Breaking News

ಬೆಂಗಳೂರು

ಒಕ್ಕಲಿಗರ ಮೀಸಲಾತಿಗಾಗಿ ಬೀದಿಗಿಳಿದು ಹೋರಾಡಲ್ಲ : ನಿರ್ಮಲಾನಂದನಾಥ ಶ್ರೀ

ಬೆಂಗಳೂರು,ಮಾ.2- ನಮ್ಮ ಸಮುದಾಯದ ಬಡವರ ಅಭಿವೃದ್ಧಿಗಾಗಿ ಮೀಸಲಾತಿ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಹೊರತು ಬೀದಿಗಿಳಿದು ಹೋರಾಟ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಕುವೆಂಪು ಸಭಾಂಗಣದಲ್ಲಿ ಒಕ್ಕಲಿಗರ ಮೀಸಲಾತಿ-ಸಮುದಾಯದ ಜೀವಶಕ್ತಿ ಕುರಿತು ನಡೆದ ಬೃಹತ್ ಸಭೆಯಲ್ಲಿ ಶ್ರೀಗಳು ಮಾತನಾಡಿದರು. ನಮ್ಮದು ಸುಸಂಸ್ಕøತ ಮತ್ತು ನಾಗರಿಕ ಪ್ರಜ್ಞೆ ಇರುವ ಸಮುದಾಯ. ಬೀದಿಗಿಳಿದು …

Read More »

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶೇ.70ರಷ್ಟು ಪಠ್ಯಕ್ರಮದ ಆಧಾರದಲ್ಲೇ ನಡೆಯಲಿದೆ. ಆದರೆ ನೀಟ್‌ ಬರೆದು ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳಿಗೆ ಸೇರಬೇಕೆಂದಿರುವ ವಿದ್ಯಾರ್ಥಿಗಳು ಶತ ಪ್ರತಿಶತ ಪಠ್ಯವನ್ನು ಅಧ್ಯಯನ ಮಾಡಬೇಕಾಗಿದೆ. ರಾಜ್ಯ ಸರಕಾರ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಪಿಯುಸಿಗೆ ಶೇ. 30ರಷ್ಟು ಪಠ್ಯ ಕಡಿತ ಮಾಡಿದ್ದರೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ …

Read More »

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.74 ಕೋಟಿ ಮೌಲ್ಯದ 207 ಐಫೋನ್ ವಶ

ಬೆಂಗಳೂರು:ಯುಎಸ್ ದಂಪತಿಯಿಂದ ಅಪಾರ ಮೊತ್ತದ 207 ಐಫೋನ್ ಗಳನ್ನು ವಶಪಡಿಸಿಕೊಂಡಿರವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು. ಈವರೆಗೂ ವಶಪಡಿಸಿಕೊಂಡಿರುವ ಫೋನ್ ಸಂಬಂಧಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಪ್ರಕರಣ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಫೋನ್ಗಳು ಐಫೋನ್ 12 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಮಾದರಿಗಳಾಗಿದ್ದವು ಮತ್ತು ಅವುಗಳ ಒಟ್ಟು ಮೌಲ್ಯ 2, 74,19,400 ರೂ. ಎಂದು ಹೇಳಲಾಗುತ್ತಿದೆ. ಅಷ್ಟು ಮಾತ್ರವಲ್ಲದೆ, ರಸ್ತೆ ಮೂಲಕ ಹೈದರಾಬಾದ್‌ಗೆ ಸಾಗಿಸಲು ವಿಮಾನ …

Read More »

ಇಂದು ಮತ್ತೆ ಅಡುಗೆ ಅನಿಲ ದರದಲ್ಲಿ 25 ರೂ. ಏರಿಕೆ..!

ಬೆಂಗಳೂರು,ಮಾ.1-ಕಳೆದ ಎರಡು ತಿಂಗಳಿನಿಂದ ಸತತವಾಗಿ ಆರು ಬಾರಿ ಅಡುಗೆ ಅನಿಲ ದರ ಏರಿಕೆಯಾಗಿದೆ. ಇಂದು ಮತ್ತೆ 25 ರೂ. ದರ ಹೆಚ್ಚಳವಾಗಿದ್ದು ಇದರಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಇಂದು ಬೆಳಗ್ಗೆ ದರ ಏರಿಕೆ ಬಳಿಕ 14.2 ಕೆಜಿ ಸಿಲಿಂಡರ್‍ನ ದರ 822 ರೂ.ಆಗಿದೆ. ಎಲ್‍ಪಿಜಿ ದರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಪೆಟ್ರೋಲ್ ಡೀಸೆಲ್ ದರದ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಗ್ಯಾಸ್ ಸಿಲಿಂಡರ್‍ನ ಬೆಲೆ ಏರಿಕೆ ತೀವ್ರ ಆಘಾತ ಮೂಡಿಸಿದೆ. ಅಡುಗೆ …

Read More »

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು,ಮಾ.1- ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಇವರಿಗೆ ಪಿಂಚಣಿ ಮತ್ತು ವೈದ್ಯಕೀಯ ಸವಲತ್ತನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿ.ಆರ್.ಶಿವಶಂಕರ್, ಬಿ.ನಾಗರತ್ನ ಒತ್ತಾಯಿಸಿದರು. ನಿವೃತ್ತ ಕಾರ್ಯಕರ್ತೆಯರಿಗೆ ಹಿಂದೆ ನೀಡುತ್ತಿದ್ದ ಇಡಿಗಂಟನ್ನು ನಿಲ್ಲಿಸಲಾಗಿದೆ. ಅವರಿಗೆ ನಿವೃತ್ತ ವೇತನವನ್ನೂ ನೀಡುತ್ತಿಲ್ಲ. ಈ ಕೂಡಲೇ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿದರು. …

Read More »

ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿ

ಬೆಂಗಳೂರು: ಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚುನಾವಣಾ ರ್ಯಾಲಿಗಳಿಗೆ ಕಾರ್ಯತಂತ್ರ ರೂಪಿಸುವುದರಿಂದ ಹಿಡಿದು ಸೀಟು ಹಂಚಿಕೆ, ರ್ಯಾಲಿಗಳನ್ನು ಆಯೋಜಿಸುವ ಬಗ್ಗೆ ಮತ್ತು ಸಾರ್ವಜನಿಕ ಸಮಾವೇಶಗಳನ್ನು ನಿಗದಿಪಡಿಸುವ ಕುರಿತು ಪಕ್ಷದಲ್ಲಿ ಕಾರ್ಯನಿರತರಾಗಿದ್ದಾರೆ. ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹರಿಹಾಯುತ್ತಿದ್ದರೆ, ತಮಿಳು ನಾಡಿನ ವಿಧಾನ ಸಭೆ ಚುನಾವಣೆಯ ಪ್ರಚಾರದ ಉಸ್ತುವಾರಿಯನ್ನು …

Read More »

ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ…?

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ ವಿವಿಧ ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರಕ್ಕೆ ನೀಡಿದ್ದ ಡೆಡ್ಲೈನ್ ಮುಗಿಯುತ್ತಿದ್ದಂತೆ ನೌಕರರು ಮತ್ತೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಗರಂ ಆಗಿದ್ದು ಮುಷ್ಕರಕ್ಕೆ ಮುಂದಾಗಿದ್ದಾರೆ. ಸಾರಿಗೆ …

Read More »

ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!

ಬೆಂಗಳೂರು : ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಇ ಮೇಲ್ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಶಂಕರ್ ಬಿದರಿ ಅವರ ಇ ಮೇಲ್ ಐಡಿಯನ್ನು ಹ್ಯಾಕ್ ಮಾಡಿ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಇದನ್ನು ನಂಬಿದ ಬಿದರಿ ಅವರ ಸ್ನೇಹಿತರೊಬ್ಬರು 25 ಸಾವಿರ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಿದ ಬಳಿಕ ಶಂಕರ್ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಹೊರಟ್ಟಿಯವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 …

Read More »