಕಾರದಲ್ಲಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಕ್ರಮಗಳ ಕುರಿತು ವಿರೋಧ …

Read More »

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ …

Read More »

ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಜಗದೀಶ್ ಕುಮಾರ್​ ಹೆಸರನ್ನೇ ನೋಂದಾಯಿಸಿಲ್ಲ: ಬಾರ್​ ಕೌನ್ಸಿಲ್​ ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಡಿ ಸಂತ್ರಸ್ತೆಯ ಪರ ವಕಾಲತ್ತು ವಹಿಸಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ವಕೀಲಿ ವೃತ್ತಿ ನಡೆಸಲು ಕೆ.ಎನ್.ಜಗದೀಶ್ ಕುಮಾರ್ ಹೆಸರನ್ನು ನೋಂದಾಯಿಸಿಯೇ ಇಲ್ಲ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಈ ಕುರಿತು ವಕೀಲ ಎಸ್.ಬಸವರಾಜ್ ಎಂಬುವವರು ಕೇಳಿದ್ದ ಪ್ರಶ್ನೆಗೆ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸ್ಪಷ್ಟನೆ ನೀಡಿದ್ದು, ಕೆ.ಎನ್.ಜಗದೀಶ್ ಕುಮಾರ್ ಕರ್ನಾಟಕದಲ್ಲಿ ವಕೀಲಿ ವೃತ್ತಿಗೆ …

Read More »

ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಜೆಡಿಎಸ್ ತೊರೆಯಲು 5 ಕೋಟಿ ರೂಪಾಯಿ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶ್ರೀನಿವಾಸ್ ಗೌಡ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಯೋಗೇಶ್ವರ್, ಎಸ್.ಆರ್. ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಜೆಡಿಎಸ್ ಪಕ್ಷ ತ್ಯಜಿಸಲೆಂದು ಬಿಜೆಪಿ ನಾಯಕರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು. ಅಲ್ಲದೇ ಈ ಬಗ್ಗೆ ವಿಧಾನಸಭೆಯಲ್ಲಿಯೂ ಕೆ. ಶ್ರೀನಿವಾಸ್ …

Read More »

ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್‌ಐಟಿ ಮಹಜರು

ಬೆಂಗಳೂರು, ಏಪ್ರಿಲ್ 01: ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ತಂಗಿದ್ದ ಆರ್‌.ಟಿ. ಪಿಜಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ಮಹಜರು ನಡೆಸಿದ್ದಾರೆ. ಸಿಡಿ ಸಂತ್ರಸ್ತ ಲೇಡಿ ತಂಗಿದ್ದ ಪಿಜಿ ಮೇಲೆ ಈ ಹಿಂದೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. 9 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಅರೋಪ ಹೊರಿಸಿರುವ ಸಿಡಿಲೇಡಿ ಸಮ್ಮುಖದಲ್ಲಿ ಇದೀಗ ಆಕೆ ತಂಗಿದ್ದ ಪಿಜಿಯಲ್ಲಿ ಮಹಜರು ನಡೆಸಿದರು. ಜತೆಗೆ …

Read More »

ಪೋಷಕರನ್ನು ಮಾತನಾಡಿಸಬೇಕು ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ ಯುವತಿ,

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್​ಐಟಿ ವಿಚಾರಣೆ ವೇಳೆ ಸಿಡಿ ಸಂತ್ರಸ್ತೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್​ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಪೋಷಕರನ್ನು ಮಾತನಾಡಿಸಬೇಕು ಎಂದು ಪಟ್ಟು ಹಿಡಿದಿರುವ ಯುವತಿ, ಪೋಷಕರ ಭೇಟಿಗೆ ಅನುಮತಿ ನೀಡುವಂತೆ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ. ಆದರೆ, ಈ ವೇಳೆ ಸಂತ್ರಸ್ತೆಯನ್ನು ಸಮಾಧಾನ ಮಾಡಿರುವ ಎಸ್​ಐಟಿ ಅಧಿಕಾರಿಗಳು ಅನುಮತಿ ನೀಡಲಾಗುವುದಿಲ್ಲ ಎಂದು ಮನವೊಲಿಸುವ ಯತ್ನ ಮಾಡಿದ್ದಾರೆ. ನಾವು …

Read More »

ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಮಾಜಿ ಸಿಎಂ ಸಿದ್ಧರಾಮಯ್ಯ ಈಶ್ವರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಈಶ್ವರಪ್ಪ ಆರೋಪ ಗಂಭೀರ ಸ್ವರೂಪದ್ದು. ರಾಜ್ಯದ ಆಡಳಿತ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಸರ್ಕಾರ ಎಂದು ಕಿಡಿಕಾರಿದ್ದಾರೆ. ಈಶ್ವರಪ್ಪ ಅಕ್ರಮದ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದಾರೆ. ಈಶ್ವರಪ್ಪ ಯಾವುದೇ ಒತ್ತಡಕ್ಕೆ ಮಣಿಯಬಾರದು . ಈಶ್ವರಪ್ಪ ತಮ್ಮ ಮಾತಿಗೆ ಬದ್ಧರಾಗಿ ಉಳಿಯಬೇಕು. ಮೊದಲ …

Read More »

ಇಂದಿನಿಂದ ‘ಯುವರತ್ನ’ನ ಯುವಘರ್ಜನೆ ಶುರು

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಇಂದು (ಏ.1) ಬಿಡುಗಡೆಯಾಗುತ್ತಿದೆ. 2019ರಲ್ಲಿ ಬಂದ ‘ನಟಸಾರ್ವಭೌಮ’ ನಂತರ ಪುನೀತ್ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಎರಡು ವರ್ಷಗಳ ನಂತರ ಅವರ ಚಿತ್ರವೊಂದು ಬಿಡುಗಡೆಯಾಗುತ್ತಿರುವುದರಿಂದ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮತ್ತು ನಿರೀಕ್ಷೆಗಳು ಎರಡೂ ಹೆಚ್ಚಿವೆ. ‘ಯುವರತ್ನ’ ಚಿತ್ರವು ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಆಂಧ್ರ ಮತ್ತು ತೆಲಂಗಾಣಗಳೆರೆಡೂ ಸೇರಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಒಟ್ಟಾರೆ 600 ಚಿತ್ರಮಂದಿರಗಳಿಂದ ಪ್ರತಿದಿನ 2800ಕ್ಕೂ …

Read More »

ರಾಜ್ಯ ಹೆದ್ದಾರಿ ಟೋಲ್ ದರ ಬದಲಾವಣೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯ ಹೆದ್ದಾರಿಗಳ ಟೋಲ್ ದರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಿಲ್ಲ. ಹೊಸ ಆರ್ಥಿಕ ವರ್ಷ ಮೊದಲ ದಿನದಿಂದ ಹೆಚ್ಚಿನ ಹೊರಬೀಳಲಿದೆ ಎಂದುಕೊಂಡವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ. ಒಪ್ಪಂದ ಕಾಲಮಿತಿ ಅನ್ವಯ ಕೆಲವು ಹೆದ್ದಾರಿಗಳ ಟೋಲ್ ದರ ಪರಿಷ್ಕರಣೆಗೆ ಪ್ರಸ್ತಾವನೆಗಳು ಲೋಕೋಪಯೋಗಿ ಇಲಾಖೆಗೆ ಸಲ್ಲಿಕೆಯಾಗಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿದೆ. ಪ್ರಸ್ತಾವನೆ ಸಲ್ಲಿಸಿದ ಸಂಸ್ಥೆಗಳಿಗೆ ಕೆಲವೊಂದು ಸ್ಪಷ್ಟೀಕರಣ ಪತ್ರ ಬರೆಯಲಾಗಿದೆ. ಇದಾದ ಬಳಿಕ ಮತ್ತೊಮ್ಮೆ ಪರಾಮಶಿಸಿ ಪರಿಷ್ಕೃತ ಕೋರಿಕೆಯನ್ನು ಸರ್ಕಾರದ ಮುಂದಿಡಲಾಗುತ್ತದೆ. ಟೋಲ್ …

Read More »

ಸಿ.ಡಿ. ಪ್ರಕರಣ: ವಿಡಿಯೊ ಚಿತ್ರೀಕರಿಸಿದ್ದು ನಾನೇ ಎಂದ ಯುವತಿ

ಬೆಂಗಳೂರು: ಸಿ.ಡಿ.ಯಲ್ಲಿರುವ ವಿಡಿಯೊ ಮೂಲದ ಬಗ್ಗೆ ಸಂತ್ರಸ್ತ ಯುವತಿ ತನಿಖಾಧಿಕಾರಿಗೆ ವಿವರ ನೀಡಿದ್ದಾರೆ. ತಾನೇ ವಿಡಿಯೊ ಚಿತ್ರೀಕರಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಬುಧವಾರ ತನಿಖಾಧಿಕಾರಿ ಎಂ.ಸಿ. ಕವಿತಾ ವಿಚಾರಣೆ ನೀಡಿದ್ದು, ‘ಸಿ.ಡಿ.ಯಲ್ಲಿರುವ ವಿಡಿಯೊ ಅಸಲಿ. ನನಗೆ ಕೆಲಸ ಕೊಡಿಸಲಾಗದು ಎಂದಿದ್ದ ರಮೇಶ ಜಾರಕಿಹೊಳಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಅದರಿಂದ ತುಂಬಾ ನೋವಾಗಿತ್ತು. ಅದಕ್ಕೆ ನಾನೇ, ಇಬ್ಬರು ಸೇರುವ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದೆ. ಮೂಲ ದೃಶ್ಯವನ್ನೂ ನಿಮಗೆ ನೀಡುತ್ತೇನೆ’ ಎಂದು …

Read More »