Breaking News

ಬೆಂಗಳೂರು

ಮನೆ, ಕಟ್ಟಡ ನಿರ್ಮಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ನಗರ ಪ್ರದೇಶದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕವನ್ನು ನಗರಾಭಿವೃದ್ಧಿ ಇಲಾಖೆ ಇಳಿಕೆ ಮಾಡಲು ನಿರ್ಧರಿಸಿದ್ದು ಈ ಸಂಬಂಧ ಮಾರ್ಚ್ 10 ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ದರ ನಿಗದಿಗೆ ಈ ಹಿಂದಿನ ಪದ್ಧತಿಯನ್ನು ಕೈಬಿಡಲು ನಗರಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಆಯಾ ಯೋಜನಾ ಪ್ರದೇಶಗಳಲ್ಲಿನ ಜನಸಂಖ್ಯೆ ಆಧರಿಸಿ ಪರಿಷ್ಕೃತ ದರ ನಿಗದಿ ಮಾಡಲಾಗಿದೆ. ಕಟ್ಟಡದ ಮಾರ್ಗಸೂಚಿ ದರದ ಒಟ್ಟು ಮೌಲ್ಯದ ಶೇಕಡಾ 0.1 ರಿಂದ ಶೇಕಡ 0.5 ರವರೆಗೆ …

Read More »

ಸಿ.ಡಿ.ಪ್ರಕರಣ: ಫೇಸ್‌ಬುಕ್ ಖಾತೆ ಅಳಿಸಿ ನಾಪತ್ತೆ; ಲಕ್ಷಗಟ್ಟಲೆ ಹಣ ವರ್ಗಾವಣೆ

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾದ ಯುವಕ, ತನ್ನ ಫೇಸ್‌ಬುಕ್‌ ಖಾತೆಯನ್ನು ಅಳಿಸಿ ನಾಪತ್ತೆಯಾಗಿದ್ದಾನೆ. ಆತ ಹಾಗೂ ಆತನ ಪರಿಚಯಸ್ಥರ ಖಾತೆಗೆ ಲಕ್ಷಗಟ್ಟಲೆ ಹಣ ವರ್ಗಾವಣೆ ಆಗಿದೆ. ಆತನ ಪತ್ನಿ ಹೆಸರಿನಲ್ಲಿ ಫಾರ್ಚ್ಯೂನರ್‌ ಕಾರು ಸಹ ಬುಕ್ ಆಗಿರುವುದು ಎಸ್‌ಐಟಿ ವಿಚಾರಣೆಯಿಂದ ಗೊತ್ತಾಗಿದೆ. ಸುದ್ದಿವಾಹಿನಿಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದ ಆತ, ಕಳೆದ ವರ್ಷ ಕೆಲಸ ಬಿಟ್ಟಿದ್ದ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತನಾಗಿ ಗುರುತಿಸಿಕೊಂಡಿದ್ದ. ಇದೀಗ ಆತನಿಗಾಗಿ ಎಸ್‌ಐಟಿ ಅಧಿಕಾರಿಗಳು …

Read More »

ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು.

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿಯ ಸಿ.ಡಿ ಕೇಸ್​ ಕ್ಷಣಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ. ಇದಾಗಲೇ ಕೆಲವರನ್ನು ವಿಶೇಷ ತನಿಖಾ ತಂಡದ (ಎಸ್​ಐಟಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಇನ್ನು ಕೆಲವರಿಗಾಗಿ ಜಾಲ ಬೀಸಿದ್ದಾರೆ. ಈ ನಡುವೆಯೇ ಸಿ.ಡಿಯಲ್ಲಿ ಇರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಗೂ ತನಿಖಾಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ. ಘಟನೆಯ ನಂತರದ ಬೆಳವಣಿಗೆಗಳ ಬಳಿಕ ಕಾಣೆಯಾಗಿದ್ದ ಯುವತಿ, ಕೊನೆಗೂ ಸಿಕ್ಕಿದ್ದು, ಆಕೆಯನ್ನು ವಿಚಾರಣೆ ಮಾಡುವ ಸಲುವಾಗಿ ನೋಟಿಸ್​ ಜಾರಿಗೊಳಿಸಲಾಗಿದೆ. …

Read More »

ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. ಸಿಡಿ ಪ್ರಕರಣದ ಕಿಂಗ್ ಪಿನ್ ಪತ್ರಕರ್ತ, ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸಲು ಯೋಜನೆ ರೂಪಿಸಿದ್ದ. ಡೀಲ್ ದುಡ್ಡಲ್ಲಿ ಜಾತ್ರೆ ನಡೆಸಲು ಕೂಡ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.   ಮಹಿಂದ್ರಾ ಕಂಪನಿಯ ಎರಡು ಕಾರ್ ಖರೀದಿಸಲು ಮುಂದಾಗಿದ್ದ ಆತ …

Read More »

ಸಾಹುಕಾರ್ ಸಿಡಿ ಕೇಸ್ – ಯುವತಿಗೆ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. …

Read More »

ನನ್ನ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ನಕಲಿ ಸಿಡಿ ಬಿತ್ತರಗೊಳ್ಳುವಂತೆ ನೋಡಿಕೊಂಡು ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ : ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾ.14- ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಾಚಾತನ ಪತ್ತೆಹಚ್ಚುವ ಸವಾಲು ಎಸ್‍ಐಟಿಗೆ ಎದುರಾಗಿದೆ. ನನ್ನ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ನಕಲಿ ಸಿಡಿ ಬಿತ್ತರಗೊಳ್ಳುವಂತೆ ನೋಡಿಕೊಂಡು ನನ್ನ ರಾಜಕೀಯ ಜೀವನ ಹಾಳು ಮಾಡಿದ್ದಾರೆ ಎನ್ನುವುದು ರಮೇಶ್ ಜಾರಕಿಹೊಳಿ ಅವರ ಆರೋಪವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ವಿಡಿಯೋ ತುಣುಕಿನಲ್ಲಿ ಆ ರೀತಿಯ ಸಿಡಿ ಯಾರು …

Read More »

ಕೆಪಿಸಿಸಿ ಅಧ್ಯಕ್ಷರಿಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು,ಮಾ.14- ಯಾರು ಯಾರನ್ನು ಸಿಲಿಕಿಸಲು ಆಗುವುದಿಲ್ಲ. ಪ್ರಕರಣ ಸಂಬಂಧ ತನಿಖೆಯಾಗಬೇಕು. ಪೊಲೀಸರೇ ಅಂತಿಮ ತೀರ್ಮಾನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿ.ಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲಾಗುತ್ತಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿ ತಾಲ್ಲೂಕಿನ ಮಚ್ಚೆಗ್ರಾಮದಲ್ಲಿ ಸುದ್ದಿಗಾರರೊಂದಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಯಾರು ಯಾರನ್ನೂ ಸಿಲಿಕಿಸಲು ಆಗುವುದಿಲ್ಲ. ಪೊಲೀಸ್ ತನಿಖೆಯಾಗಬೇಕು. ಸತ್ಯಾಂಶ ಹೊರಬರಬೇಕು. ನಾನು ಪದೇ ಪದೇ ಹೇಳೋದು ಅದನ್ನೇ ಎಂದರು. ಸಿ.ಡಿಯಲ್ಲಿದ್ದ ಯುವತಿ ವಿಡಿಯೋ ಹೇಳಿಕೆ …

Read More »

ಸಿಡಿ ಪ್ರಕರಣದಲ್ಲಿ ಇಬ್ಬರು ವಶಕ್ಕೆ, ಎಸ್‍ಐಟಿ ತನಿಖೆ ಚುರುಕು

ಬೆಂಗಳೂರು, ಮಾ.14- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ ಪೊಲೀಸರು ಇಂದು ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸಿಡಿ ಪ್ರಕರಣ ಕುರಿತಂತೆ ಜಾರಕಿಹೊಳಿ ಅವರು ಪೊಲೀಸರಿಗೆ ದೂರು ನೀಡಿರುವುದು ಹಾಗೂ ಯುವತಿ ಸಾಮಾಜಿಕ ಜಾಲತಾಣದಲ್ಲಿ ತದ್ವಿರುದ್ಧ ಹೇಳಿಕೆ ನೀಡಿರುವುದರಿಂದ ತನಿಖೆಯ ವೇಗವನ್ನು ಎಸ್‍ಐಟಿ ಚುರುಕುಗೊಳಿಸಿದೆ.ಸಿಡಿಯಲ್ಲಿದ್ದಾರೆ ಎಂಬ ಯುವತಿಯ ಬಾಯ್‍ಫ್ರೆಂಡ್ ಮತ್ತು ಆತನ ಸ್ನೇಹಿತನನ್ನು ಎಸ್‍ಐಟಿ ಈಗ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ …

Read More »

“ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”

ಬೆಂಗಳೂರು, ಮಾ.14- ಸಾಮಾಜಿಕ ಜಾಲತಾಣಗಳ ವಿಡಿಯೋ ತುಣುಕುಗಳನ್ನಾಧರಿಸಿ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ಜೀವಭಯವಿದೆ, ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ವ್ಯಕ್ತಿ ತಮಗಾದ ಅನ್ಯಾಯದ ವಿರುದ್ಧ ದೂರು ನೀಡಬೇಕಾದರೆ …

Read More »

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ..?

ಬೆಂಗಳೂರು,ಮಾ.14- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಈವರೆಗೂ ಯಾವುದೇ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಸದ್ಯಕ್ಕೆ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ …

Read More »