Breaking News

ಬೆಂಗಳೂರು

ಸರ್ಕಾರ ಬದಲಾದರೂ ಬದಲಾಗದ ಹೆಚ್​ ವಿಶ್ವನಾಥ ಸ್ಥಾನ

ಬೆಂಗಳೂರು: ಸರ್ಕಾರ ಬದಲಾಗಿ ಮೊದಲ ಅಧಿವೇಶನ ಆರಂಭಗೊಂಡಿದ್ದು, ಆಡಳಿತ ಪಕ್ಷ ಪ್ರತಿಪಕ್ಷದ ಸಾಲಿನಲ್ಲಿ ಪ್ರತಿಪಕ್ಷ ಆಡಳಿತ ಪಕ್ಷದ ಸಾಲಿಗೆ ಬಂದರೆ ಹಿರಿಯ ಸದಸ್ಯ ಹೆಚ್ ವಿಶ್ವನಾಥ್ ಸ್ಥಾನ ಮಾತ್ರ ಬದಲಾಗಿಲ್ಲ. ಬಿಜೆಪಿ ಸರ್ಕಾರ ಇದ್ದಾಗಲೂ ಆಡಳಿತ ಪಕ್ಷದ ಸಾಲಿನಲ್ಲಿ ಇದ್ದ ಅವರು ಇದೀಗ ಕಾಂಗ್ರೆಸ್ ಸರ್ಕಾರ ಬಂದಿದ್ದರೂ ಆಡಳಿತ ಪಕ್ಷದ ಸಾಲಿನಲ್ಲೇ ಆಸೀನರಾಗಿದ್ದಾರೆ. ಬಿಜೆಪಿ ಸರ್ಕಾರದ ವೇಳೆ ನಾಮ ನಿರ್ದೇಶನಗೊಂಡಿದ್ದ ಹೆಚ್ ವಿಶ್ವನಾಥ್ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಜೊತೆ …

Read More »

ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.   ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …

Read More »

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಹಶೀಲ್ದಾರ್ ಅಜಿತ್ ಕುಮಾರ್ ರೈ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ನ್ಯಾಯಾಂಗ ಬಂಧನದಲ್ಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10(1)(A)(A) ಮತ್ತು 10(2(A) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಏನಿದು ಪ್ರಕರಣ: ಅಕ್ರಮ ಆಸ್ತಿ …

Read More »

ಮೊಬೈಲ್‌ ಕಳ್ಳರ ಕರಾಮತ್ತಿಗೆ ಕೇಂದ್ರದ CEIR ಕಡಿವಾಣ:

ಬೆಂಗಳೂರು: ದೇಶದಲ್ಲಿ ದಿನೇ ದಿನೆ ಹೆಚ್ಚಾಗುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಹಾಗೂ ಕದ್ದ ಮೊಬೈಲ್‌ಗಳ ದುರ್ಬಳಕೆ ತಪ್ಪಿಸಲು ಕೇಂದ್ರ ಗೃಹ ಇಲಾಖೆ ಹಾಗೂ ದೂರ ಸಂಪರ್ಕ ಇಲಾಖೆಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿದ್ದ ಸೆಂಟ್ರಲ್ ಎಕ್ವಿಟ್‌ಮೆಂಟ್ ಐಡೆಂಟಿಟಿ ರಿಜಿಸ್ಟ್ರರ್ (ಸಿಇಐಆರ್) ಯೋಜನೆ ಫಲಪ್ರದವಾಗುತ್ತಿದೆ.   ಇಂದಿನ ಹೈಟೆಕ್ ಜಮಾನದಲ್ಲಿ ಸ್ಮಾರ್ಟ್‌ಪೋನ್ ಬಳಸುವುದು ಸಾಮಾನ್ಯ. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಗುರಿಯಾಗಿಸಿಕೊಳ್ಳುತ್ತಿರುವ ಖದೀಮರು ಮೊಬೈಲ್ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳುವಾದ ಮೊಬೈಲ್ ದೊರೆತರೂ ದುರ್ಬಳಕೆ …

Read More »

ಬಿಪಿಎಲ್ ಕಾರ್ಡ್‌ದಾರರ ಆಧಾರ್ ಲಿಂಕ್ ಕಡ್ಡಾಯ: ಅನ್ನಭಾಗ್ಯದ ಹಣ ಪಡೆಯುವುದು ಹೇಗೆ ಗೊತ್ತೇ?

ಬೆಂಗಳೂರು : ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಕೊಡಬೇಕಿರುವ 5 ಕೆಜಿ ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್‌ದಾರರಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿಯ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು …

Read More »

5 ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: B.S.Y.

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲವಾದಲ್ಲಿ ಅವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಮೂಗು ಹಿಂಡುವ ಕೆಲಸವನ್ನು ನಾವು ಮಾಡೋಣ. ಉಪವಾಸ ಸತ್ಯಾಗ್ರಹ ಮಾಡುವ ಅವಶ್ಯಕತೆ ಇಲ್ಲ. ಅಧಿವೇಶನ ಆರಂಭದ ದಿನದಿಂದ ನಾವು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡಬೇಕು …

Read More »

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಯಲಕ್ಕೆ 18 ಲಕ್ಷ ರೂ. ವಿದ್ಯುತ್​ ಬಿಲ್, ಕುಲಪತಿ ಶಾಕ್

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಯಾಗಿರುವ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಅನುಮೋದನೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್​ನಲ್ಲಿ (Electricity Bill) ಭಾರೀ ಪ್ರಮಾಣದಲ್ಲಿ ಏರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ದುಪ್ಪಟ್ಟು ವಿದ್ಯುತ್ ಬಿಲ್‌ಗೆ ಗ್ರಾಹಕರು ಹೈರಾಣಾಗಿದ್ದಾರೆ. ಬಿಲ್ ರೀಡರ್ ಯಡವಟ್ಟಿನಿಂದ ಮಂಗಳೂರಿನ (Mangaluru) ಉಳ್ಳಾಲ (Ullala) ನಿವಾಸಿಯೋರ್ವರಿಗೆ ಬರೋಬ್ಬರಿ 7 ಲಕ್ಷದ 71 ಸಾವಿರ ರೂ. ವಿದ್ಯುತ್ ಬಿಲ್ (Electricity Bill) ಬಂದಿತ್ತು. ಅದರಂತೆ ಇದೀಗ ಬೆಳಗಾವಿ ವಿಶ್ವೇಶ್ವರಯ್ಯ …

Read More »

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …

Read More »

ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ

ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ. ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್‌ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ …

Read More »

ಪಿಎಸ್‌ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್ : ಉಳಿದ ಅಭ್ಯರ್ಥಿಗಳಿಗೆ ಹೊಸ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 …

Read More »